ಬೆಂಗಳೂರು : ಸದ್ಯ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಹಗರಣಗಳು ನಡೆದಿದ್ದು, ವಿಪಕ್ಷಗಳಿಗೆ ಇವೆ ಪ್ರಮುಖ ಅಸ್ತ್ರವಾಗಿವೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಲ್ಲಾ ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತಿವೆ. ಇದರ ಬೆನ್ನಲ್ಲೇ ಬಿಜೆಪಿಯಲ್ಲಿ ಪ್ರಮುಖ ಬೆಳವಣಿಗೆ ನಡೆದಿದ್ದು, ವಿಪಕ್ಷ ನಾಯಕ ಆರ್ ಅಶೋಕ್ ದೆಹಲಿ ಪ್ರವಾಸ ಕೈಗೊಂಡ ಬೆನ್ನಲ್ಲೇ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಹ ದೆಹಲಿಗೆ ತೆರಳಿದ್ದಾರೆ.
ಹೌದು ನವದೆಹಲಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ತೆರಳಿದ್ದಾರರೆ. ವಿಪಕ್ಷ ನಾಯಕ ಆರ್ ಅಶೋಕ್ ದೆಹಲಿ ಪ್ರವಾಸ ಬೆನ್ನಲ್ಲೇ, ಬಿವೈ ವಿಜಯೇಂದ್ರ ದೆಹಲಿಗೆ ತೆರಳಿದ್ದಾರೆ. ಒಂದೇ ದಿನ ಇಬ್ಬರು ಬಿಜೆಪಿ ನಾಯಕರು ದೆಹಲಿ ಪ್ರವಾಸ ಕೈಗೊಂಡಿದ್ದಾರೆ.ಹಾಗಾಗಿ ಶೀಘ್ರದಲ್ಲೇ ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಒಂದೇ ದಿನ ರಾಜ್ಯದ ಇಬ್ಬರು ಬಿಜೆಪಿ ನಾಯಕರು ದೆಹಲಿ ಪ್ರವಾಸ ಕೈಗೊಂಡಿರುವುದು ತೀವ್ರ ಕುತೂಹಲ ಕೆರಳಿಸಿದೆ.