Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಸಾರ್ವಜನಿಕರೇ ಎಚ್ಚರ : ಎಕ್ಸ್‌ ಪೈರಿ ಡೇಟ್ ಮುಗಿದ ನಂತರ ಈ 10 ಆಹಾರಗಳನ್ನು ಅಪ್ಪಿತಪ್ಪಿಯೂ ತಿನ್ನಬೇಡಿ.!

​ಹಾರ್ಮುಜ್‌ನಲ್ಲಿ ಉದ್ವಿಗ್ನತೆ: ಸಾಗರ ಸಂಚಾರಕ್ಕೆ ಬೆದರಿಕೆಯಾಗಿದ್ದ ಇರಾನ್‌ನ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕ ಸೇನೆ!

ಕದನ ವಿರಾಮದ ನಡುವೆಯೂ, ವಶಪಡಿಸಿಕೊಂಡ ಇರಾನ್ ಹಣವನ್ನು ಗಲ್ಫ್ ಮಿತ್ರರಾಷ್ಟ್ರಗಳ ಪುನರ್ನಿರ್ಮಾಣಕ್ಕೆ ಬಳಸಲು ಅಮೇರಿಕಾ ಯೋಜನೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಇಂದು ಕರ್ನಾಟಕದ ಎರಡು ಕ್ಷೇತ್ರಗಳು ಸೇರಿ 5 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟ
KARNATAKA

BIG NEWS: ಇಂದು ಕರ್ನಾಟಕದ ಎರಡು ಕ್ಷೇತ್ರಗಳು ಸೇರಿ 5 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟ

By kannadanewsnow57

ನವದೆಹಲಿ: ದೇಶದ ರಾಜಕೀಯ ದಿಕ್ಸೂಚಿ ಎಂದೇ ಭಾವಿಸಲಾಗಿರುವ ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆ ಚುನಾವಣೆಗಳ ಮತ ಎಣಿಕೆ ಇಂದು (ಸೋಮವಾರ) ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿದೆ. ಮಧ್ಯಾಹ್ನ ಅಥವಾ ಸಂಜೆಯ ಹೊತ್ತಿಗೆ ಸಂಪೂರ್ಣ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ.

ರಾಜ್ಯವಾರು ಕುತೂಹಲದ ಅಂಶಗಳು:
ಪಶ್ಚಿಮ ಬಂಗಾಳ: ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯನ್ನು ಬಿಜೆಪಿ ಭೇದಿಸುತ್ತದೆಯೇ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇಲ್ಲಿ ಒಟ್ಟು 294 ಸ್ಥಾನಗಳಿದ್ದು, ಬಹುಮತಕ್ಕೆ 148 ಸ್ಥಾನಗಳ ಅಗತ್ಯವಿದೆ.

ತಮಿಳುನಾಡು: ಸ್ಟಾಲಿನ್ ನೇತೃತ್ವದ ಡಿಎಂಕೆ ಮೈತ್ರಿಗೆ ಪಳನಿಸ್ವಾಮಿ ಹಾಗೂ ವಿಜಯ್ ಅವರ ಪಕ್ಷಗಳು ಹೇಗೆ ಪೈಪೋಟಿ ನೀಡಲಿವೆ ಎಂಬುದು ಕುತೂಹಲ ಮೂಡಿಸಿದೆ. ಒಟ್ಟು 234 ಸ್ಥಾನಗಳಲ್ಲಿ ಬಹುಮತಕ್ಕೆ 118 ಸ್ಥಾನಗಳು ಬೇಕು.

ಕೇರಳ: ಎಲ್‌ಡಿಎಫ್, ಯುಡಿಎಫ್ ಮತ್ತು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. 140 ಸ್ಥಾನಗಳಲ್ಲಿ ಅಧಿಕಾರ ಹಿಡಿಯಲು 71 ಸ್ಥಾನಗಳ ಅವಶ್ಯಕತೆಯಿದೆ.

ಅಸ್ಸಾಂ: ಬಿಜೆಪಿ ಇಲ್ಲಿ ಸತತ ಮೂರನೇ ಬಾರಿಗೆ ಗೆಲುವಿನ ನಗೆ ಬೀರಲು ಸಜ್ಜಾಗಿದ್ದರೆ, ಕಾಂಗ್ರೆಸ್ ಅಧಿಕಾರ ಕಸಿದುಕೊಳ್ಳುವ ತವಕದಲ್ಲಿದೆ. 126 ಸ್ಥಾನಗಳಲ್ಲಿ 64 ಸ್ಥಾನ ಗೆದ್ದವರು ಬಹುಮತ ಪಡೆಯಲಿದ್ದಾರೆ.

ಪುದುಚೇರಿ: ಇಲ್ಲಿ ರಂಗಸ್ವಾಮಿ ನೇತೃತ್ವದ ಮೈತ್ರಿಕೂಟ ಮತ್ತು ಇಂಡಿಯಾ ಮೈತ್ರಿಕೂಟದ ನಡುವೆ ಹಣಾಹಣಿ ಇದ್ದು, ಒಟ್ಟು 30 ಸ್ಥಾನಗಳಲ್ಲಿ 16 ಸ್ಥಾನಗಳ ಬಹುಮತ ಬೇಕಾಗಿದೆ.

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ: ಯಾರ ಮಡಿಲಿಗೆ ಜಯ?
ರಾಜ್ಯದ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆಯೂ ಇಂದು ನಡೆಯಲಿದೆ.

ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಬೆಳಗ್ಗೆ 8 ರಿಂದ ಮತ ಎಣಿಕೆ ಆರಂಭವಾಗಲಿದೆ. ಮಧ್ಯಾಹ್ನ 12 ಗಂಟೆಯ ವೇಳೆಗೆ ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ.

ಎಣಿಕಾ ಕೇಂದ್ರ: ದಾವಣಗೆರೆ ಜಿಲ್ಲೆಯ ಮತಗಳ ಎಣಿಕೆ ಡಿ.ಆರ್.ಆರ್. ವಿದ್ಯಾಸಂಸ್ಥೆಯಲ್ಲಿ ಹಾಗೂ ಬಾಗಲಕೋಟೆ ಕ್ಷೇತ್ರದ ಮತಗಳ ಎಣಿಕೆ ನಗರದ ತೋಟಗಾರಿಕೆ ವಿವಿಯಲ್ಲಿ ನಡೆಯಲಿದೆ.

ಭದ್ರತೆ: ಮತ ಎಣಿಕಾ ಕೇಂದ್ರಗಳ ಸುತ್ತಮುತ್ತ 100 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

BIG NEWS: Assembly election results of 5 states including two constituencies of Karnataka announced today
Share. Facebook Twitter LinkedIn WhatsApp Email

Related Posts

ಸಾರ್ವಜನಿಕರಿಗೆ ಜೀರೋ ಟ್ರಾಫಿಕ್ ತೊಂದರೆ ತಪ್ಪಿಸಲು ಮೆಟ್ರೋ ಮೊರೆ ಹೋದ ಸಿಎಂ ಡಿಕೆಶಿ : ಇಂದು ನಮ್ಮ ಮೆಟ್ರೋದಲ್ಲಿ ಪ್ರಯಾಣ

1 Min Read

BIG NEWS : ರಾಜ್ಯದ ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ ಪ್ರಕ್ರಿಯೆಗೆ ಸರ್ಕಾರ ಮಹತ್ವದ ಆದೇಶ

1 Min Read

ಹುಟ್ಟಿದ ದಿನಾಂಕದಲ್ಲಿದೆ ಮಗುವಿನ ಭವಿಷ್ಯ: ನಿಮ್ಮ ಮಗು ಎಷ್ಟು ಜೀನಿಯಸ್ ಅಂತ ಜಸ್ಟ್ ಹೀಗೆ ತಿಳಿಯಿರಿ!

2 Mins Read
Recent News

ALERT : ಸಾರ್ವಜನಿಕರೇ ಎಚ್ಚರ : ಎಕ್ಸ್‌ ಪೈರಿ ಡೇಟ್ ಮುಗಿದ ನಂತರ ಈ 10 ಆಹಾರಗಳನ್ನು ಅಪ್ಪಿತಪ್ಪಿಯೂ ತಿನ್ನಬೇಡಿ.!

​ಹಾರ್ಮುಜ್‌ನಲ್ಲಿ ಉದ್ವಿಗ್ನತೆ: ಸಾಗರ ಸಂಚಾರಕ್ಕೆ ಬೆದರಿಕೆಯಾಗಿದ್ದ ಇರಾನ್‌ನ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕ ಸೇನೆ!

ಕದನ ವಿರಾಮದ ನಡುವೆಯೂ, ವಶಪಡಿಸಿಕೊಂಡ ಇರಾನ್ ಹಣವನ್ನು ಗಲ್ಫ್ ಮಿತ್ರರಾಷ್ಟ್ರಗಳ ಪುನರ್ನಿರ್ಮಾಣಕ್ಕೆ ಬಳಸಲು ಅಮೇರಿಕಾ ಯೋಜನೆ!

BIG NEWS : ಗ್ರಾಹಕರಿಗೆ ಗುಡ್ ನ್ಯೂಸ್ : `ಅಡುಗೆ ಎಣ್ಣೆ ಪ್ಯಾಕೇಜಿಂಗ್’ ಗಾತ್ರದಲ್ಲಿ ಏಕರೂಪತೆ ಕಡ್ಡಾಯ!

State News
KARNATAKA

ಸಾರ್ವಜನಿಕರಿಗೆ ಜೀರೋ ಟ್ರಾಫಿಕ್ ತೊಂದರೆ ತಪ್ಪಿಸಲು ಮೆಟ್ರೋ ಮೊರೆ ಹೋದ ಸಿಎಂ ಡಿಕೆಶಿ : ಇಂದು ನಮ್ಮ ಮೆಟ್ರೋದಲ್ಲಿ ಪ್ರಯಾಣ

By kannadanewsnow57 KARNATAKA 1 Min Read

ಬೆಂಗಲೂರು : ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ “ಜೀರೋ ಟ್ರಾಫಿಕ್” ಕಾರು ಪ್ರಯಾಣವನ್ನು ತಪ್ಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು…

BIG NEWS : ರಾಜ್ಯದ ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ ಪ್ರಕ್ರಿಯೆಗೆ ಸರ್ಕಾರ ಮಹತ್ವದ ಆದೇಶ

ಹುಟ್ಟಿದ ದಿನಾಂಕದಲ್ಲಿದೆ ಮಗುವಿನ ಭವಿಷ್ಯ: ನಿಮ್ಮ ಮಗು ಎಷ್ಟು ಜೀನಿಯಸ್ ಅಂತ ಜಸ್ಟ್ ಹೀಗೆ ತಿಳಿಯಿರಿ!

ರಾಜ್ಯದ ಜನತೆಯ ಗಮನಕ್ಕೆ : ‘ಬಾಪೂಜಿ ಸೇವಾ ಕೇಂದ್ರ’ಗಳಲ್ಲಿ ಯಾವ ಸೇವೆಗೆ ಎಷ್ಟು ಹಣ? ಇಲ್ಲಿದೆ ಸಂಪೂರ್ಣ ಮಾಹಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.