Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಸುಗಮ ವ್ಯಾಪಾರ ಮತ್ತು ಜೀವನದಷ್ಟೇ ಸುಗಮ ನ್ಯಾಯವೂ ಅತ್ಯಗತ್ಯ’: ಪ್ರಧಾನಿ ನರೇಂದ್ರ ಮೋದಿ

09/11/2025 11:07 AM

BREAKING : ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ರ್‍ಯಾಗಿಂಗ್ : ಬಾಲಕನ ಮರ್ಮಾಂಗಕ್ಕೆ ಒದ್ದು ಮೂವರು ಬಾಲಕರಿಂದ ಹಲ್ಲೆ

09/11/2025 11:07 AM

SHOCKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಲಾರಿಯಲ್ಲೇ ಮೃತಪಟ್ಟ ಚಾಲಕ.!

09/11/2025 11:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬಳ್ಳಾರಿ ಜಿಲ್ಲೆಯಲ್ಲಿ ‘ಮೊಹರಂ’ ಹಬ್ಬ ನಿಷೇಧ, ಪ್ರತಿಬಂಧಕಾಜ್ಞೆ ಜಾರಿ.!
KARNATAKA

BIG NEWS : ಬಳ್ಳಾರಿ ಜಿಲ್ಲೆಯಲ್ಲಿ ‘ಮೊಹರಂ’ ಹಬ್ಬ ನಿಷೇಧ, ಪ್ರತಿಬಂಧಕಾಜ್ಞೆ ಜಾರಿ.!

By kannadanewsnow5728/06/2025 9:29 AM

ಬಳ್ಳಾರಿ : ಜಿಲ್ಲೆಯಾದ್ಯಾಂತ ಜೂನ್ 27 ರಿಂದ ಜುಲೈ 07 ರವರೆಗೆ ಜರುಗುವ ಮೊಹರಂ ಹಬ್ಬದ ಆಚರಣೆಯನ್ನು ಜಿಲ್ಲೆಯ ವಿವಿಧ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿಷೇಧಿಸಿ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶ ಹೊರಡಿಸಿದ್ದಾರೆ.

ಮೊಹರಂ ಹಬ್ಬದ ಆಚರಣೆಯ ಸಂದರ್ಭದಲ್ಲಿ ವಿವಿಧ ತಾಲ್ಲೂಕುಗಳ ಕೆಲ ಗ್ರಾಮಗಳಲ್ಲಿ ವೈಶಮ್ಯ ಇರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಮೊಹರಂ ಆಚರಿಸುವ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯಸ್ಥೆಗೆ ಧಕ್ಕೆ ಉಂಟಾಗುವ ಬಗ್ಗೆ ವರದಿಗಳು ಇರುವುದರಿಂದ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದ್ದು, ಪೊಲೀಸ್ ಬಂದೋಬಸ್ತ್ ಪರಿಣಾಮಕಾರಿಯಾಗಿ ಜಾರಿಗೆ ತರಲು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35 (ಎ) (ಬಿ) (ಡಿ) (ಇ) ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿಗಳು, ಜೂನ್ 27 ರಿಂದ ಜುಲೈ 07 ರವರೆಗೆ ಆಚರಿಸಲ್ಪಡುವ ಮೊಹರಂ ಹಬ್ಬವನ್ನು ಜಿಲ್ಲೆಯ ವಿವಿಧ ತಾಲ್ಲೂಕುಗಳ ಕೆಲ ಗ್ರಾಮಗಳಲ್ಲಿ ನಿಷೇಧಿಸಲಾಗಿದೆ. ಈ ಸಂದರ್ಭದಲ್ಲಿ ಸಾರ್ವಜನಿಕವಾಗಿ ಜನರು ಗುಂಪು ಸೇರದಂತೆ ಮೆರವಣಿಗೆ ನಡೆಸದಂತೆ ಮತ್ತು ಪಂಜಾಗಳನ್ನು ಕೂಡಿಸದಂತೆ ಮೊಹರಂ ಹಬ್ಬವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅವರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

ಮೊಹರಂ ಹಬ್ಬ ನಿಷೇಧಿಸಲ್ಪಟ್ಟ ಗ್ರಾಮಗಳು:

ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ತಾಳೂರು ರಸ್ತೆಯ ಕನ್ನಡ ನಗರ ಮುಖ್ಯ ರಸ್ತೆಯ (ನ್ಯಾಯಾಧೀಶರ ವಸತಿಗೃಹ ಕಾಂಪೌAಡ್ ಪಕ್ಕದಲ್ಲಿ) ಮಹಾನಂದಿಕೊಟ್ಟA ಒಳಗಡೆ.
ಸಿರುಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಸೂಗೂರು, ಮುದೇನೂರು, ಹೀರೆಹಾಳ್, ನಾಡಂಗ, ಬಂಡ್ರಾಳ್, ದೇಶನೂರು, ಕೆ.ಬೆಳಗಲ್, ಅಲಬನೂರು ಗ್ರಾಮಗಳು. ತೆಕ್ಕಲಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ತೆಕ್ಕಲಕೋಟೆ, ಹಳೇಕೋಟೆ, ಉಪ್ಪಾರಹೊಸಳ್ಳಿ, ಉಡೇಗೋಳ, ಅರಳಿಗನೂರು ಗ್ರಾಮಗಳು.
ಸಿರಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಸಿರಿಗೇರಿ, ಕೂರಿಗನೂರು, ತಾಳೂರು, ಕರೂರು ಗ್ರಾಮಗಳು. ಪಿಡಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಸುಂಡಿ ಗ್ರಾಮ.
ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ನಂ.15-ಗೋನಾಳು ಗ್ರಾಮದಲ್ಲಿ ನಿಷೇಧಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ನಿಷೇಧಿಸಲಾದ ಚಟುವಟಿಕೆಗಳು:

ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35(ಎ)ರಡಿ ಶಸ್ತç, ಬಡಿಗೆ, ಬರ್ಚಿ, ಗದೆ, ಬಂದೂಕು, ಚೂರಿ, ಕೋಲು, ಲಾಠಿ ಅಥವಾ ಶರೀರಕ್ಕೆ ಗಾಯ ಮಾಡಲು ಉಪಯೋಗಿಸಬಹುದಾದ ಯಾವುದೇ ವಸ್ತುವನ್ನು ಒಯ್ಯುವುದು. ಯಾವುದೇ ದಾಹಕ(ನಾಶಕಾರಿ) ಪದಾರ್ಥ ಇಲ್ಲವೇ ಸ್ಪೋಟಕ ವಸ್ತು ಒಯ್ಯುವುದು.

ಯಾವುದೇ ವ್ಯಕ್ತಿಗಳ ಭಾವ ಚಿತ್ರಗಳನ್ನು ಅವಮಾನಕಾರ ರೀತಿಯಲ್ಲಿ ಪ್ರದರ್ಶಿಸಬಾರದು. ಬಹಿರಂಗವಾಗಿ ಘೋಷಣೆ ಮಾಡುವುದನ್ನು, ಪದ ಹಾಡುವುದನ್ನು, ವಾದ್ಯ ಬಾರಿಸುವುದನ್ನು, ವ್ಯಾಖ್ಯಾನ ಕೊಡುವುದನ್ನು, ಸನ್ನೆ ಪ್ರದರ್ಶನವನ್ನು, ಆ ಆಫೀಸರರ ಅಭಿಪ್ರಾಯದಲ್ಲಿ ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಯಾವುದೇ ವಸ್ತು ಅಥವಾ ತಯಾರಿ ಪ್ರದರ್ಶನ ಅಥವಾ ಪ್ರಸಾರವನ್ನು ಪ್ರತಿಬಂಧಿಸುವುದು ಹಾಗೂ ಗುಂಪುಗೂಡಿ ಮೆರವಣಿಗೆ ಮಾಡುವುದು.

ಈ ಪ್ರತಿಬಂಧಕ ಆಜ್ಞೆಗೆ ವಿರುದ್ಧವಾಗಿ ಯಾರೊಬ್ಬರು ವರ್ತಿಸಿದರೆ, ಅವರು ಯಾವುದೇ ಪೊಲೀಸ್ ಅಧಿಕಾರಿಗಳಿಂದ ಇಂತಹ ವಸುಗಳನ್ನು ವಶ ಪಡಿಸಿಕೊಳ್ಳಲು ಪಾತ್ರರಾಗುವರು ಹಾಗೂ ಈ ರೀತಿ ಪಡೆಯಲ್ಪಟ್ಟ ಪದಾರ್ಥ ಸರ್ಕಾರಕ್ಕೆ ಜಮಾ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

BIG NEWS: Ban on 'Muharram' festival in Bellary district prohibitory order imposed!
Share. Facebook Twitter LinkedIn WhatsApp Email

Related Posts

BREAKING : ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ರ್‍ಯಾಗಿಂಗ್ : ಬಾಲಕನ ಮರ್ಮಾಂಗಕ್ಕೆ ಒದ್ದು ಮೂವರು ಬಾಲಕರಿಂದ ಹಲ್ಲೆ

09/11/2025 11:07 AM1 Min Read

SHOCKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಲಾರಿಯಲ್ಲೇ ಮೃತಪಟ್ಟ ಚಾಲಕ.!

09/11/2025 11:01 AM1 Min Read

BREAKING : ಹಾರೋಬೆಲೆ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆಗಳು ಸಾವು!

09/11/2025 10:57 AM1 Min Read
Recent News

‘ಸುಗಮ ವ್ಯಾಪಾರ ಮತ್ತು ಜೀವನದಷ್ಟೇ ಸುಗಮ ನ್ಯಾಯವೂ ಅತ್ಯಗತ್ಯ’: ಪ್ರಧಾನಿ ನರೇಂದ್ರ ಮೋದಿ

09/11/2025 11:07 AM

BREAKING : ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ರ್‍ಯಾಗಿಂಗ್ : ಬಾಲಕನ ಮರ್ಮಾಂಗಕ್ಕೆ ಒದ್ದು ಮೂವರು ಬಾಲಕರಿಂದ ಹಲ್ಲೆ

09/11/2025 11:07 AM

SHOCKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಲಾರಿಯಲ್ಲೇ ಮೃತಪಟ್ಟ ಚಾಲಕ.!

09/11/2025 11:01 AM

BREAKING : ಹಾರೋಬೆಲೆ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆಗಳು ಸಾವು!

09/11/2025 10:57 AM
State News
KARNATAKA

BREAKING : ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ರ್‍ಯಾಗಿಂಗ್ : ಬಾಲಕನ ಮರ್ಮಾಂಗಕ್ಕೆ ಒದ್ದು ಮೂವರು ಬಾಲಕರಿಂದ ಹಲ್ಲೆ

By kannadanewsnow0509/11/2025 11:07 AM KARNATAKA 1 Min Read

ಮೈಸೂರು : ಮೈಸೂರಿನ ಶಾಲೆಯಲ್ಲಿ ಬಾಲಕರಿಂದ ರ್‍ಯಾಗಿಂಗ್ ನಡೆಸಿರುವ ಘಟನೆ ವರದಿಯಾಗಿದ್ದು, 13 ವರ್ಷದ ಬಾಲಕನ ಮೇಲೆ ಮೂವರಿಂದ ಹಾಲೆ…

SHOCKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಲಾರಿಯಲ್ಲೇ ಮೃತಪಟ್ಟ ಚಾಲಕ.!

09/11/2025 11:01 AM

BREAKING : ಹಾರೋಬೆಲೆ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆಗಳು ಸಾವು!

09/11/2025 10:57 AM

ಮಹಿಳಾ ಉದ್ಯೋಗಿ ದತ್ತು ಪುತ್ರನಿಗೆ, ಅನುಕಂಪದ ಆಧಾರದ ಮೇಲೆ ಉದ್ಯೋಗ ಕಲ್ಪಿಸಿ : ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

09/11/2025 10:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.