Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಉತ್ತರಖಂಡ್’ನ ಡೆಹ್ರಾಡೂನ್’ನಲ್ಲಿ ಮೇಘಸ್ಫೋಟ ; ಕನಿಷ್ಠ 15 ಮಂದಿ ಸಾವು, ಹಲವರು ನಾಪತ್ತೆ

16/09/2025 10:09 PM

BREAKING : ‘ಮುಡಾ’ ಹಗರಣ : ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಆಯುಕ್ತ ದಿನೇಶ್ ಕುಮಾರ್ ‘ED’ ವಶಕ್ಕೆ

16/09/2025 9:42 PM

Good News ; ‘ಫ್ಯಾಟಿ ಲಿವರ್’ ಸಮಸ್ಯೆಗೆ ಈ ‘ವಿಟಮಿನ್’ ಮದ್ದು ; ಸಂಶೋಧನೆಯಿಂದ ಅದ್ಭುತ ಪರಿಹಾರ!

16/09/2025 9:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೆಂಗಳೂರಿಗರೇ ಗಮನಿಸಿ : ಒಂಟಿ ಮನೆ ನಿರ್ಮಾಣಕ್ಕಾಗಿ ಫೆ. 25ರ ಒಳಗಾಗಿ ಅರ್ಜಿ ಸಲ್ಲಿಸಿ : ತುಷಾರ್ ಗಿರಿನಾಥ್
KARNATAKA

BIG NEWS : ಬೆಂಗಳೂರಿಗರೇ ಗಮನಿಸಿ : ಒಂಟಿ ಮನೆ ನಿರ್ಮಾಣಕ್ಕಾಗಿ ಫೆ. 25ರ ಒಳಗಾಗಿ ಅರ್ಜಿ ಸಲ್ಲಿಸಿ : ತುಷಾರ್ ಗಿರಿನಾಥ್

By kannadanewsnow0519/02/2025 10:42 AM

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂಟಿ ಮನೆ ನಿರ್ಮಾಣಕ್ಕಾಗಿ 25ನೇ ಫೆಬ್ರವರಿ 2025ರ ಒಳಗಾಗಿ ಅರ್ಜಿ ಸಲ್ಲಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ನಾಗರಿಕರಲ್ಲಿ ಮನವಿ ಮಾಡಿದರು.

ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮ’ದಲ್ಲಿ ಸಾರ್ವಜನಿಕರಿಂದ ಬಂದ ದೂರುಗಳಿಗೆ ಸ್ಪಂದಿಸುವ ವೇಳೆ, 30ಕ್ಕೂ ಹೆಚ್ಚು ನಾಗರಿಕರು ಒಂಟಿ ಮನೆ ಯೋಜನೆಯಲ್ಲಿ ಅನುದಾನ ಒದಗಿಸಲು ಮನವಿ ಮಾಡಿದರು.

ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಯಿಸಿ, 2022 ರಿಂದ 24 ರವರೆಗೆ ಒಂಟಿ ಮನೆಗಾಗಿ ಬಂದಿರುವ ಅರ್ಜಿಗಳನ್ನು ಪರಿಶೀಲನೆ ನಡೆಸಲಾಗಿದ್ದು, ಅರ್ಹ ಫಲಾನುಭವಿಗಳಿಗೆ ಶೀಘ್ರ ಅನುದಾನ ಒದಗಿಸಲಾಗುವುದೆಂದು ತಿಳಿಸಿದರು.

ಒಂಟಿ ಮನೆ ನಿರ್ಮಾಣಕ್ಕಾಗಿ ಇದುವರೆಗೆ ಅರ್ಜಿ ಸಲ್ಲಿಸದೇ ಇರುವವರು ಕೂಡಲೆ ಪಾಲಿಕೆ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಪಡೆದು 25ನೇ ಫೆಬ್ರವರಿ 2025ರ ಒಳಗಾಗಿ ಆಯಾ ವಲಯದ ಕಲ್ಯಾಣ ವಿಭಾಗದ ಸಹಾಯಕ ಕಂದಾಯ ಅಧಿಕಾರಿ ಕಛೇರಿಯಲ್ಲಿ ಅರ್ಜಿ ಸಲ್ಲಿಸಬಹುದೆಂದು ತಿಳಿಸಿದರು.

ಸಸಿಗಳಿಗೆ ಸಂಸ್ಕರಣ ನೀರು ಉಪಯೋಗಿಸಲು ಸೂಚನೆ:

ಬೇಸಿಗೆ ಕಾಲ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಿಯಾವಾಕಿ ಅರಣ್ಯದಲ್ಲಿ ನೆಟ್ಟಿರುವ ಸಸಿಗಳಿಗೆ ಜಲಮಂಡಳಿಯ ಸಂಸ್ಕರಣಾ ನೀರನ್ನು ಟ್ಯಾಂಕರ್ ಗಳ ಮೂಲಕ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಯಿತು. ಜೊತೆಗೆ ರಾಯಲ್ ರೆಸಿಡೆನ್ಸಿ ಪಾರ್ಕ್ ಗೆ ತ್ವರಿತವಾಗಿ ಫೆನ್ಸಿಂಗ್ ಮಾಡಲು ಸೂಚಿಸಲಾಯಿತು.

ಒಳಚರಂಡಿ ದುರಸ್ತಿ ಜವಾಬ್ದಾರಿ ಜಳಮಂಡಳಿಯದ್ದು:

ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಸಿಎಂಸಿ, ಟಿಎಂಸಿ ವ್ಯಾಪ್ತಿಯಲ್ಲಿರುವ ಒಳಚಂಡಿಗಳ ದುರಸ್ತಿ ಕಾಮಗಾರಿಯನ್ನು ಜಲಂಡಳಿಯಿಂದ ಮಾಡಬೇಕಿದೆ. ಈ ಸಂಬಂಧ ಇನ್ನು ಮುಂದೆ ಪಾಲಿಕೆಯಿಂದ ಯಾವುದೇ ಒಳಚರಂಡಿ ದುರಸ್ತಿ ಕಾರ್ಯವನ್ನು ನಡೆಸಬಾರದೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜಕಾಲುವೆ ಮೇಲೆ ಸ್ಲ್ಯಾಬ್ ತೆರವುಗೊಳಿಸಿ:

ಕಾಸಾಗ್ರಾಂಡ್ ಬಳಿ ಬರುವ ರಾಜಕಾಲುವೆ ಮೇಲೆ ಸ್ಲ್ಯಾಬ್ ಅಳವಡಿಸಿದ್ದು, ಅದನ್ನು ತೆರವುಗೊಳಿಸಲು ಮನವಿ ಮಾಡಿದ್ದಕ್ಕೆ ಪ್ರತಿಕ್ರಿಯಿಸಿ, ರಾಜಕಾಲುವೆ ವಿಭಾಗದ ಅಧಿಕಾರಿಗಳು ಸ್ಥಳ ಪರಿಶೀಲಿಸಿ, ರಾಜಕಾಲುವೆ ಮೇಲೆ ಅಳವಡಿಸಿರುವ ಸ್ಲ್ಯಾಬ್ ಗಳನ್ನು ಕೂಡಲೆ ತೆರವುಗೊಳಿಸಬೇಕು. ತೆರವುಗೊಳಿಸಲು ಅಡ್ಡಪಡಿಸಿದಲ್ಲಿ ಅಂತಹವರ ಮೇಲೆ ಶಿಸ್ತು ಕ್ರಮ ಜರುಗಿಸಲು ಸೂಚನೆ ನೀಡಲಾಯಿತು.

ರಸ್ತೆ ಗುಂಡಿಗಳನ್ನು ಮುಚ್ಚಲು ಸೂಚನೆ:

ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಬರುವ ಪ್ರಮುಖ ರಸ್ತೆ, ವಾರ್ಡ್ ರಸ್ತೆಗಳಲ್ಲಿ ಬರುವ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಸೂಚಿಸಲಾಯಿತು. ಅದಕ್ಕೆ ಮುಖ್ಯ ಅಭಿಯಂತರರು ಪ್ರತಿಕ್ರಿಯಿಸಿ 15 ದಿನಗಳ ಒಳಗಾಗಿ ರಸ್ತೆ ಗುಂಡಿಗಳನ್ನು ಮುಚ್ಚುವುದಾಗಿ ತಿಳಿಸಿದರು.

ರಾಜಕಾಲುವೆ ಕಾಮಗಾರಿ ಪರಿಶೀಲನೆ:

ಹೊಂಗಸಂದ್ರ ಮೆಟ್ರೋ ನಿಲ್ದಾಣದ ಬಳಿ ರಾಜಕಾಲುವೆ ಕಾಮಗಾರಿ ಕುರಿತಂತೆ ಸ್ಥಳ ಪರಿಶೀಲಿಸಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜೊತೆ ಸಮನ್ವಯ ಸಾಧಿಸಿ ಕಾಮಗಾರಿ ಕೈಗೆತ್ತಿಕೊಂಡು ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಾರ್ವಜನಿಕರಿಂದ ಸ್ವೀಕರಿಸಿದ ಪ್ರಮುಖ ಅಹವಾಲುಗಳು:

1. ಕೆಎಸ್‌ಟಿಡಿಸಿ ಸಂಸ್ಕರಣಾ ಘಟಕದ ಬಳಿ ದುರ್ವಾಸನೆ ಹೆಚ್ಚಾಗಿದ್ದು, ಆ ಸಮಸ್ಯೆಯನ್ನು ಬಗೆಹರಿಸಲು ಮನವಿ.

2. ಹೊಸ ಖಾತಾ ಪಡೆಯಲು ಸಮಸ್ಯೆಯಾಗುತ್ತಿದ್ದು, ತ್ವರಿತವಾಗಿ ಇಖಾತಾ ಸಿಗುವಂತೆ ಮಾಡಲು ಮನವಿ.

3. ಹುಳಿಮಾವಿನ ಸೋಮೇಶ್ವರ ಬಡಾವಣೆ ಬಳಿ ಚರಂಡಿಯಲ್ಲಿ ನೀರು ನಿಲ್ಲುತ್ತಿರುವ ಕಾರಣ ಸ್ಥಳೀಯ ನಿವಾಸಿಗಳಿಗೆ ಸಮಸ್ಯೆಯಾಗುತ್ತಿದ್ದು, ಅದನ್ನು ಬಗೆಹರಿಸಲು ಮನವಿ.

4. ಇಬ್ಬಲೂರು ಕೆರೆಯಲ್ಲಿ ಒತ್ತುವರಿಯಾಗಿದ್ದು, ಅದನ್ನು ತೆರವುಗೊಳಿಸಲು ಮನವಿ.

5. ಗುಂಡುತೋಪಿನ ಡಾನ್ ಭಾಸ್ಕೋ ಬಳಿಯ ರಸ್ತೆಯುದ್ದಕ್ಕೂ ಕಸ ಬಿಸಾಡುತ್ತಿದ್ದು, ಅದನ್ನು ಕೂಡಲೆ ತೆರವುಗೊಳಿಸಲು ಮನವಿ.

6. ಮಂಗಮ್ಮನ ಪಾಳ್ಯದ ಬಳಿ ರಾಜಕಾಲುವೆಯಲ್ಲಿ ಹೂಳೆತ್ತಲು ಮನವಿ.

ಈ ವೇಳೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸತೀಶ್ ರೆಡ್ಡಿ, ವಲಯ ಆಯುಕ್ತರಾದ ರಮ್ಯಾ, ವಲಯ ಜಂಟಿ ಆಯುಕ್ತರಾದ ಅಜಿತ್, ಉಪ ಆಯುಕ್ತರಾದ ಡಿ.ಕೆ ಬಾಬು, ಮುಖ್ಯ ಅಭಿಯಂತರರಾದ ಶಶಿಕುಮಾರ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

BREAKING : ‘ಮುಡಾ’ ಹಗರಣ : ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಆಯುಕ್ತ ದಿನೇಶ್ ಕುಮಾರ್ ‘ED’ ವಶಕ್ಕೆ

16/09/2025 9:42 PM1 Min Read

ಚಾಮುಂಡಿ ತಾಯಿಗೆ ಹೂ ಮುಡಿಸಲು ದಲಿತ ಮಹಿಳೆಗೆ ಅವಕಾಶ ಇಲ್ಲ ಎಂಬ ಹೇಳಿಕೆ : ಶಾಸಕ ಯತ್ನಾಳ್ ವಿರುದ್ಧ ‘FIR’ ದಾಖಲು

16/09/2025 9:24 PM1 Min Read

ಚಾಮರಾಜನಗರ : ಶೌಚಾಲಯಕ್ಕೆ ತೆರಳಲು ಅನುಮತಿ ಕೇಳಿದಕ್ಕೆ, ವಿದ್ಯಾರ್ಥಿಗೆ ಮೂರ್ಛೆ ಬರುವ ಹಾಗೆ ಹೊಡೆದ ಶಿಕ್ಷಕಿ

16/09/2025 8:48 PM1 Min Read
Recent News

BREAKING : ಉತ್ತರಖಂಡ್’ನ ಡೆಹ್ರಾಡೂನ್’ನಲ್ಲಿ ಮೇಘಸ್ಫೋಟ ; ಕನಿಷ್ಠ 15 ಮಂದಿ ಸಾವು, ಹಲವರು ನಾಪತ್ತೆ

16/09/2025 10:09 PM

BREAKING : ‘ಮುಡಾ’ ಹಗರಣ : ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಆಯುಕ್ತ ದಿನೇಶ್ ಕುಮಾರ್ ‘ED’ ವಶಕ್ಕೆ

16/09/2025 9:42 PM

Good News ; ‘ಫ್ಯಾಟಿ ಲಿವರ್’ ಸಮಸ್ಯೆಗೆ ಈ ‘ವಿಟಮಿನ್’ ಮದ್ದು ; ಸಂಶೋಧನೆಯಿಂದ ಅದ್ಭುತ ಪರಿಹಾರ!

16/09/2025 9:35 PM

ಚಾಮುಂಡಿ ತಾಯಿಗೆ ಹೂ ಮುಡಿಸಲು ದಲಿತ ಮಹಿಳೆಗೆ ಅವಕಾಶ ಇಲ್ಲ ಎಂಬ ಹೇಳಿಕೆ : ಶಾಸಕ ಯತ್ನಾಳ್ ವಿರುದ್ಧ ‘FIR’ ದಾಖಲು

16/09/2025 9:24 PM
State News
KARNATAKA

BREAKING : ‘ಮುಡಾ’ ಹಗರಣ : ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಆಯುಕ್ತ ದಿನೇಶ್ ಕುಮಾರ್ ‘ED’ ವಶಕ್ಕೆ

By kannadanewsnow0516/09/2025 9:42 PM KARNATAKA 1 Min Read

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಸಿದಂತೆ ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಮಾಜಿ ಆಯುಕ್ತ ದಿನೇಶ್ ಕುಮಾರ್ …

ಚಾಮುಂಡಿ ತಾಯಿಗೆ ಹೂ ಮುಡಿಸಲು ದಲಿತ ಮಹಿಳೆಗೆ ಅವಕಾಶ ಇಲ್ಲ ಎಂಬ ಹೇಳಿಕೆ : ಶಾಸಕ ಯತ್ನಾಳ್ ವಿರುದ್ಧ ‘FIR’ ದಾಖಲು

16/09/2025 9:24 PM

ಚಾಮರಾಜನಗರ : ಶೌಚಾಲಯಕ್ಕೆ ತೆರಳಲು ಅನುಮತಿ ಕೇಳಿದಕ್ಕೆ, ವಿದ್ಯಾರ್ಥಿಗೆ ಮೂರ್ಛೆ ಬರುವ ಹಾಗೆ ಹೊಡೆದ ಶಿಕ್ಷಕಿ

16/09/2025 8:48 PM

BREAKING : ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ದರೋಡೆ : ಮ್ಯಾನೇಜರ್, ಸಿಬ್ಬಂದಿ ಕೈ ಕಾಲು ಕಟ್ಟಿ ನಗದು, ಚಿನ್ನಾಭರಣ ದೋಚಿ ಪರಾರಿ!

16/09/2025 8:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.