Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮೂವರು ಶಂಕಿತ ಉಗ್ರರ ಬಂಧನ ಕೇಸ್ : ‘NIA’ ತನಿಖೆಯಲ್ಲಿ ಮತ್ತಷ್ಟು ಸ್ಪೋಟಕ ವಿಚಾರ ಬಹಿರಂಗ!

11/07/2025 10:25 AM

ALERT : ‘ಚಿಟ್ ಫಂಡ್’ ನಲ್ಲಿ ಹಣ ಹೂಡಿಕೆ ಮಾಡೋಕು ಮುನ್ನ ಎಚ್ಚರ : 500ಕ್ಕೂ ಹೆಚ್ಚು ಜನರಿಗೆ 100 ಕೋಟಿಗೂ ಅಧಿಕ ವಂಚನೆ

11/07/2025 10:13 AM

SHOCKING : ಮಗಳಿಗೆ ಚಿಕಿತ್ಸೆ ಕೊಡಿಸಲಾಗದೇ ಫೇಸ್ ಬುಕ್ ಲೈವ್ ನಲ್ಲೇ ಉದ್ಯಮಿ ಆತ್ಮಹತ್ಯೆ : ವಿಡಿಯೋ ವೈರಲ್ | WATCH VIDEO

11/07/2025 10:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬರೋಬ್ಬರಿ 19,927 ಕೋಟಿ ರೂ.ಗಳ ಬಜೆಟ್ ಮಂಡಿಸಿದ ʻBBMP’ : ಇಲ್ಲಿದೆ ಸಂಪೂರ್ಣ ಮಾಹಿತಿ | BBMP Budget 2025
KARNATAKA

BIG NEWS : ಬರೋಬ್ಬರಿ 19,927 ಕೋಟಿ ರೂ.ಗಳ ಬಜೆಟ್ ಮಂಡಿಸಿದ ʻBBMP’ : ಇಲ್ಲಿದೆ ಸಂಪೂರ್ಣ ಮಾಹಿತಿ | BBMP Budget 2025

By kannadanewsnow5729/03/2025 2:21 PM

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಇಂದು 2025-26ನೇ ಸಾಲಿನ ಬಜೆಟ್ ಮಂಡಿಸಿದ್ದು, ಒಟ್ಟು ಬಜೆಟ್ 19,927.08 ಕೋಟಿ ರೂ.ಗಳಾಗಿದ್ದು, ಮೂಲಸೌಕರ್ಯ, ನಿರ್ವಹಣೆ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ನಿರ್ದೇಶಿಸಲಾಗಿದೆ. ಹಣಕಾಸು ವಿಭಾಗದ ವಿಶೇಷ ಆಯುಕ್ತ ಡಾ.ಹರೀಶ್ ಕುಮಾರ್ ಪ್ರಸಕ್ತ ಸಾಲಿನ ಬಿಬಿಎಂಪಿ ಬಜೆಟ್ ಅನ್ನು ಮಂಡಿಸಿದ್ದಾರೆ.

ವೈದ್ಯಕೀಯ ಮಹಾವಿದ್ಯಾಲಯದ ಸ್ಥಾಪನೆಗೆ ಅಂದಾಜು 633 ಕೋಟಿ ರೂ. ಅಗತ್ಯವಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು. ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ಕೈಗೊಳ್ಳಲು ಎ,ಬಿ,ಸಿ ಕಾರ್ಯಕ್ರಮದಡಿ ಪಾಲಿಕೆ ವ್ಯಾಪ್ತಿಯಲ್ಲಿ 1,80,000 ಕ್ಕೂ ಹೆಚ್ಚು ಲಸಿಕೆಗಳನ್ನು ನೀಡಲಾಗುವುದು. ಪಾಲಿಕೆಯ 6 ವಲಯಗಳಲ್ಲಿ ಪಶು ವೈದ್ಯಕೀಯ ಚಿಕಿತ್ಸಾಲಯಗಳನ್ನು ಪ್ರಾರಂಭಿಸಲಾಗುವುದು.ಬೊಮ್ಮನಹಳ್ಳಿ ಮತ್ತು ಮಹದೇವಪುರ ವಲಯಗಳಲ್ಲಿ ಅಂದಾಜು 7.5 ಕೋಟಿ ರೂ. ವೆಚ್ಚದಲ್ಲಿ ಹೊಸ ಎ, ಬಿ, ಸಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದರು.

ನವೀಕೃತ ತಂತ್ರಜ್ಞಾನ ಬಳಸಿ ಕಸಾಯಿಖಾನೆಗಳನ್ನು 5 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಿಸಲು ಕ್ರಮ ವಹಿಸಲಾಗುವುದು. ಲ್ಲಾ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್ ಅಳವಡಿಸಿಕೊಳ್ಳುವ ಮೂಲಕ ಬೀದಿನಾಯಿಗಳಿಗೆ ಆಹಾರ ನೀಡಲು ಕ್ರಮ ವಹಿಸಲಾಗುವುದು. ಕುಂಬಳಗೋಡು ಮತ್ತು ತಾವರಕೆರೆಯಲ್ಲಿ ಚಿತಾಗಾರಗಳನ್ನು ನಿರ್ಮಿಸಲಾಗುವುದು ಎಂದರು.

ವಿಸ್ತ್ರತ ಯೋಜನಾ ತಯಾರಿಕೆಗೆ ಟೆಂಡರ್ ಆಹ್ವಾನಿಸಲಾಗಿದ್ದು, ಈ ಯೋಜನೆಯಡಿ 19 ಆಸ್ಪತ್ರೆಗಳ ಒಟ್ಟಾರೆ 852 ಹಾಸಿಗೆಗಳನ್ನು 1122 ಹಾಸಿಗೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. 26 ಹೊಸ ಕೇಂದ್ರಗಳಲ್ಲಿ ದಂತ ಚಿಕಿತ್ಸಾ ಸೇವೆಗಳನ್ನು ಒದಗಿಸಲಾಗುವುದು ಎಂದರು.

ಬಿಬಿಎಂಪಿ ವತಿಯಿಂದ ಈಗಾಗಲೇ ನೇರವೇತನ ಪಾವತಿ ಅಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಪೈಕಿ 3673 ಮತ್ತು 11307 ಹುದ್ದೆಗಳಿಗೆ ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಕ್ರಮವಹಿಸಲಾಗಿದೆ.

ಕಂದಾಯ
2024-25ನೇ ಸಾಲಿನಲ್ಲಿ ಸುಮಾರು ರೂ.4900 ಕೋಟಿ ತೆರಿಗೆ ಸಂಗ್ರಹಿಸುವುದರೊಂದಿಗೆ ಸತತ ಎರಡನೇ ವರ್ಷವೂ ಭಾರತದಲ್ಲೇ ಅತಿ ಹೆಚ್ಚು ಆಸ್ತಿ ತೆರಿಗೆ ಸಂಗ್ರಹಿಸಿದೆ..
2025-26ನೇ ಸಾಲಿನಲ್ಲಿ ಆಸ್ತಿ ತೆರಿಗೆ ಮತ್ತು ಇತರೇ ಕಂದಾಯ ಸ್ವೀಕೃತಿ ರೂಪದಲ್ಲಿ ರೂ.5716 ಕೋಟಿ ಆದಾಯ ನಿರೀಕ್ಷಿಸಲಾಗಿದೆ.
ಆಸ್ತಿ ತೆರಿಗೆ ಪಾವತಿಯ ಮುಖ್ಯವಾಹಿನಿಗೆ ಸೇರಲು, ಲಕ್ಷಾಂತರ ಜನರ ಭಾಗವಹಿಸುವಿಕೆಗೆ ಐತಿಹಾಸಿಕ ಅವಕಾಶ ನೀಡಿ, ಪಾಲಿಕೆ ಮತ್ತು ನಾಗರೀಕರಿಬ್ಬರಿಗೂ ಪ್ರಯೋಜನವಾಗುವಂತಹ ಒಂದು ಬಾರಿ ಪರಿಹಾರ ಯೋಜನೆಯನ್ನು (OTS) ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದೆ. ಇದರಿಂದಾಗಿ ಸುಮಾರು 3 ಲಕ್ಷ ಆಸ್ತಿಗಳಿಂದ ರೂ.1277 ಕೋಟಿ ಬಾಕಿಯನ್ನು ವಸೂಲಿ ಮಾಡಲಾಗಿದೆ.
ಪಾಲಿಕೆಯು ತನ್ನ ಎಲ್ಲಾ 25 ಲಕ್ಷ ಕಾಗದರೂಪದ ಖಾತಾಗಳನ್ನು ಆನ್‌ಲೈನ್‌ನಲ್ಲಿ ಡಿಜಿಟಲೀಕರಣ ಗೊಳಿಸುವ ಮೂಲಕ ಸಂಪರ್ಕ ರಹಿತ, ಮುಖರಹಿತ ಇ-ಖಾತಾ ವ್ಯವಸ್ಥೆಯನ್ನು ಜಾರಿಗೆ ತರುವುದರೊಂದಿಗೆ ಮಾನ್ಯ ಉಪಮುಖ್ಯಮಂತ್ರಿಗಳು ನಾಗರೀಕರಿಗೆ ನೀಡಿದ್ದ ಭರವಸೆಯನ್ನು ಸಾಕಾರಗೊಳಿಸಿದೆ. ಇದು ಭಾರತದ ಅತಿ ದೊಡ್ಡ ಡಿಜಿಟಲ್ ಇ-ಖಾತಾ ವ್ಯವಸ್ಥೆಯಾಗಿರುತ್ತದೆ.
ಎಲ್ಲಾ ಪಾಲಿಕೆ ಆಸ್ತಿಗಳಿಗೆ ಜಿ.ಪಿ.ಎಸ್. ಸ್ಥಳಾಧಾರಿತ ಐ.ಡಿ.ಯನ್ನು ನೀಡಲಾಗುತ್ತಿದ್ದು, ಇದು ಪಾರದರ್ಶಕ ಮತ್ತು ಅಧಿಕೃತ ಇ-ಖಾತಾಗಳಿಗೆ ಕಾರಣವಾಗಿದೆ. ಅಂಗೈಯಲ್ಲೇ ಆಸ್ತಿ ದಾಖಲೆಗಳ ಲಭ್ಯತೆಯಿಂದಾಗಿ ನಾಗರೀಕರ ನೆಮ್ಮದಿ ಹೆಚ್ಚಿದೆ.

ಆಸ್ತಿಗಳು
ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಸುಮಾರು 20 ಲಕ್ಷ ಖಾಸಗಿ ಸ್ವತ್ತುಗಳು ಮತ್ತು 6,819 ಪಾಲಿಕೆ ಸ್ವತ್ತುಗಳ ಮೋಜಣಿಕಾರ್ಯ ಹಾಗೂ ದಾಖಲೆಗಳ ನಿರ್ವಹಣೆಗಾಗಿ ಪಾಲಿಕೆಯಲ್ಲಿ ಪ್ರತ್ಯೇಕವಾದ ಸರ್ವೆ ವಿಭಾಗವನ್ನು ಸ್ಥಾಪಿಸಲಾಗಿದೆ. ಇದರಿಂದ 2025-26ನೇ ಸಾಲಿನಲ್ಲಿ 228 ಆಸ್ತಿ ವಹಿಗಳನ್ನು ಸ್ಕ್ಯಾನಿಂಗ್ ಮತ್ತು ಡಿಜಿಟೈಸೇಷನ್ ಮಾಡಲು ಕ್ರಮವಹಿಸಲಾಗುವುದು.

ಪಾಲಿಕೆಯ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಆಸ್ತಿಗಳ ನಿರ್ವಹಣೆ) ನಿಯಮಗಳು-2024ಕ್ಕೆ ಸರ್ಕಾರದ ಅನುಮೋದನೆ ದೊರಕಿದ್ದು ಹರಾಜಿನ ಮೂಲಕ ಗುತ್ತಿಗೆ ನೀಡಲು ಅಥವಾ ನವೀಕರಿಸಲು ಕ್ರಮವಹಿಸಲಾಗುವುದು. ಇದರಂತೆ ಗುತ್ತಿಗೆ/ಬಾಡಿಗೆ ಮೊತ್ತವನ್ನು ನಿಗಧಿಪಡಿಸುವುದರಿಂದ ಸುಮಾರು ರೂ.210 ಕೋಟಿ ಆದಾಯವನ್ನು ನಿರೀಕ್ಷಿಸಲಾಗಿದೆ.

ಜಾಹೀರಾತು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಜಾಹೀರಾತು ಉಪವಿಧಿಗಳು-2024ಕ್ಕೆ ಘನ ಸರ್ಕಾರವು ಅನುಮೋದನೆ ನೀಡಿರುತ್ತದೆ. ಹೊಸ ಜಾಹೀರಾತು ನೀತಿಯ ಅನುಷ್ಠಾನದಿಂದಾಗಿ ಈ ಸಾಲಿನಲ್ಲಿ ಸುಮಾರು ರೂ.750 ಕೋಟಿ ಆದಾಯವನ್ನು ಸಂಗ್ರಹಿಸುವ ನಿರೀಕ್ಷೆಯಿದೆ.

ಭೂ-ಸ್ವಾಧೀನ ಮತ್ತುಇ-ಡಿ.ಆರ್.ಸಿ./ಇ-ಟಿ.ಡಿ.ಆರ್.

ಪಾಲಿಕೆಯ ಮೂಲಸೌಕರ್ಯ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಈ ಆರ್ಥಿಕ ವರ್ಷದಲ್ಲಿ ಭೂ-ಸ್ವಾಧೀನಕ್ಕೆ ರೂ.100 ಕೋಟಿಗಳನ್ನು ಮೀಸಲಿರಿಸಿದೆ.

 

 

 

 

 

 

 

 

 

927 crore: Here is the complete information | BBMP Budget 2025 BIG NEWS: `BBM' presents a budget of Rs. 19
Share. Facebook Twitter LinkedIn WhatsApp Email

Related Posts

BREAKING : ಮೂವರು ಶಂಕಿತ ಉಗ್ರರ ಬಂಧನ ಕೇಸ್ : ‘NIA’ ತನಿಖೆಯಲ್ಲಿ ಮತ್ತಷ್ಟು ಸ್ಪೋಟಕ ವಿಚಾರ ಬಹಿರಂಗ!

11/07/2025 10:25 AM1 Min Read

ALERT : ‘ಚಿಟ್ ಫಂಡ್’ ನಲ್ಲಿ ಹಣ ಹೂಡಿಕೆ ಮಾಡೋಕು ಮುನ್ನ ಎಚ್ಚರ : 500ಕ್ಕೂ ಹೆಚ್ಚು ಜನರಿಗೆ 100 ಕೋಟಿಗೂ ಅಧಿಕ ವಂಚನೆ

11/07/2025 10:13 AM1 Min Read

SHOCKING : ರಾಜ್ಯದಲ್ಲಿ ನಿಲ್ಲದ ‘ಮೈಕ್ರೋ ಫೈನಾನ್ಸ್’ ಕಿರುಕುಳ : ರೈಲಿಗೆ ತಲೆಕೊಟ್ಟು ತಾಯಿ- ಮಗಳು ಆತ್ಮಹತ್ಯೆ.!

11/07/2025 10:05 AM1 Min Read
Recent News

BREAKING : ಮೂವರು ಶಂಕಿತ ಉಗ್ರರ ಬಂಧನ ಕೇಸ್ : ‘NIA’ ತನಿಖೆಯಲ್ಲಿ ಮತ್ತಷ್ಟು ಸ್ಪೋಟಕ ವಿಚಾರ ಬಹಿರಂಗ!

11/07/2025 10:25 AM

ALERT : ‘ಚಿಟ್ ಫಂಡ್’ ನಲ್ಲಿ ಹಣ ಹೂಡಿಕೆ ಮಾಡೋಕು ಮುನ್ನ ಎಚ್ಚರ : 500ಕ್ಕೂ ಹೆಚ್ಚು ಜನರಿಗೆ 100 ಕೋಟಿಗೂ ಅಧಿಕ ವಂಚನೆ

11/07/2025 10:13 AM

SHOCKING : ಮಗಳಿಗೆ ಚಿಕಿತ್ಸೆ ಕೊಡಿಸಲಾಗದೇ ಫೇಸ್ ಬುಕ್ ಲೈವ್ ನಲ್ಲೇ ಉದ್ಯಮಿ ಆತ್ಮಹತ್ಯೆ : ವಿಡಿಯೋ ವೈರಲ್ | WATCH VIDEO

11/07/2025 10:10 AM

SHOCKING : ರಾಜ್ಯದಲ್ಲಿ ನಿಲ್ಲದ ‘ಮೈಕ್ರೋ ಫೈನಾನ್ಸ್’ ಕಿರುಕುಳ : ರೈಲಿಗೆ ತಲೆಕೊಟ್ಟು ತಾಯಿ- ಮಗಳು ಆತ್ಮಹತ್ಯೆ.!

11/07/2025 10:05 AM
State News
KARNATAKA

BREAKING : ಮೂವರು ಶಂಕಿತ ಉಗ್ರರ ಬಂಧನ ಕೇಸ್ : ‘NIA’ ತನಿಖೆಯಲ್ಲಿ ಮತ್ತಷ್ಟು ಸ್ಪೋಟಕ ವಿಚಾರ ಬಹಿರಂಗ!

By kannadanewsnow0511/07/2025 10:25 AM KARNATAKA 1 Min Read

ಬೆಂಗಳೂರು : ದಕ್ಷಿಣ ಭಾರತದ ಬಹುತೇಕ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಉಗ್ರ ನಾಸಿರ್ ಗೆ…

ALERT : ‘ಚಿಟ್ ಫಂಡ್’ ನಲ್ಲಿ ಹಣ ಹೂಡಿಕೆ ಮಾಡೋಕು ಮುನ್ನ ಎಚ್ಚರ : 500ಕ್ಕೂ ಹೆಚ್ಚು ಜನರಿಗೆ 100 ಕೋಟಿಗೂ ಅಧಿಕ ವಂಚನೆ

11/07/2025 10:13 AM

SHOCKING : ರಾಜ್ಯದಲ್ಲಿ ನಿಲ್ಲದ ‘ಮೈಕ್ರೋ ಫೈನಾನ್ಸ್’ ಕಿರುಕುಳ : ರೈಲಿಗೆ ತಲೆಕೊಟ್ಟು ತಾಯಿ- ಮಗಳು ಆತ್ಮಹತ್ಯೆ.!

11/07/2025 10:05 AM

BREAKING : ಭಯೋತ್ಪಾದಕ ಟಿ.ನಾಸಿರ್ ಗೆ ನೆರವು ನೀಡಿದ ಪ್ರಕರಣ : ASI ಚಾನ್ ಪಾಷಾ ವಿರುದ್ದ ತನಿಖೆಗೆ ಕಮಿಷನರ್ ಆದೇಶ

11/07/2025 10:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.