ಬೆಂಗಳೂರು : ಬೆಂಗಳೂರಿನಲ್ಲಿ ಇನ್ನೂ ಮೂರು ಗಂಟೆಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಇರಿ ಎಂದು ಜನರಿಗೆ ಸೂಚಿಸಲಾಗಿದೆ. ಈ ಮಧ್ಯೆ ಬೆಂಗಳೂರಿನ ಜನತೆಗೆ ಸಾಂಕ್ರಾಮಿಕ ರೋಗಗಳ ಭೀತಿ ಕೂಡ ಎದುರಾಗಿದೆ. ಈ ಕುರಿತಂತೆ ಬಿಬಿಎಂಪಿ ಆರೋಗ್ಯ ವಿಭಾಗ ಮಾರ್ಗಸೂಚಿ ಹೊರಡಿಸಿದೆ. ಮಳೆ ಅವಾಂತರದ ಡ್ಯಾಮೇಜ್ ಕಂಟ್ರೋಲ್ ಗೆ ಪಾಲಿಕೆ ಮುಂದಾಗಿದೆ ಈ ಮೂಲಕ ಬೆಂಗಳೂರಿನ ಜನತೆ ವಿಶ್ವಾಸ ಗಳಿಸಲು ತಯಾರಿ ಮಾಡಿಕೊಂಡಿದೆ.
ಬೆಂಗಳೂರಿನಲ್ಲಿ ಮಳೆಯ ಬಳಿಕ ರೋಗಗಳ ಆತಂಕ ಶುರುವಾಗಿದೆ. ಸಾಂಕ್ರಾಮಿಕ ರೋಗ ತಡೆಗೆ ನಿಗಾ ಇಡಲು ಬಿಬಿಎಂಪಿ ಇದೀಗ ಸಿದ್ಧತೆ ಮಾಡಿಕೊಂಡಿದೆ. ಮಳೆ ಬಿದ್ದ ಜಾಗದಲ್ಲಿ ಮುಂಜಾಗ್ರತಾ ಕ್ರಮಕ್ಕೆ ಪಾಲಿಕೆ ಸಿದ್ಧತೆ ಮಾಡಿಕೊಂಡಿದೆ. ಮಳೆಯಿಂದ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.
ಮಳೆ ತಗ್ಗಿದ ಬಳಿಕ ಸಾಂಕ್ರಾಮಿಕ ರೋಗ ಹರಡುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ನೀರಿನ ಮೂಲಗಳು ಪರಿಶೀಲನೆಗೆ ಬಿಬಿಎಂಪಿ ಪ್ಲಾನ್ ಮಾಡಿದೆ.ಜಲ ಮಂಡಳಿ ಜೊತೆ ಕುಡಿಯುವ ನೀರಿನ ಪೈಪ್ ಗಳ ಪರಿಶೀಲನೆ ನಡೆಸಲಿದ್ದು, ಕಾಲರಾ, ಜಾಂಡೀಸ್ ಹಾಗೂ ಕರುಳುಬೇನೆ ಹರಡದಂತೆ ತಡೆಗಟ್ಟಲು ತಯಾರಿ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.ಮಳೆ ಪ್ರದೇಶಗಳಲ್ಲಿ ತಾತ್ಕಾಲಿಕ ಆರೋಗ್ಯ ಶಿಬಿರ ತೆರೆಯಲು ಚಿಂತನೆ ನಡೆಸಿದೆ.
ಜೊತೆಗೆ ಕುಡಿಯುವ ನೀರಿನ ತಪಾಸನೆ ನಡೆಸಲು ಕೂಡ ಬಿಬಿಎಂಪಿ ಚಿಂತನೆ ನಡೆಸಿದೆ. ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರ ಮೂಲಕ ಮನೆಗಳಿಗೆ ಭೇಟಿ ನೀಡಲಾಗುತ್ತದೆ.ಅಗತ್ಯ ಇರುವ ಕಡೆಗೆ ಓ ಆರ್ ಎಸ್ ಹಾಗೂ ಮಾತ್ರೆಗಳ ವಿತರಣೆಗೂ ತಯಾರಿ ಮಾಡಿಕೊಳ್ಳಲಾಗಿದೆ.ಈ ಕುರಿತಂತೆ ಬಿಬಿಎಂಪಿ ಆರೋಗ್ಯ ವಿಭಾಗ ಮಾರ್ಗಸೂಚಿ ಹೊರಡಿಸಿದೆ. ಮಳೆ ಅವಾಂತರದ ಡ್ಯಾಮೇಜ್ ಕಂಟ್ರೋಲ್ ಗೆ ಪಾಲಿಕೆ ಮುಂದಾಗಿದೆ ಈ ಮೂಲಕ ಬೆಂಗಳೂರಿನ ಜನತೆ ವಿಶ್ವಾಸ ಗಳಿಸಲು ತಯಾರಿ ಮಾಡಿಕೊಂಡಿದೆ.