ಬೆಂಗಳೂರು : ಎಸ್ ಎಸ್ ಎಲ್ ಸಿ (SSLC) ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಗ್ ಶಾಕ್ ನೀಡಿದ್ದು, ಪ್ರಸಕ್ತ ಸಾಲಿನಲ್ಲಿ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯಂತೆಯೇ ಮಧ್ಯವಾರ್ಷಿಕ ಪರೀಕ್ಷೆ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ.
ಹೌದು, ಈ ವರ್ಷ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಸ್ ಎಲ್ ಎಲ್ ಸಿ ಮುಖ್ಯ ಪರೀಕ್ಷೆಯ ಮಾದರಿಯಲ್ಲಿಯೇ ಮಂಡಳಿ ಹಂತದಲ್ಲಿ ಪ್ರಶ್ನೆ ಪತ್ರಿಕೆ ತಯಾರಿಸಿ ಶಾಲೆಗಳಿಗೆ ಲಾಗಿನ್ ನೀಡಲು ಮುಂದಾಗಿದೆ. ಆದರೆ ಪರೀಕ್ಷೆ ನಡೆಸಲು ಪ್ರಶ್ನೆ ಪತ್ರಿಕೆ ಮುದ್ರಣಕ್ಕೆ ಯಾವುದೇ ಅನುದಾನ ಶಾಲೆಗಳಿಗೆ ನೀಡಿಲ್ಲ.
ಇಲಾಖೆಯ ನಿರ್ಧಾರಕ್ಕೆ ಪೋಷಕರ ವಲಯದಲ್ಲಿ ವಿರೋಧ ಕೂಡಾ ಕೇಳಿ ಬಂದಿದ್ದು, ಪ್ರಸ್ತುತ ರಾಜ್ಯ ಸರ್ಕಾರವು ಶೈಕ್ಷಣಿಕ ವರ್ಷದ ನಡುವೆ ಈ ರೀತಿ ಹಲವು ನಿರ್ಧಾರಗಳನ್ನು ಕೈಗೊಳ್ಳುತ್ತಿದೆ. ವಿದ್ಯಾರ್ಥಿಗಳ, ಶಿಕ್ಷಕರ ಹಾಗೂ ತಜ್ಞರ ಅಭಿಪ್ರಾಯಗಳನ್ನು ಪಡೆಯದೆ ಈ ರೀತಿ ಅಪ್ರಜಾತಾಂತ್ರಿಕ ಹಾಗೂ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವುದನ್ನು ಸರ್ಕಾರವು ಕೈಬಿಡಬೇಕು. ಕೂಡಲೇ ಮಂಡಳಿ ಪ್ರಶ್ನೆ ಪತ್ರಿಕೆಗಳನ್ನು ಕೈಬಿಟ್ಟು ಶಾಲಾ ಮಟ್ಟದಲ್ಲೇ ಪ್ರಶ್ನೆ ಪತ್ರಿಕೆಗಳನ್ನು ರಚಿಸವಂತೆ ಒತ್ತಾಯ ಕೇಳಿ ಬಂದಿದೆ.