ಬೆಂಗಳೂರು : ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಲು ತಯಾರಿ ನಡೆಸುತ್ತಿದ್ದು, ಗ್ಯಾರಂಟಿ ಫಲಾನುಭವಿಗಳಲ್ಲಿ ಶೇ.50ರಷ್ಟು ಕಡಿಮೆ ಮಾಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಸಂಸದ ಡಾ.ಕೆ. ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಸರಕಾರ ಅನುದಾನ ನೀಡುತ್ತಿಲ್ಲ. ಹೀಗಾಗಿ ಗ್ಯಾರಂಟಿ ಫಲಾನುಭವಿಗಳಲ್ಲಿ ಶೇ.50ರಷ್ಟು ಕಡಿಮೆ ಮಾಡಲು ರಾಜ್ಯ ಸರ್ಕಾರ ತಯಾರಿ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.
ಗ್ಯಾರಂಟಿಗಳಿಗಾಗಿ ಹಾಲು, ಮದ್ಯ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರ ರೈತರಿಗೆ 900 ಕೋಟಿ ರೂ. ಹಾಲಿನ ಪ್ರೋತ್ಸಾಹ ಧನವೂ ನೀಡಿಲ್ಲ. ಈಗಲೂ ವಿಧಾನಸಭಾ ಚುನಾವಣೆ ನಡೆದರೆ ನಾವು 143 ಸ್ಥಾನ ಗೆಲ್ಲುತ್ತೇವೆ ಎಂದರು.