ಬೆಂಗಳೂರು : ಕಳೆದ 2 ದಿನಗಳ ಹಿಂದೆ ಸೊಸೆಯೊಬ್ಬಳು ಅತ್ತೆಯನ್ನು ಕೊಲ್ಲಲು ವೈದ್ಯರ ಬಳಿಯೇ ಮಾತ್ರೆ ಕೇಳಿದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಅತ್ತೆಯನ್ನು ಸಾಯಿಸಬೇಕು ಎಂದು ಬೆಂಗಳೂರಿನ ಡಾಕ್ಟರ್ ಸುನೀಲ್ ಕುಮಾರ್ ಎಂಬುವವರ ಬಳಿ ಸಹಾಯ ಕೇಳಿದ್ದಳು. ಆದರೆ ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ತಾನೇ ಆತ್ಮಹತ್ಯೆ ಮಾಡಿಕೊಳ್ಳಲು ಸೊಸೆ ವೈದ್ಯರ ಬಳಿ ಮಾತ್ರೆ ಕೇಳಿದ್ದಳು ಎಂದು ತಿಳಿದುಬಂದಿದೆ.
ಹೌದು ಅತ್ತೆ ಸಾಯಿಸಲು ಮಾತ್ರೆ ಕೊಡಿ ಎಂದು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತಾನೇ ಸಾಯಲು ವೈದ್ಯರ ಬಳಿ ಮಾತ್ರ ಕೇಳಿದಳಂತೆ ಮಹಿಳೆ. ಮಾತ್ರೆ ಕೇಳಿದ ಮಹಿಳೆಯನ್ನು ಬೆಂಗಳೂರು ಪೊಲೀಸರು ಪತ್ತೆ ಹಚ್ಚಿದ್ದಾರೆ. ಇದೀಗ ಆಕೆ ವಿಚಾರಣೆ ನಡೆಸಿದಾಗ ವೈದ್ಯರಿಗೆ ಮೆಸೇಜ್ ಕಳಿಸಿದ್ದ ಕೊಳ್ಳೇಗಾಲ ಮೂಲದ ಸಹನ ಎಂದು ತಿಳಿದು ಬಂದಿದೆ. ಬೆಂಗಳೂರಿನ ಚೌಟ್ರಿಪಾಳ್ಯದಲ್ಲಿ ಸಹನ ವಾಸವಾಗಿದ್ದಳು.ಮಹಿಳೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾಳೆ ಎಂಬುದರ ಕುರಿತು ಮಾಹಿತಿ ಸಿಕ್ಕಿದೆ.
ಘಟನೆ ಹಿನ್ನೆಲೆ?
ನನ್ನ ಅತ್ತೆ ದಿನ ನನಗೆ ಹಿಂಸೆ ನೀಡುತ್ತಿದ್ದಾರೆ, ಅವರಿಗೆ ತುಂಬಾ ವಯಸ್ಸಾಗಿದೆ ಹೀಗಾಗಿ ಏನಾದ್ರೂ ಹೇಳುತ್ತೀರಾ ಅವರನ್ನು ಹೇಗೆ ಸಾಯಿಸೋದು ಅಂತ ಎಂದು ವೈದ್ಯರಿಗೆ ಮೆಸ್ಸೇಜ್ ಮಾಡಿದ್ದಾರೆ.ಅಷ್ಟೇ ಅಲ್ಲದೆ ಸಾಯಿಸೋಕೆ ಅಂತಾನೆ ಮಾತ್ರೆಗಳು ಇರುತ್ತೆ ಅಲ್ವಾ ಅದು ಹೇಳಿ ಎಂದು ಕೇಳಿದ್ದಾಳೆ.
ಜೊತೆಗೆ ಒಂದೆರಡು ಮಾತ್ರೆ ತಗೊಂಡ್ರೆ ಸಾಯುತ್ತಾರೆ ಅಲ್ವಾ ಅದು ಹೇಳಿ ಎಂದು ಕೇಳಿಕೊಂಡಿದ್ದಾಳೆ. ಇದಕ್ಕೆ ವೈದ್ಯರು ನಾವು ಪ್ರಾಣ ಉಳಿಸುವ ಜನ ಆ ರೀತಿ ಮಾಡುವುದಿಲ್ಲ ಎಂದು ಹೇಳಿದಾಗ ತಕ್ಷಣ ವೈದ್ಯರಿಗೆ ಮಾಡಿದ ಮೆಸ್ಸೇಜ್ ಅನ್ನು ಡಿಲೀಟ್ ಮಾಡಿ ನಂಬರ್ ಅನ್ನು ಬ್ಲಾಕ್ ಮಾಡಿದ್ದಾಳೆ.
ಆದರೆ ಆಕೆ ಮೆಸ್ಸೇಜ್ ಡಿಲೀಟ್ ಮಾಡುವ ಮುನ್ನವೇ ಆಕೆ ಮಾಡಿದ್ದ ಮೆಸ್ಸೇಜ್ ನ ಸ್ಕ್ರೀನ್ ಶಾಟ್ ತೆಗೆದ ವೈದ್ಯ ಸುನೀಲ್ ಅವರು ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದೀಗ ಮಹಿಳೆಯನ್ನು ಪತ್ತೆ ಹಚ್ಚಿರುವ ಪೊಲೀಸರು ಆಕೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವುದು ತಿಳಿದು ಬಂದಿದೆ.