Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘CBSE’ಯಿಂದ 2024–25ನೇ ಸಾಲಿನ ‘ಶಾಲಾವಾರು ಸಾಧನೆ ವರದಿ’ ಬಿಡುಗಡೆ

31/10/2025 8:27 PM

SHOCKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಕೃತ್ಯ: ತೃತೀಯ ಲಿಂಗಿ ತಲೆ ಬೋಳಿಸಿ ಹಲ್ಲೆಗೈದ ತೃತೀಯ ಲಿಂಗಿಯರು

31/10/2025 8:18 PM

ಪಿಎಂ ಸೂರ್ಯ ಘರ್‌ ಯೋಜನೆ ಚುರುಕುಗೊಳಿಸಲು ‘ಸಿಟಿ ಆಕ್ಸಿಲರೇಟರ್‌’ ಕಾರ್ಯಕ್ರಮಕ್ಕೆ ಚಾಲನೆ

31/10/2025 8:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಣಿ ಚನ್ನಮ್ಮನ ನಾಡಿನಲ್ಲಿ ಲಾಠಿಚಾರ್ಜ್ ಅಕ್ಷಮ್ಯ ಅಪರಾಧ: ಬಿವೈ ವಿಜಯೇಂದ್ರ ಖಂಡನೆ
KARNATAKA

BIG NEWS : ರಾಣಿ ಚನ್ನಮ್ಮನ ನಾಡಿನಲ್ಲಿ ಲಾಠಿಚಾರ್ಜ್ ಅಕ್ಷಮ್ಯ ಅಪರಾಧ: ಬಿವೈ ವಿಜಯೇಂದ್ರ ಖಂಡನೆ

By kannadanewsnow0512/12/2024 12:39 PM

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡವಳಿಕೆ, ಅಧಿಕಾರದ ದರ್ಪದಿಂದ ಮೆರೆಯುತ್ತಿದ್ದಾರೆ ಎಂದು ರಾಜ್ಯದ ಜನತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದರು.

ಪಂಚಮಸಾಲಿ ಲಿಂಗಾಯತ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ನಡೆಸಿದ್ದನ್ನು ಖಂಡಿಸಿ ರಾಜ್ಯ ಬಿಜೆಪಿ ವತಿಯಿಂದ ಇಂದು ಬೆಳಗಾವಿ ಸುವರ್ಣಸೌಧದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು. ಇದೇವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಸ್ವಾಮೀಜಿ, ರೈತಾಪಿ ವರ್ಗದ ಧರಣಿ- ಹೋರಾಟದ ಸ್ಥಳಕ್ಕೆ ತೆರಳಿ ಮನವಿ ಸ್ವೀಕರಿಸಬೇಕಿತ್ತು. ಮುಖ್ಯಮಂತ್ರಿಗಳಿಗೆ ಏನು ಧಾಡಿ ಆಗಿತ್ತು ಎಂದು ಪ್ರಶ್ನಿಸಿದರು.

ಇಲ್ಲೇ ಸುವರ್ಣ ಸೌಧದಲ್ಲಿ ಇದ್ದರೂ ಸಹ ಮುಖ್ಯಮಂತ್ರಿಗಳು ಮನಸ್ಸು ಮಾಡಲಿಲ್ಲ. ಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡುವ ಸೌಜನ್ಯವನ್ನು ತೋರಲಿಲ್ಲ; ಬದಲಾಗಿ ಅಮಾಯಕರ ಮೇಲೆ ಲಾಠಿ ಚಾರ್ಜ್ ಮಾಡಿಸಿದ್ದು, ಚನ್ನಮ್ಮನ ನಾಡಿನಲ್ಲಿ ಲಾಠಿಚಾರ್ಜ್ ಆಗಿರುವುದು ಅಕ್ಷಮ್ಯ ಅಪರಾಧ ಎಂದು ಖಂಡಿಸಿದರು.

ಮುಖ್ಯಮಂತ್ರಿಗಳು ಯಾವ ಕಾರಣಕ್ಕೆ ಲಾಠಿ ಚಾರ್ಜ್ ಮಾಡಿಸಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಪಡೆಯುತ್ತೇವೆ. ದರ್ಪದಿಂದ ಮೆರೆದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಎರಡೂ ಸದನದಲ್ಲಿ ಇದನ್ನು ಆಗ್ರಹಿಸಲಿವೆ ಎಂದು ಅವರು ತಿಳಿಸಿದರು. ಕಾಂಗ್ರೆಸ್ ಸರಕಾರದವರು ಮೂರೂ ಬಿಟ್ಟಿದ್ದಾರೆ. 136 ಶಾಸಕರಿದ್ದೇವೆ. ಅಧಿಕಾರ ಶಾಶ್ವತ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯನವರ ಸರಕಾರ ಇದ್ದಂತಿದೆ.

ಹಿಂದಿನ ಅವಧಿಯಲ್ಲೂ ಇದೇರೀತಿ ನಡೆದುಕೊಂಡಿದ್ದು, ಸಿಎಂ ಅವರನ್ನು ಸದನದಲ್ಲಿ ಪ್ರಶ್ನಿಸುತ್ತೇವೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಆರಂಭವಾದ ಪ್ರತಿಭಟನೆ ಸಂದರ್ಭದಲ್ಲಿ ರಾಜ್ಯದ ಮಾಜಿ ಸಚಿವರು, ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದರು.

ಮೀಸಲಾತಿ ನೀಡದ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, ಪ್ರಾಣ ಕೊಟ್ಟೇವು ಮೀಸಲಾತಿ ಬಿಡೆವು, ಹೋರಾಟಗಾರರ ಮೇಲೆ ಹಲ್ಲೆ ನಡೆಸಿದ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಇವೇ ಮೊದಲಾದ ಭಿತ್ತಿಪತ್ರಗಳನ್ನು ಹಿಡಿದಿದ್ದ ಶಾಸಕರು, ವಿಧಾನಪರಿಷತ್ ಸದಸ್ಯರು ಸರಕಾರದ ಧೋರಣೆಯನ್ನು ಖಂಡಿಸಿ ವಿವಿಧ ಘೋಷಣೆಗಳನ್ನು ಕೂಗಿದರು.

Share. Facebook Twitter LinkedIn WhatsApp Email

Related Posts

SHOCKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಕೃತ್ಯ: ತೃತೀಯ ಲಿಂಗಿ ತಲೆ ಬೋಳಿಸಿ ಹಲ್ಲೆಗೈದ ತೃತೀಯ ಲಿಂಗಿಯರು

31/10/2025 8:18 PM1 Min Read

ಪಿಎಂ ಸೂರ್ಯ ಘರ್‌ ಯೋಜನೆ ಚುರುಕುಗೊಳಿಸಲು ‘ಸಿಟಿ ಆಕ್ಸಿಲರೇಟರ್‌’ ಕಾರ್ಯಕ್ರಮಕ್ಕೆ ಚಾಲನೆ

31/10/2025 8:07 PM2 Mins Read

BREAKING: ರಾಜ್ಯದಲ್ಲಿ ಮನೆ ಮನೆ ಜಾತಿಗಣತಿ ಸಮೀಕ್ಷೆ ಮುಕ್ತಾಯ: ಹೀಗಿದೆ ಸರ್ವೆ ಅಂಕಿ-ಅಂಶದ ವಿವರ

31/10/2025 8:02 PM1 Min Read
Recent News

BREAKING : ‘CBSE’ಯಿಂದ 2024–25ನೇ ಸಾಲಿನ ‘ಶಾಲಾವಾರು ಸಾಧನೆ ವರದಿ’ ಬಿಡುಗಡೆ

31/10/2025 8:27 PM

SHOCKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಕೃತ್ಯ: ತೃತೀಯ ಲಿಂಗಿ ತಲೆ ಬೋಳಿಸಿ ಹಲ್ಲೆಗೈದ ತೃತೀಯ ಲಿಂಗಿಯರು

31/10/2025 8:18 PM

ಪಿಎಂ ಸೂರ್ಯ ಘರ್‌ ಯೋಜನೆ ಚುರುಕುಗೊಳಿಸಲು ‘ಸಿಟಿ ಆಕ್ಸಿಲರೇಟರ್‌’ ಕಾರ್ಯಕ್ರಮಕ್ಕೆ ಚಾಲನೆ

31/10/2025 8:07 PM

BREAKING: ರಾಜ್ಯದಲ್ಲಿ ಮನೆ ಮನೆ ಜಾತಿಗಣತಿ ಸಮೀಕ್ಷೆ ಮುಕ್ತಾಯ: ಹೀಗಿದೆ ಸರ್ವೆ ಅಂಕಿ-ಅಂಶದ ವಿವರ

31/10/2025 8:02 PM
State News
KARNATAKA

SHOCKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಕೃತ್ಯ: ತೃತೀಯ ಲಿಂಗಿ ತಲೆ ಬೋಳಿಸಿ ಹಲ್ಲೆಗೈದ ತೃತೀಯ ಲಿಂಗಿಯರು

By kannadanewsnow0931/10/2025 8:18 PM KARNATAKA 1 Min Read

ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ತೃತೀಯ ಲಿಂಗಿಯೊಬ್ಬರನ್ನು ತಲೆ ಬೋಳಿಸಿರುವಂತ ತೃತೀಯ ಲಿಂಗಿಯರ ತಂಡವೇ, ಮನಸೋ ಇಚ್ಛೆ…

ಪಿಎಂ ಸೂರ್ಯ ಘರ್‌ ಯೋಜನೆ ಚುರುಕುಗೊಳಿಸಲು ‘ಸಿಟಿ ಆಕ್ಸಿಲರೇಟರ್‌’ ಕಾರ್ಯಕ್ರಮಕ್ಕೆ ಚಾಲನೆ

31/10/2025 8:07 PM

BREAKING: ರಾಜ್ಯದಲ್ಲಿ ಮನೆ ಮನೆ ಜಾತಿಗಣತಿ ಸಮೀಕ್ಷೆ ಮುಕ್ತಾಯ: ಹೀಗಿದೆ ಸರ್ವೆ ಅಂಕಿ-ಅಂಶದ ವಿವರ

31/10/2025 8:02 PM

GOOD NEWS: ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ಗುಡ್‌ನ್ಯೂಸ್‌: ಪರಿಷ್ಕೃತ ನಕ್ಷೆ ಪಡೆಯಲು ರಾಜ್ಯ ಸರ್ಕಾರ ಅಸ್ತು

31/10/2025 7:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.