ಬೆಂಗಳೂರು : ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ವಾಲ್ಮೀಕಿ ಜಾತ್ರೆ ನಡೆಯುತ್ತಿದ್ದು ಇಂದು ಬಿಜೆಪಿ ರಾಜ್ಯೇಂದ್ರ ಆ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಲು ಕೇಳುತ್ತಿದ್ದರು ಆದರೆ ದೆಹಲಿಯಿಂದ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ದಿಢೀರ್ ಎಂದು ರದ್ದುಗೊಳಿಸಿ ದೆಹಲಿಗೆ ತೆರಳಿದ್ದಾರೆ.
ಹೌದು ರಾಜನಹಳ್ಳಿಯ ವಾಲ್ಮೀಕಿ ಜಾತ್ರೆಗೆ ಬಿವೈ ವಿಜಯೇಂದ್ರ ತೆರಳುತ್ತಿದ್ದರು. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಜಾತ್ರೆ ನಡೆಯುತ್ತಿದ್ದು ಈ ಒಂದು ಕಾರ್ಯಕ್ರಮಕ್ಕೆ ಬಿವೈ ವಿಜಯೇಂದ್ರ ತೆರಳುತ್ತಿದ್ದ ಸಂದರ್ಭದಲ್ಲಿ ದೆಹಲಿಯ ಹೈಕಮಾಂಡ್ ನಿಂದ ಬಲಾವ್ ಬಂದಿದೆ.
ಈ ಹಿನ್ನೆಲೆಯಲ್ಲಿ ತಕ್ಷಣ ಬಿವೈ ವಿಜಯೇಂದ್ರ ವಾಪಸ್ ಮರಳಿದ್ದಾರೆ. ಬೆಂಗಳೂರಿನ ನೆಲಮಂಗಲದಿಂದಲೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವೀಜೇಂದ್ರ ವಾಪಸ್ ಆಗಿದ್ದಾರೆ. ಹೈಕಮಾಂಡ್ ಭೇಟಿಗಾಗಿ ಕೂಡಲೇ ದಿಢೀರ್ ಎಂದು ದೆಹಲಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.