ಬೆಳಗಾವಿ : ಈಗಾಗಲೇ ಸಚಿವ ಸಂಪುಟ ವಿಸ್ತರಣೆಯಾದರೆ ಕಾಂಗ್ರೆಸ್ ಕೆಲವು ಆಕಾಂಕ್ಷಿಗಳು ನನಗೆ ಸಚಿವ ಸ್ಥಾನ ಸಿಗುತ್ತದೆ ನನಗೆ ಮಂತ್ರಿ ಸ್ಥಾನ ಸಿಗುತ್ತದೆ ಎಂದು ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಈಗಾಗಲೇ ಶಾಸಕರಾದ ಕೆಎಮ್ ಶಿವಲಿಂಗೇಗೌಡ ಹಾಗೂ ಉಪ ಸಭಾಪತಿ ರುದ್ರಪ್ಪ ಲಮಾಣಿ ನಮಗೂ ಸಚಿವರಾಗುವ ಆಸೆ ಇದೆ ಎಂದು ಹೇಳಿಕೆ ನೀಡಿದ್ದಾರೆ. ಇದರ ಮಧ್ಯ ಸಚಿವ ಸತೀಶ್ ಜಾರಕಿಹೊಳಿ ಸಚಿವ ಸಂಪುಟ ವಿಸ್ತರಣೆ ಆದರೆ ಹೊಸ ಲೀಡರ್ ಶಿಪ್ ಬೆಳೆಯುತ್ತೆ ಎಂದು ತಿಳಿಸಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ ನಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಡಿಸೆಂಬರ್ ಇನ್ನು ಬಹಳ ದೂರವಿದೆ ಸಚಿವ ಸಂಪುಟ ವಿಸ್ತರಣೆ ಆದಾಗ ನೋಡೋಣ. 30 ತಿಂಗಳ ಬಳಿಕ ಸಚಿವರಾಗಬೇಕು ಎಂದು ಬಹಳಷ್ಟು ಶಾಸಕರ ಒತ್ತಾಸೆ ಇದೆ. ಸಚಿವ ಸಂಪುಟ ವಿಸ್ತರಣೆ ಆದರೆ ಒಳ್ಳೆಯದು ಎಲ್ಲರಿಗೂ ಅವಕಾಶ ಸಿಗುತ್ತದೆ ಎಂದರು.
ಈ ಬಗ್ಗೆ ನಿರ್ಧಾರ ಮಾಡಲು ಹೈಕಮಾಂಡ್ ಇದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ನಮ್ಮ ಮಟ್ಟದಲ್ಲಿ ಇಲ್ಲ. ಸಚಿವರ ಕಾರ್ಯ ವೈಖರಿಗಳ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಸಚಿವ ಸಂಪುಟ ವಿಸ್ತರಣೆ ಆದರೆ ಹೊಸ ಲೀಡರ್ ಶಿಪ್ ಬೆಳೆಯುತ್ತೆ ಎಂದು ಬೆಳಗಾವಿಯಲ್ಲಿ ಪಿಡಬ್ಲ್ಯೂಡಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದರು.