ಬೆಂಗಳೂರು : ನಂದಿನಿ ಹಾಲಿನ ದರ ಏರಿಕೆ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್, ಸಹಕಾರಿ ಸಚಿವ ಕೆ.ಎನ್ ರಾಜಣ್ಣ, ಪಶು ಸಂಗೋಪನೆ ಇಲಾಖೆ ಸಚಿವ ಕೆ. ವೆಂಕಟೇಶ್ ಬಾಲಚಂದ್ರ ಜಾರಕಿಹೊಳಿ ಹಾಗು ಜಿಲ್ಲಾ ಒಕ್ಕೂಟದ ಅಧ್ಯಕ್ಷರು, ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಸಭೆಯ ಬಳಿಕ ಮಾತನಾಡಿದ KMF ಅಧ್ಯಕ್ಷ ಭೀಮಾ ನಾಯ್ಕ್ ನಂದಿನಿ ಹಾಲಿನ ದರ ಹೆಚ್ಚಳ ಮಾಡಬೇಕೆಂಬುವುದು ನಿರ್ಧಾರವಾಗಿದೆ. ಸಿಎಂ ನೇತೃತ್ವದಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆ ಬಗ್ಗೆ ನಿರ್ಧಾರಿಸಲಾಗುತ್ತೆ. ಹಾಲಿನ ದರ ಹೆಚ್ಚಳ ಸಂಬಂಧ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ.ಹಾಲಿನ ದರ ಎಷ್ಟು ಹೆಚ್ಚಳ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ ಎಂದು ತಿಳಿಸಿದರು.
ಹಾಲು ಒಕ್ಕೂಟಗಳು ಹಾಲು ಉತ್ಪಾದಕರ ಬೇಡಿಕೆ ಮನವರಿಕೆ ಬೇಡಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಮನವರಿಕೆ ಮಾಡಿದ್ದೇವೆ. ಸದ್ಯ ಹಾಲಿನ ದರ ಎಷ್ಟು ಹೆಚ್ಚಿಸಬೇಕು ಎಂಬ ಕುರಿತು ಚರ್ಚೆಯಾಗಿಲ್ಲ. ಹಾಲು ಉತ್ಪಾದಕರು ಮತ್ತು ಗ್ರಾಹಕರು ಎರಡು ಕಣ್ಣುಗಳು ಇದ್ದಂತೆ.ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಹಾಲಿನ ದರ ಕಡಿಮೆ ಇದೆ. ಹಾಲಿನ ದರ ಏರಿಕೆ ಸಂಬಂಧಪಟ್ಟ ಕ್ಯಾಬಿನೆಟ್ ನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿಕೆ ನೀಡಿದರು.
ಪ್ರತಿ ಲೀಟರ್ ಹಾಲಿನ ದರ ರೂ.5 ಹೆಚ್ಚಳಕ್ಕೆ ಕೆಎಂಎಫ್ ಪ್ರಸ್ತಾಪ ಇಟ್ಟಿದೆ. ಹಾಲಿನ ದರ ಏರಿಕೆ ಹಾಗೂ ಪಶುಗಳಿಗೆ ಆಹಾರ ಸೇರಿ ಹಲವು ವಿಚಾರಗಳು ಈ ಒಂದು ಸಭೆಯಲ್ಲಿ ಚರ್ಚೆ ಆಗಿವೆ. ಎನ್ನಲಾಗಿದೆ. ಈಗಾಗಲೇ ರಾಜ್ಯದ ಜನತೆಗೆ ಕೆಎಸ್ಆರ್ಟಿಸಿ ಬಸ್ ಪ್ರಯಾಣದ ಟಿಕೆಟ್ ದರ, ಮೆಟ್ರೋ ಟಿಕೆಟ್ ದರ ಏರಿಕೆ ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿದ್ದು ಇದರ ಬೆನ್ನಲ್ಲೆ ಹಾಲಿನ ದರ ಏರಿಕೆ ಮಾಡಿದರೆ, ಗಾಯದ ಮೇಲೆ ಬರೆ ಎಳೆದಂತೆ ಆಗುತ್ತದೆ.