ಬೆಂಗಳೂರು : ರಾಜ್ಯ ಸರ್ಕಾರದಿಂದಲೇ ಆಂಬುಲೆನ್ಸ್ ಕಂಟ್ರೋಲ್ ಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಈ ಕುರಿತು ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದು, ಒಡಂಬಡಿಕೆಯ ಪಾಲುದಾರರಾದ ಮೆ. ಇ.ಎಂ.ಆರ್.ಐ ಗ್ರೀನ್ ಹೆಲ್ತ್ ಸರ್ವೀಸಸ್ ಅವರಿಂದ ಹಿಂಪಡೆದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಿರ್ವಹಿಸಲು ಸರ್ಕಾರದ ವತಿಯಿಂದ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ರಾಜ್ಯ ಮಟ್ಟದಲ್ಲಿ ತಂತ್ರಾಂಶ ಬಳಸಿಕೊಂಡು ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಸ್ಥಾಪಿಸಲು ಹಾಗೂ ಜಿಲ್ಲಾಡಳಿತದ ಮುಖಾಂತರ ಆಂಬುಲೆನ್ಸ್ಗಳ ನಿರ್ವಹಣೆ ಮಾಡಲು ಅನುಮೋದನೆ ನೀಡಲು ನಿರ್ಣಯಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೆಜಿಟಿಟಿಐಗಳು ಕೆಎಸ್ಡಿಎ ಮತ್ತು ಜೆಟಿಎಸ್ ಉಪಕ್ರಮ ಪ್ರಸ್ತಾವನೆ ಬಲಪಡಿಸುವ ಕಾರ್ಯವನ್ನು 5 ವರ್ಷಗಳಲ್ಲಿ ಎಡಿಬಿಯಿಂದ 970.00 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 416.00 ಕೋಟಿಗಳ ಬಾಹ್ಯ ನಿಧಿಯ ಮೂಲಕ ಕಾರ್ಯಗತಗೊಳಿಸಲು ಎಡಿಬಿಗೆ ಪ್ರಸ್ತಾವನೆ ಸಲ್ಲಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಮಾಹಿತಿ ನೀಡಿದ್ದಾರೆ.