ಬೆಂಗಳೂರು : ಕಲ್ಬುರ್ಗಿ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕುರಿತಂತೆ ಬಿಜೆಪಿಯ ಎಮ್ಎಲ್ಸಿ ಎನ್ ರವಿಕುಮಾರ್ ಅವರ ವಿರುದ್ಧ, ಕಲ್ಬುರ್ಗಿ ಠಾಣೆಯಲ್ಲಿ FIR ದಾಖಲಾಗಿತ್ತು. ಈಗ ನೆಲೆಯಲ್ಲಿ ಏನ ರವಿಕುಮಾರ್ ಹೈಕೋರ್ಟ್ ನಲ್ಲಿ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದರು ಇದೀಗ ಹೈಕೋರ್ಟ್ ಬರವಿಕುಮಾರ್ ವಿರುದ್ಧ ಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ.
ಅಲ್ಲದೆ ಡಿಸಿ ವಿರುದ್ಧದ ಹೇಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಸಹಕರಿಸಲು ಎನ್ ರವಿಕುಮಾರ್ ಗೆ ಹೈಕೋರ್ಟ್ ಇದೀಗ ಸೂಚನೆ ನೀಡಿದೆ. ಕೇಸ್ ರದ್ದು ಕೋರಿ ಬಿಜೆಪಿ ಎಂಎಲ್ಸಿ ರವಿಕುಮಾರ್ ಅವರು ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ಇಂದು ಅರ್ಜಿ ವಿಚಾರಣೆ ನಡೆಯಿತು. ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲದೆ ರವಿಕುಮಾರ್ ಅವರಿಗೆ ಕೂಡ ವಿಚಾರಣೆಗೆ ಸಹಕರಿಸಿ ಎಂದು ಸೂಚನೆ ನೀಡಿದೆ.