Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ರಾಜ್ಯದಲ್ಲಿ ಯಾರಿಗೆಲ್ಲಾ `ಉಚಿತ ಬಸ್ ಪಾಸ್’ ಸೌಲಭ್ಯ ಇದೆ? ಇಲ್ಲಿದೆ ಮಾಹಿತಿ

09/01/2026 5:00 AM

BIG NEWS : ರಾಜ್ಯದಲ್ಲಿ ಅನುಕಂಪದ ಆಧಾರದ ಮೇಲೆ ನೇಮಕಾತಿಗೆ `ಸಿಂಧುತ್ವ ಪ್ರಮಾಣಪತ್ರ’ : ಸರ್ಕಾರದಿಂದ ಮಹತ್ವದ ಆದೇಶ

09/01/2026 5:00 AM

BIG NEWS : ರಾಜ್ಯದ ಅನುದಾನಿತ ನಿವೃತ್ತ ಶಿಕ್ಷಕರು, ಸಿಬ್ಬಂದಿಗಳಿಗೆ `ಗಳಿಕೆ ರಜೆ ನಗಧೀಕರಣ’ : ಸರ್ಕಾರದಿಂದ ಮಹತ್ವದ ಆದೇಶ

09/01/2026 4:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಅನುದಾನಿತ ನಿವೃತ್ತ ಶಿಕ್ಷಕರು, ಸಿಬ್ಬಂದಿಗಳಿಗೆ `ಗಳಿಕೆ ರಜೆ ನಗಧೀಕರಣ’ : ಸರ್ಕಾರದಿಂದ ಮಹತ್ವದ ಆದೇಶ
KARNATAKA

BIG NEWS : ರಾಜ್ಯದ ಅನುದಾನಿತ ನಿವೃತ್ತ ಶಿಕ್ಷಕರು, ಸಿಬ್ಬಂದಿಗಳಿಗೆ `ಗಳಿಕೆ ರಜೆ ನಗಧೀಕರಣ’ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5709/01/2026 4:55 AM

ಬೆಂಗಳೂರು : 2024-25 ಮತ್ತು 2025-26 ನೇ ಸಾಲಿನಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿರುವ ಶಿಕ್ಷಕ/ಸಿಬ್ಬಂದಿಗಳಿಗೆ ನಿವೃತ್ತಿ ನಂತರದ ಗಳಿಕೆ ರಜೆ ನಗಧೀಕರಣಕ್ಕಾಗಿ ಅನುದಾನದ ಮಾಹಿತಿ ಪಡೆಯುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಶಾಲಾ ಶಿಕ್ಷಣ ಇಲಾಖೆಯ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ನಿವೃತ್ತರಾದ ನೌಕರರುಗಳಿಗೆ ನಿವೃತ್ತಿ ನಂತರದ ಗಳಿಕೆ ರಜೆ ನಗದೀಕರಣ ಸೌಲಭ್ಯಕ್ಕೆ ಸಂಬಂಧಿಸಿದಂತೆ 2019-20 ರಿಂದ 2020-21 ನೇ ಸಾಲಿನಲ್ಲಿ ನಿವೃತ್ತರಾದವರಿಗೆ ರೂ.9599.48 ಲಕ್ಷಗಳನ್ನು 2022-23 ನೇ ಸಾಲಿನಲ್ಲಿ, 2021-22 ಮತ್ತು 2022-23ನೇ ಸಾಲಿನಲ್ಲಿ ನಿವೃತ್ತರಾದವರಿಗೆ ರೂ.8265.20 ಲಕ್ಷಗಳನ್ನು 2023-24 ನೇ ಸಾಲಿನಲ್ಲಿ ಹಾಗೂ 2023-24 ಮತ್ತು 2024-25 ನೇ ಸಾಲಿನಲ್ಲಿ ನಿವೃತ್ತರಾದ ಪ್ರಕರಣಗಳಿಗೆ ರೂ.100.86 ಕೋಟಿಗಳನ್ನು 2024-25 ನೇ ಸಾಲಿನಲ್ಲಿ ಸಂಬಂಧಿಸಿದ ಶಿಕ್ಷಕರು/ನೌಕರರುಗಳಿಗೆ ನಿವೃತ್ತಿ ನಂತರದ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ಈಗಾಗಲೇ ಬಿಡುಗಡೆ ಮಾಡಲಾಗಿರುತ್ತದೆ.

2024-25 ಮತ್ತು 2025-26 ನೇ ಸಾಲಿನವರೆಗೆ ಶಾಲಾ ಶಿಕ್ಷಣ ಇಲಾಖೆಯ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ನಿವೃತ್ತರಾದ ಶಿಕ್ಷಕರು/ಸಿಬ್ಬಂದಿಗಳಿಗೆ 2025-26 ನೇ ಸಾಲಿನಲ್ಲಿ ಅಗತ್ಯವಾದ ಅನುದಾನವನ್ನು ಆರ್ಥಿಕ ಇಲಾಖೆಯಿಂದ ಬಿಡುಗಡೆ ಆಗುವ ನಿರೀಕ್ಷೆಯಲ್ಲಿದೆ.

ಈ ಹಿನ್ನಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ 2024-25 ನೇ ಸಾಲಿನಲ್ಲಿ ನಿವೃತ್ತರಾಗಿ ಗಳಿಕೆ ರಜೆ ನಗದೀಕರಣವಾಗದೆ ಇರುವ ಹಾಗೂ 2025-26ನೇ ಸಾಲಿನಲ್ಲಿ ನಿವೃತ್ತರಾದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು/ಸಿಬ್ಬಂದಿಗಳ ಮಾಹಿತಿಗಳನ್ನು ಲಗತ್ತಿಸಲಾದ ಅನುಬಂಧ-1, & ಅನುಬಂಧ-2, ಗಳಲ್ಲಿರುವಂತೆ ಸಂಬಂಧಿಸಿದ ತಾಲ್ಲೂಕು ಕಛೇರಿಗಳಿಂದ ಪಡೆದು ಕ್ರೋಢಿಕರಿಸಿ ಕ್ರೋಢೀಕೃತ ಮಾಹಿತಿಯನ್ನು ಈ ಕೆಳಗಿನ ವೇಳಾಪಟ್ಟಿಯಂತೆ ಈ ಕಛೇರಿಗೆ ಹಾಜರಾಗಲು ಸಿಬ್ಬಂದಿಯನ್ನು ನಿಯೋಜಿಸುವುದು. ಜಿಲ್ಲಾವಾರು ನಿಗದಿಪಡಿಸಿದ ವೇಳಾಪಟ್ಟಿಯಂತೆ ಆಯಾ ದಿನಾಂಕಗಳಂದು ಸಂಬಂಧಿಸಿದ ಜಿಲ್ಲೆಯ ಮಾಹಿತಿಯನ್ನು ಈ ಕೆಳಕಂಡ ದಾಖಲೆಗಳೊಂದಿಗೆ ಕಡ್ಡಾಯವಾಗಿ ಖುದ್ದು ಹಾಜರಾಗಿ ಸಲ್ಲಿಸಲು ತಿಳಿಸಿದೆ. ತಪ್ಪಿದಲ್ಲಿ ಅನುದಾನವನ್ನು ಬಿಡುಗಡೆಗೊಳಿಸಲಾಗುವುದಿಲ್ಲ ಎಂಬ ಅಂಶವನ್ನು ತಿಳಿಸಿದೆ.

ಷರತ್ತುಗಳು:

1. ಶಿಕ್ಷಕರು/ಸಿಬ್ಬಂದಿಗಳ ಸೇವಾಪುಸ್ತಕದಲ್ಲಿ ದೃಢೀಕರಿಸಿರುವಂತೆ ನಿವೃತ್ತಿ ದಿನಾಂಕಕ್ಕೆ ಲಭ್ಯವಿರುವ ಆಖೈರು ಶುಲ್ಕ ಗಳಿಕೆ ರಜೆಯ ತಃಖ್ಯೆಯನ್ನು ಪರಿಶೀಲಿಸಿ ನಮೂದಿಸಿರುವ ಗಳಿಕೆ ರಜೆ ವಿವರಗಳು ಕ್ರಮವಾಗಿರುವ ಬಗ್ಗೆ ಖಾತರಿಪಡಿಸಿಕೊಂಡು ಅದರಂತೆ ಗಳಿಕೆ ರಜೆ ಲೆಕ್ಕ ತಃಖ್ಯೆಯಲ್ಲಿ ನಮೂದಿಸಿ ಪ್ರತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಜಿಲ್ಲಾ ಉಪನಿರ್ದೇಶಕರುಗಳು ದೃಢೀಕರಿಸಿ ಸಲ್ಲಿಸತಕ್ಕದ್ದು.

2. ಶಿಕ್ಷಕರು/ಸಿಬ್ಬಂದಿಗಳ ದೃಢೀಕರಿಸಿದ ಎಲ್.ಪಿ.ಸಿ/ಕೊನೆಯ ವೇತನ ಚೀಟಿಯ ಪ್ರತಿ.

3. ಮೇಲೆ ವಿವರಿಸಿದಂತೆ ಅನುಬಂಧ-1&2 ರಲ್ಲಿ ಸಲ್ಲಿಸಲಾಗುವ ಮಾಹಿತಿಗಳಂತೆ ಅನುದಾನ ಲಭ್ಯತೆಗೆ ಒಳಪಟ್ಟು ಅನುದಾನ ಬಿಡುಗಡೆ ಮಾಡಲಾಗುವುದು.

4. ಡಿಡಿಓಗಳ ಬಳಿ ನಿವೃತ್ತಿ ಹೊಂದಿದ ಶಿಕ್ಷಕರು/ಸಿಬ್ಬಂದಿಗಳ ಗಳಿಕೆ ರಜೆ ನಗಧೀಕರಣಕ್ಕೆ ಅಗತ್ಯವಾದ ಎಲ್ಲಾ ದಾಖಲಾತಿಗಳು ಲಭ್ಯವಿರುವ ಶಿಕ್ಷಕರ/ಸಿಬ್ಬಂದಿಗಳ ಮಾಹಿತಿಯನ್ನು ಮಾತ್ರ ಸಲ್ಲಿಸುವುದು. ಮಾಹಿತಿ ಸಲ್ಲಿಸಿದ ನಂತರದಲ್ಲಿ ಶಿಕ್ಷಕರ ಸೇವಾ ಪುಸ್ತಕ ಲಭ್ಯವಿಲ್ಲ/ಮಾನ್ಯ ಮಹಾಲೇಖಪಾಲರಿಂದ ಮಾಹಿತಿ ಬಂದಿಲ್ಲ/ಆಡಳಿತ ಮಂಡಳಿ ಬಿಲ್ ಸಲ್ಲಿಸಿಲ್ಲ ಇತ್ಯಾದಿ ಸಬೂಬುಗಳನ್ನು ತಿಳಿಸುವಂತಿಲ್ಲ. ಈ ಹಿನ್ನಲೆಯಲ್ಲಿ ಸಲ್ಲಿಸಲಾಗುವ ಮಾಹಿತಿಗೆ ಸಂಬಂಧಿಸಿದಂತೆ ಎಲ್ಲಾ ಶಿಕ್ಷಕರ/ಸಿಬ್ಬಂದಿಗಳ ಅಗತ್ಯ ಮಾಹಿತಿ ಲಭ್ಯವಿರುವ ಬಗ್ಗೆ ಸಂಬಂಧಿಸಿದ ಡಿಡಿಓ/ಜಿಲ್ಲಾ ಉಪನಿರ್ದೇಶಕರು ಖಾತರಿಪಡಿಸಿಕೊಳ್ಳುವುದು.

5. 2024-25 ಮತ್ತು 2025-26 ನೇ ಸಾಲಿಗೆ ಜಿಲ್ಲಾ ಕಛೇರಿಯಿಂದ ಈಗಾಗಲೇ ಸಲ್ಲಿಕೆಯಾದ ಪ್ರಸ್ತಾವನೆಯ ಮಾಹಿತಿಯಂತೆಯೆ ಸಲ್ಲಿಸುವುದು. ಸದರಿ ಮಾಹಿತಿಗೆ ಅನುಗುಣವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿರುತ್ತದೆ. ಪ್ರಸ್ತುತ ನೀಡಲಾಗುವ ಸಿಬ್ಬಂದಿವಾರು ಮಾಹಿತಿಯು ಈ ಮುಂಚಿನ ಮಾಹಿತಿಗೆ ಹೊಂದಾಣಿಕೆಗೆ ಆಗುವ ಬಗ್ಗೆ ಪರಿಶೀಲಿಸಿ ದೃಢೀಕರಿಸುವುದು. ಈ ಸಾಲಿನಲ್ಲಿ ಪ್ರಸ್ತಾಪಿಸಿದ ನಿವೃತ್ತ ನೌಕರರ ಸಂಖ್ಯೆಯ ಮೊತ್ತಕ್ಕೆ ಸಂಬಂಧಿಸಿದಂತೆ ಮಾತ್ರ ಪ್ರಸ್ತಾವನೆಗಳನ್ನು ಸಲ್ಲಿಸುವುದು. ಹೆಚ್ಚುವರಿಯಾಗಿ ಯಾವುದೇ ಪ್ರಸ್ತಾವನೆಯನ್ನು ಸಲ್ಲಿಸುವಂತಿಲ್ಲ.

BIG NEWS: `Cash-on-earned leave' for state-aided retired teachers and staff: Important order from the government
Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ರಾಜ್ಯದಲ್ಲಿ ಯಾರಿಗೆಲ್ಲಾ `ಉಚಿತ ಬಸ್ ಪಾಸ್’ ಸೌಲಭ್ಯ ಇದೆ? ಇಲ್ಲಿದೆ ಮಾಹಿತಿ

09/01/2026 5:00 AM4 Mins Read

BIG NEWS : ರಾಜ್ಯದಲ್ಲಿ ಅನುಕಂಪದ ಆಧಾರದ ಮೇಲೆ ನೇಮಕಾತಿಗೆ `ಸಿಂಧುತ್ವ ಪ್ರಮಾಣಪತ್ರ’ : ಸರ್ಕಾರದಿಂದ ಮಹತ್ವದ ಆದೇಶ

09/01/2026 5:00 AM2 Mins Read

ಪೊಲೀಸ್‌ ಇಲಾಖೆ ವಿರುದ್ಧ ಬಿಜೆಪಿಯಿಂದ ಸಂಘಟಿತ ಹೋರಾಟ: ಮಾಜಿ ಸಿಎಂ ಡಿ.ವಿ ಸದಾನಂದಗೌಡ

08/01/2026 9:27 PM2 Mins Read
Recent News

ಸಾರ್ವಜನಿಕರೇ ಗಮನಿಸಿ : ರಾಜ್ಯದಲ್ಲಿ ಯಾರಿಗೆಲ್ಲಾ `ಉಚಿತ ಬಸ್ ಪಾಸ್’ ಸೌಲಭ್ಯ ಇದೆ? ಇಲ್ಲಿದೆ ಮಾಹಿತಿ

09/01/2026 5:00 AM

BIG NEWS : ರಾಜ್ಯದಲ್ಲಿ ಅನುಕಂಪದ ಆಧಾರದ ಮೇಲೆ ನೇಮಕಾತಿಗೆ `ಸಿಂಧುತ್ವ ಪ್ರಮಾಣಪತ್ರ’ : ಸರ್ಕಾರದಿಂದ ಮಹತ್ವದ ಆದೇಶ

09/01/2026 5:00 AM

BIG NEWS : ರಾಜ್ಯದ ಅನುದಾನಿತ ನಿವೃತ್ತ ಶಿಕ್ಷಕರು, ಸಿಬ್ಬಂದಿಗಳಿಗೆ `ಗಳಿಕೆ ರಜೆ ನಗಧೀಕರಣ’ : ಸರ್ಕಾರದಿಂದ ಮಹತ್ವದ ಆದೇಶ

09/01/2026 4:55 AM

ಪೊಲೀಸ್‌ ಇಲಾಖೆ ವಿರುದ್ಧ ಬಿಜೆಪಿಯಿಂದ ಸಂಘಟಿತ ಹೋರಾಟ: ಮಾಜಿ ಸಿಎಂ ಡಿ.ವಿ ಸದಾನಂದಗೌಡ

08/01/2026 9:27 PM
State News
KARNATAKA

ಸಾರ್ವಜನಿಕರೇ ಗಮನಿಸಿ : ರಾಜ್ಯದಲ್ಲಿ ಯಾರಿಗೆಲ್ಲಾ `ಉಚಿತ ಬಸ್ ಪಾಸ್’ ಸೌಲಭ್ಯ ಇದೆ? ಇಲ್ಲಿದೆ ಮಾಹಿತಿ

By kannadanewsnow5709/01/2026 5:00 AM KARNATAKA 4 Mins Read

ಬೆಂಗಳೂರು : ರಾಜ್ಯದ ಸಾರಿಗೆ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರು, ಅಂಗವಿಕಲರು, ಅಂಧರು, ಪತ್ರಕರ್ತರು, ಅಂಗವಿಕಲರು ಸೇರಿದಂತೆ ಹಲವರಿಗೆ ಉಚಿತ ಬಸ್…

BIG NEWS : ರಾಜ್ಯದಲ್ಲಿ ಅನುಕಂಪದ ಆಧಾರದ ಮೇಲೆ ನೇಮಕಾತಿಗೆ `ಸಿಂಧುತ್ವ ಪ್ರಮಾಣಪತ್ರ’ : ಸರ್ಕಾರದಿಂದ ಮಹತ್ವದ ಆದೇಶ

09/01/2026 5:00 AM

BIG NEWS : ರಾಜ್ಯದ ಅನುದಾನಿತ ನಿವೃತ್ತ ಶಿಕ್ಷಕರು, ಸಿಬ್ಬಂದಿಗಳಿಗೆ `ಗಳಿಕೆ ರಜೆ ನಗಧೀಕರಣ’ : ಸರ್ಕಾರದಿಂದ ಮಹತ್ವದ ಆದೇಶ

09/01/2026 4:55 AM

ಪೊಲೀಸ್‌ ಇಲಾಖೆ ವಿರುದ್ಧ ಬಿಜೆಪಿಯಿಂದ ಸಂಘಟಿತ ಹೋರಾಟ: ಮಾಜಿ ಸಿಎಂ ಡಿ.ವಿ ಸದಾನಂದಗೌಡ

08/01/2026 9:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.