ಬೆಂಗಳೂರು : ರಾಜ್ಯ ಸರ್ಕಾರದಿಂದ ಜಾತಿಗಣತಿ ಮರು ಸಮೀಕ್ಷೆ ವಿಚಾರವಾಗಿ ಬೆಂಗಳೂರಿನಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿಕೆ ನೀಡಿದ್ದು, ಹೈಕಮಾಂಡ್ ಮರುಪರಿಶೀಲನೆ ಮಾಡಬೇಕು ಎಂದು ಸೂಚಿಸಿದೆ. ಕೆಲ ಸಮುದಾಯಗಳು ನಮ್ಮ ಜನಸಂಖ್ಯೆ ದೊಡ್ಡದಿದೆ ಅಂದಿದ್ದಾರೆ ಅವರು ಜಾತಿಗ ನೀತಿ ಸರ್ವೆಗೆ ಆತಂಕ ವ್ಯಕ್ತಪಡಿಸಿಲ್ಲ. ಜಾತಿಗಣತಿ ಮರು ಸರ್ವೆ ಮಾಡಿ ವರದಿ ಜಾರಿಗೊಳಿಸುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಮರು ಸರ್ವೆ ಮಾಡಿ ವರದಿ ಜಾರಿಗೊಳಿಸುತ್ತೇವೆ. ಆದರೆ ಇನ್ನೊಮ್ಮೆ ಪರಿಶೀಲನೆ ಮಾಡುವುದರಲ್ಲಿ ಏನು ತಪ್ಪಿದೆ? ಇನ್ನು ಕಾಲ್ತುಳಿತ ಕೇಸ್ ಡೈವರ್ಟ್ ಗೊಳಿಸಲು ಜಾತಿ ಗಣತಿ ಚರ್ಚೆ ಆರೋಪದ ಕುರಿತಾಗಿ ಮಾತನಾಡಿದ ಅವರು ಪಹಲ್ಗಾಂ ದಾಳಿ ಆದಾಗ ಜಾದಿಗಣತಿ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದರು. ದೇಶದಲ್ಲಿ ಜಾತಿಗಣತಿ ಮಾಡುತ್ತೇವೆ ಅಂತ ಪ್ರಧಾನಿ ಮೋದಿ ಹೇಳಿದ್ದರು. ನಮ್ಮ ಪ್ರಣಾಳಿಕೆಯಲ್ಲಿಯೇ ಇದೆ ನಾವು ಮಾಡಿಯೇ ಮಾಡುತ್ತೇವೆ ಎಂದು ಸಚಿವ ಸಂತೋಷ್ ಲಾಡ್ ಇದೆ ಹೇಳಿಕೆ ನೀಡಿದರು.