ಬೆಂಗಳೂರು : ರಾಜ್ಯದಲ್ಲಿ ಉಪ ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ಜಾತಿ ಗಣತಿ ಮಂಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟದ ಪ್ರಧಾನ ಸಂಚಾಲಕರಾದ ಕೆ.ಎಂ.ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ನೂರಕ್ಕೂ ಅಧಿಕ ಮಂದಿ ಪದಾಧಿಕಾರಿಗಳು ಮತ್ತು ನಾನಾ ಸಮುದಾಯಗಳ ಮುಖಂಡರು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ, “ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ”ಯನ್ನು ಜಾರಿಗೊಳಿಸುವಂತೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸದ್ಯ ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣೆಯ ಬಳಿಕ ಸಚಿವ ಸಂಪುಟ ಸಭೆಯಲ್ಲಿ ವರದಿಯ ಕುರಿತು ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.