ಬೆಂಗಳೂರು : ವಸತಿ ಯೋಜನೆ ಅಡಿ ಮನೆ ಹಂಚಿಕೆಯಲ್ಲಿ ಲಂಚ ಪಡೆದಿರುವ ಆರೋಪದ ಕುರಿತು ಶಾಸಕ ಬಿ ಆರ್ ಪಾಟೀಲ್ ಅವರ ಆಡಿಯೋ ವೈರಲ್ ಆಗಿರುವ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪ್ರತಿಕ್ರಿಯೆ ನೀಡಿದ್ದು, ಈ ಒಂದು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕ ಬಿ ಆರ್ ಪಾಟೀಲ್ ಅವರ ಬಾಯಿಮುಚ್ಚಿಸುವ ಪ್ರಯತ್ನ ಮಾಡಬಹುದು ಎಂದು ಗಂಭೀರವಾಗಿ ಆರೋಪಿಸಿದರು.
ಇನ್ನು ಈ ಒಂದು ಘಟನೆ ಸಂಬಂಧ ಶಾಸಕ ರಾಜು ಕಾಗೆ ಸಹ ಇನ್ನೆರಡು ದಿನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಕೊಟ್ಟರು ಆಶ್ಚರ್ಯಪಡಬೇಕಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ವಿಚಾರವಾಗಿ, ಶಾಸಕ ರಾಜು ಕಾಗೆ ಮಾತ್ರ ಅಲ್ಲ ಅಂತಹ ಹತ್ತಾರು ಜನರು ಇದ್ದಾರೆ. ಒಬ್ಬೊಬ್ಬರಾಗಿ ಬಾಯಿ ಬಿಡುತ್ತಾರೆ ನೀವೇ ನೋಡ್ತಾ ಇರಿ ಕಾಂಗ್ರೆಸ್ ಶಾಸಕ ಬಿ ಆರ್ ಪಾಟೀಲ್ ಲಂಚ ಆರೋಪ ಮಾಡಿದ್ದಾರೆ ಸಿಎಂ ಮುಂದೆ ವಾಸ್ತವಿಕ ಸ್ಥಿತಿ ಹೇಳುತ್ತೇನೆ ಎಂದಿದ್ದಾರೆ.
ಬಿ ಆರ್ ಪಾಟೀಲ್ ಬಾಯಿಮುಚ್ಚಿಸುವ ಪ್ರಯತ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಬಹುದು. ಸರ್ಕಾರದ ವಿರುದ್ಧ ಮಾತನಾಡುವವರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂತಹವರಿಗೆ ಸಹಕಾರ ಕೊಡುತ್ತಿದ್ದಾರೆ.ಮುಂದೆ ಸರ್ಕಾರದ ವಿರುದ್ಧ ಹೋರಾಟಕ್ಕೆ ರೂಪರೇಷ ಸಿದ್ಧಪಡಿಸುತ್ತೇವೆ. ವಾರಕ್ಕೆ ಒಂದು ದಿನ ಜಿಲ್ಲಾ ಪ್ರವಾಸ ಮಾಡುತ್ತೇನೆ ಭ್ರಷ್ಟಾಚಾರದ ಬಗ್ಗೆ ಕಾರ್ಯಕರ್ತರಿಗೆ ಮನವರಿಕೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದರು.