ಮೈಸೂರು : ಮುಂಬರುವ ನವೆಂಬರ್ ತಿಂಗಳಿನಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಅಥವಾ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಆಗಲಿದ್ದಾರೆ ಎಂದು ಇತ್ತೀಚಿಗೆ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಹೇಳಿಕೆ ನೀಡಿದದ್ದರು. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಪ್ರತಿಕ್ರಿಯೆ ನೀಡಿದ್ದು, ಮುಖ್ಯಮಂತ್ರಿ ಬದಲಾವಣೆಗೆ ಯಾವುದೇ ಕಾರಣಗಳಿಲ್ಲ ಎಂದರು.
ಮೈಸೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂಚೆಯಿಂದಲೂ ಈಗ ಆಗುತ್ತೆ ಅಂತ ಹೇಳ್ತಾನೆ ಇದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾಡಲಿಕ್ಕೆ ಯಾವುದೇ ಕಾರಣಗಳು ಸದ್ಯಕ್ಕೆ ಇಲ್ಲ. ನಮ್ಮ ಪಕ್ಷ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಚೆನ್ನಾಗಿ ಕೆಲಸ ಮಾಡುತ್ತಿದೆ. ಮುಖ್ಯಮಂತ್ರಿಗಳ ಬದಲಾವಣೆ ಪಕ್ಷ ತೀರ್ಮಾನಕ್ಕೆ ಬಿಟ್ಟಿದ್ದು, ಇದರ ಬಗ್ಗೆ ಯಾರು ಪ್ರತಿಕ್ರಿಯೆ ಮಾಡುವುದು ಬೇಡ ಎಂದು ಮೈಸೂರಲ್ಲಿ ಕಾಂಗ್ರೆಸ್ ಎಂಎಲ್ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದರು.