Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯುವಜನರೇ ಎಚ್ಚರ! ಅತಿಯಾದ ‘ಸ್ಕ್ರೀನ್ ಟೈಮ್’ನಿಂದ ಹೃದಯಕ್ಕೆ ಕುತ್ತು; ಆಘಾತಕಾರಿ ಮಾಹಿತಿ ಹೊರಹಾಕಿದ ಹೊಸ ಅಧ್ಯಯನ

31/03/2026 12:47 PM

ಕ್ರೆಡಿಟ್ ಕಾರ್ಡ್ ಬಳಕೆದಾರರೇ ಗಮನಿಸಿ: ನಾಳೆಯಿಂದ ಬದಲಾಗಲಿವೆ ಈ ಪ್ರಮುಖ ನಿಯಮಗಳು | Credit Card Rules

31/03/2026 12:31 PM

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧದ ಆತಂಕ: ಭಾರತದ 18 ಇಂಧನ ಹಡಗುಗಳು ಜಲಸ್ತಂಭನ; ದೇಶದ ತೈಲ ಪೂರೈಕೆಗೆ ಭಾರಿ ಅಡಚಣೆ!

31/03/2026 12:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮಹತ್ವದ ‘ಮನೆಗೊಂದು ಗ್ರಂಥಾಲಯ’ ಯೋಜನೆ ಉದ್ಘಾಟಿಸಿದ CM ಸಿದ್ದರಾಮಯ್ಯ : ರಾಜ್ಯಾದ್ಯಂತ 1 ಲಕ್ಷ `ಗ್ರಂಥಾಲಯ’ ಸ್ಥಾಪಿಸುವ ಗುರಿ.!
KARNATAKA

BIG NEWS : ಮಹತ್ವದ ‘ಮನೆಗೊಂದು ಗ್ರಂಥಾಲಯ’ ಯೋಜನೆ ಉದ್ಘಾಟಿಸಿದ CM ಸಿದ್ದರಾಮಯ್ಯ : ರಾಜ್ಯಾದ್ಯಂತ 1 ಲಕ್ಷ `ಗ್ರಂಥಾಲಯ’ ಸ್ಥಾಪಿಸುವ ಗುರಿ.!

By kannadanewsnow5714/01/2025 5:47 AM

ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಮನೆಗೊಂದು ಗ್ರಂಥಾಲಯ’ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ.

‘ಮನೆಗೊಂದು ಗ್ರಂಥಾಲಯ’ದ ಮೊದಲ ಗ್ರಂಥಾಲಯವನ್ನು ಗೃಹ ಕಚೇರಿ ಕೃಷ್ಣಾದಲ್ಲಿಯೇ ಸ್ಥಾಪಿಸಿದ್ದು, ಗ್ರಂಥಾಲಯಕ್ಕೆ ಹಿರಿಯ ಸಾಹಿತಿ ನಾಡೋಜ ಡಾ. ಹಂಪ ನಾಗರಾಜಯ್ಯ ಅವರು ಚಾಲನೆ ನೀಡಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರು ಗ್ರಂಥಾಲಯದ ಫಲಕವನ್ನು ಅನಾವರಣಗೊಳಿಸಿದರು.

‘ಮನೆಗೊಂದು ಗ್ರಂಥಾಲಯ’ ಯೋಜನೆಯ ಪ್ರಮುಖ ಅಂಶಗಳು

ಈ ಯೋಜನೆಯಡಿ ರಾಜ್ಯದಾದ್ಯಂತ ಪ್ರಸಕ್ತ ಸಮಿತಿಯ ಅವಧಿಯಲ್ಲಿ ಒಂದು ಲಕ್ಷ ಮನೆಗಳಲ್ಲಿ ಗ್ರಂಥಾಲಯ ಸ್ಥಾಪಿಸುವ ಗುರಿಯನ್ನು ಹೊಂದಲಾಗಿದೆ. ಪುಸ್ತಕಾಭಿರುಚಿಯನ್ನು ಇಂದಿನ ಯುವಪೀಳಿಗೆಯಲ್ಲಿ ಬೆಳೆಸುವುದು ಇದರ ಮುಖ್ಯ ಉದ್ದೇಶ.

ಮರೆಯಾಗುತ್ತಿರುವ ಪುಸ್ತಕ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿ ಮನೆಯಲ್ಲಿಯೂ ಒಂದು ಪುಟ್ಟ ಗ್ರಂಥಾಲಯ ಕಟ್ಟುವುದು ಈ ಯೋಜನೆಯ ಕನಸಾಗಿದೆ.

– ಮನೆಗಳಲ್ಲಿ, ಸಂಘ ಸಂಸ್ಥೆಗಳಲ್ಲಿ, ಕಚೇರಿಗಳಲ್ಲಿ ಗ್ರಂಥಾಲಯ ಸ್ಥಾಪನೆ

– ಮನೆಯ ಮಾಲೀಕರು 100 ಪುಸ್ತಗಳಿಂದ ಆರಂಭಿಸಿ ಗ್ರಂಥಾಲಯವನ್ನು ಸ್ಥಾಪನೆ ಮಾಡಬೇಕು.

– ಪುಸ್ತಕಗಳ ಖರೀದಿ ಹಾಗೂ ಅವುಗಳನ್ನು ಸುಸಜ್ಜಿತವಾಗಿ ಇಡುವ ಜವಾಬ್ದಾರಿ ಮನೆಯ ಮಾಲೀಕರದ್ದಾಗಿರುತ್ತದೆ.

– ಸದರಿ ಗ್ರಂಥಾಲಯವನ್ನು ಗಣ್ಯರಿಂದ/ ವಿದ್ವಾಂಸರುಗಳಿಂದ / ಕಲಾವಿದರುಗಳಿಂದ ಉದ್ಘಾಟನೆಯನ್ನು ಮಾಡಿಸುವ ಜವಾಬ್ದಾರಿ ಪ್ರಾಧಿಕಾರದ್ದಾಗಿದೆ.

– ಪ್ರಚಾರದ ಜವಾಬ್ದಾರಿಯನ್ನು ಪ್ರಾಧಿಕಾರವೇ ವಹಿಸಲಿದೆ

– ತಾಲ್ಲೂಕು / ಜಿಲ್ಲಾ ಮಟ್ಟದಲ್ಲಿ ಗ್ರಂಥಾಲಯ ಜಾಗೃತ ಸಮಿತಿ ರಚನೆಯನ್ನು ಮಾಡಲಾಗುತ್ತದೆ.

– ಗ್ರಂಥಾಲಯ ಸ್ಥಾಪಿಸಲು ಪ್ರೋತ್ಸಾಹ ನೀಡುವುದು, ಅದರ ಜೊತೆ ನಿಕಟ ಸಂಪರ್ಕ ಇಟ್ಟುಕೊಳ್ಳುವುದು ಸಮಿತಿಯ ಜವಾಬ್ದಾರಿಯಾಗಿರುತ್ತದೆ.

ಆಡು ಭಾಷೆಯಲ್ಲಿ ಮಹಾಕಾವ್ಯ ಕಟ್ಟಿಕೊಟ್ಟ ಹಿರಿಮೆ ಗದುಗಿನ ನಾರಾಣಪ್ಪ ಅವರದ್ದು. ಕುಮಾರವ್ಯಾಸ ಎಂದೇ ಪ್ರಖ್ಯಾತರಾದ ಗದುಗಿನ ನಾರಾಣಪ್ಪ ರಚಿಸಿದ ʼಕರ್ಣಾಟ ಭಾರತ ಕಥಾಮಂಜರಿ’ ಕುಮಾರವ್ಯಾಸ ಭಾರತ ಎಂದೇ ಪ್ರಖ್ಯಾತವಾಗಿದೆ.

ಕನ್ನಡ ಸಾಹಿತ್ಯ ಲೋಕದ ಅಜರಾಮರ ಕೃತಿಯಾದ ಕುಮಾರವ್ಯಾಸ ಭಾರತವನ್ನು ಅತ್ಯಂತ ಕಡಿಮೆ ಬೆಲೆಯಲ್ಲಿ ಓದುಗರಿಗೆ ಒದಗಿಸಲಾಗುವುದೆಂದು ಸುವರ್ಣ ಸಂಭ್ರಮ ಕಾರ್ಯಕ್ರಮದ ನಿಮಿತ್ತ ಕಳೆದ ವರ್ಷ ಗದಗಿನಲ್ಲಿ ಆಚರಿಸಲಾಗಿದ್ದ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರು ಘೋಷಿಸಿದ್ದರು. ಅದರಂತೆ ಕನ್ನಡ ಗಣಕ ಪರಿಷತ್ತು ಈ ಹಿಂದೆ ಪ್ರಕಟಿಸಿದ್ದ ಕುಮಾರವ್ಯಾಸ ಭಾರತದ ಕೃತಿಯ ಹಕ್ಕುಗಳನ್ನು ಪುಸ್ತಕ ಪ್ರಾಧಿಕಾರ ಪಡೆದುಕೊಂಡು ಈ ಕೃತಿಯನ್ನು ಪ್ರಕಟಿಸಿದೆ. ಕನ್ನಡ ಪುಸ್ತಕ ಪ್ರಾಧಿಕಾರ ಈ ಕುಮಾರವ್ಯಾಸ ಭಾರತವನ್ನು ಎರಡು ಸಂಪುಟಗಳಲ್ಲಿ ಪ್ರಕಟಿಸಿದೆ. ಈ ಎರಡೂ ಸಂಪುಟಗಳಿಗೆ ಒಟ್ಟು ರೂ.500 ಬೆಲೆ ನಿಗದಿಪಡಿಸಲಾಗಿದೆ.

aims to set up 1 lakh 'libraries' across the state BIG NEWS : ಮಹತ್ವದ ‘ಮನೆಗೊಂದು ಗ್ರಂಥಾಲಯ’ ಯೋಜನೆ ಉದ್ಘಾಟಿಸಿದ CM ಸಿದ್ದರಾಮಯ್ಯ : ರಾಜ್ಯಾದ್ಯಂತ 1 ಲಕ್ಷ `ಗ್ರಂಥಾಲಯ' ಸ್ಥಾಪಿಸುವ ಗುರಿ.! BIG NEWS: CM Siddaramaiah inaugurates 'Manegonda Library' scheme
Share. Facebook Twitter LinkedIn WhatsApp Email

Related Posts

BREAKING : ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ : ರಿಸಲ್ಟ್ ನೋಡಲು ಇಲ್ಲಿದೆ ಡೈರೆಕ್ಟ್ ಲಿಂಕ್ | Karnataka 1st PUC Results 2026

31/03/2026 12:27 PM2 Mins Read

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹಗಲು ವೇಳೆಯಲ್ಲೇ 7 ಗಂಟೆ ಉಚಿತ `ತ್ರೀ-ಫೇಸ್ ವಿದ್ಯುತ್’ ನೀಡಲು ಸರ್ಕಾರ ನಿರ್ಧಾರ !

31/03/2026 12:25 PM1 Min Read

BREAKING: ಬೆಂಗಳೂರಲ್ಲಿ ಪೊಲೀಸರ ಭರ್ಜರಿ ಬೇಟೆ : 2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯನ್ ಪ್ರಜೆ ಅರೆಸ್ಟ್ !

31/03/2026 12:19 PM1 Min Read
Recent News

ಯುವಜನರೇ ಎಚ್ಚರ! ಅತಿಯಾದ ‘ಸ್ಕ್ರೀನ್ ಟೈಮ್’ನಿಂದ ಹೃದಯಕ್ಕೆ ಕುತ್ತು; ಆಘಾತಕಾರಿ ಮಾಹಿತಿ ಹೊರಹಾಕಿದ ಹೊಸ ಅಧ್ಯಯನ

31/03/2026 12:47 PM

ಕ್ರೆಡಿಟ್ ಕಾರ್ಡ್ ಬಳಕೆದಾರರೇ ಗಮನಿಸಿ: ನಾಳೆಯಿಂದ ಬದಲಾಗಲಿವೆ ಈ ಪ್ರಮುಖ ನಿಯಮಗಳು | Credit Card Rules

31/03/2026 12:31 PM

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧದ ಆತಂಕ: ಭಾರತದ 18 ಇಂಧನ ಹಡಗುಗಳು ಜಲಸ್ತಂಭನ; ದೇಶದ ತೈಲ ಪೂರೈಕೆಗೆ ಭಾರಿ ಅಡಚಣೆ!

31/03/2026 12:30 PM

BREAKING : ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ : ರಿಸಲ್ಟ್ ನೋಡಲು ಇಲ್ಲಿದೆ ಡೈರೆಕ್ಟ್ ಲಿಂಕ್ | Karnataka 1st PUC Results 2026

31/03/2026 12:27 PM
State News
KARNATAKA

BREAKING : ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ : ರಿಸಲ್ಟ್ ನೋಡಲು ಇಲ್ಲಿದೆ ಡೈರೆಕ್ಟ್ ಲಿಂಕ್ | Karnataka 1st PUC Results 2026

By kannadanewsnow5731/03/2026 12:27 PM KARNATAKA 2 Mins Read

ಬೆಂಗಳೂರು: ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಕ್ಷಣ ಬಂದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB)…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹಗಲು ವೇಳೆಯಲ್ಲೇ 7 ಗಂಟೆ ಉಚಿತ `ತ್ರೀ-ಫೇಸ್ ವಿದ್ಯುತ್’ ನೀಡಲು ಸರ್ಕಾರ ನಿರ್ಧಾರ !

31/03/2026 12:25 PM

BREAKING: ಬೆಂಗಳೂರಲ್ಲಿ ಪೊಲೀಸರ ಭರ್ಜರಿ ಬೇಟೆ : 2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯನ್ ಪ್ರಜೆ ಅರೆಸ್ಟ್ !

31/03/2026 12:19 PM

ಜನಸಾಮಾನ್ಯರಿಗೆ ಬಿಗ್ ಶಾಕ್ : ನಾಳೆಯಿಂದ ನೀರು, ವಿದ್ಯುತ್, ಟೋಲ್ ದರ ಏರಿಕೆ.!

31/03/2026 11:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.