Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಜಯ್ ಹಜಾರೆ ಟ್ರೋಫಿಯಲ್ಲಿ ದೆಹಲಿ ಪರ ‘ವಿರಾಟ್ ಕೊಹ್ಲಿ’ ಬ್ಯಾಟಿಂಗ್

02/12/2025 9:58 PM
Sanchar Saathi App

‘ಸಂಚಾರ್ ಸಾಥಿ ಅಪ್ಲಿಕೇಶನ್’ ಮೊದಲೇ ಸ್ಥಾಪಿಸಲು ‘ಆಪಲ್’ ನಕಾರ ; ವರದಿ

02/12/2025 9:30 PM

‘ದಿತ್ವಾ ಚಂಡಮಾರುತದಿಂದ ತತ್ತರಿಸಿದ ಜನರಿಗೆ ಸಹಾಯ ಹಸ್ತ ಚಾಚಿದ ಮೊದಲ ದೇಶ ಭಾರತ’ ; ಶ್ರೀಲಂಕಾ ಭಾವನಾತ್ಮಕ ಸಂದೇಶ!

02/12/2025 9:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಇಂದು ದಾವಣಗೆರೆಯಲ್ಲಿ `ರಾಜ್ಯ ಮಟ್ಟದ ಯುವಜನೋತ್ಸವ’ : CM ಸಿದ್ದರಾಮಯ್ಯ ಉದ್ಘಾಟನೆ.!
KARNATAKA

BIG NEWS : ಇಂದು ದಾವಣಗೆರೆಯಲ್ಲಿ `ರಾಜ್ಯ ಮಟ್ಟದ ಯುವಜನೋತ್ಸವ’ : CM ಸಿದ್ದರಾಮಯ್ಯ ಉದ್ಘಾಟನೆ.!

By kannadanewsnow5705/01/2025 5:36 AM

ದಾವಣಗೆರೆ : ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ನಡೆಸುವ ರಾಜ್ಯ ಮಟ್ಟದ ಯುವಜನೋತ್ಸವ ಜನವರಿ 5 ಮತ್ತು 6 ರಂದು ನಡೆಯಲಿದ್ದು ನಗರದ ಎಂ.ಬಿ.ಎ. ಮೈದಾನದ ಮುಖ್ಯ ವೇದಿಕೆಯಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕಾರ್ಯಕ್ರಮ ಉದ್ಘಾಟಿಸುವರು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.

ಯುವಜನೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸೇರಿದಂತೆ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಜನಪ್ರತಿನಿಧಿಗಳು ಮತ್ತು ಯುವ ಪ್ರಶಸ್ತಿ ಪುರಷ್ಕøತರು ಭಾಗವಹಿಸುವರು.

7 ಸ್ಪರ್ಧೆಗಳು; ರಾಜ್ಯ ಮಟ್ಟದ ಯುವಜನೋತ್ಸವ ಸ್ಪರ್ಧೆಯಲ್ಲಿ 7 ಸ್ಪರ್ಧೆಗಳಿದ್ದು ಪ್ರತ್ಯೇಕವಾಗಿ ನಡೆಯಲಿವೆ. ಜಾನಪದ ನೃತ್ಯ ಸ್ಪರ್ಧೆಯು ಬಿಐಇಟಿ ಕಾಲೇಜಿನ ಎಸ್.ಎಸ್.ಎಂ. ಸಾಂಸ್ಕøತಿಕ ಸಭಾಂಗಣ, ಜಾನಪದ ಗೀತೆ ಸ್ಪರ್ಧೆಯು ಬಾಪೂಜಿ ಎಂಬಿಎ ಕಾಲೇಜು ಸಭಾಂಗಣ, ವಿಜ್ಞಾನ ವಸ್ತು ಪ್ರದರ್ಶನ ಎಂಬಿಎ ಮೈದಾನದಲ್ಲಿನ ಎಸ್.ಎಸ್. ಪಬ್ಲಿಕ್ ಸ್ಕೂಲ್, ಕವನ ರಚನೆ ಎಂಬಿಎ ಕಾಲೇಜಿನ ಕೊಠಡಿ 1, ಕಥೆ ಬರೆಯುವುದು ಇಲ್ಲಿನ ಕೊಠಡಿ 2 ರಲ್ಲಿ ಹಾಗೂ ಚಿತ್ರಕಲೆ ಸ್ಪರ್ಧೆ ಮತ್ತು ಘೋಷಣ ಸ್ಪರ್ಧೆಯು ಲಲಿತ ಕಲಾ ಮಹಾವಿದ್ಯಾಲಯದಲ್ಲಿ ನಡೆಯಲಿದೆ.

ರಾಜ್ಯ ಎಲ್ಲಾ ಜಿಲ್ಲೆಗಳಿಂದ ಏಳು ಸ್ಪರ್ಧೆಗಳಲ್ಲಿ ಭಾಗವಹಿಸಲು ಯುವ ಸ್ಪರ್ಧಾಳುಗಳು ಆಗಮಿಸುವರು. ಇಲ್ಲಿನ ಸ್ಪರ್ಧೆಯಲ್ಲಿ ವಿಜೇತರಾಗುವವರಿಗೆ ಮೊದಲ ಬಹುಮಾನವಾಗಿ ರೂ.25000, ದ್ವಿತೀಯ ರೂ.15000 ಮತ್ತು ತೃತೀಯ ಬಹುಮಾನವಾಗಿ ರೂ.10000 ಗಳನ್ನು ಪ್ರಶಸ್ತಿ ಪತ್ರದೊಂದಿಗೆ ನಗದು ನೀಡಲಾಗುತ್ತದೆ. ಇಲ್ಲಿ ವಿಜೇತರಾದವರು ಜನವರಿ 11 ಮತ್ತು 12 ರಂದು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸುವರು ಎಂದರು.

ಜನಪದ ರ್ಯಾಲಿ; ಯುವಜನೋತ್ಸವವು ಜನವರಿ 5 ರಂದು ಬೆಳಗ್ಗೆ ಉದ್ಘಾಟನೆಯಾಗಲಿದ್ದು ಇದರ ಅಂಗವಾಗಿ ಬೆಳಗ್ಗೆ 9 ಗಂಟೆಯಿಂದ ವಿವಿಧ ಕಲಾತಂಡಗಳೊಂದಿಗೆ ಹಾಗೂ ಶಾಲಾ, ಕಾಲೇಜು ವಿದ್ಯಾರ್ಥಿಗಳೊಂದಿಗೆ ಜನಪದ ಮೆರವಣಿಗೆ ಮೂಲಕ ಎಂಬಿಎ ಮೈದಾನಕ್ಕೆ ತೆರಳಿ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ. ಕಲಾಮೇಳದಲ್ಲಿ ದಕ್ಷಿಣ ವಲಯದ ಸಾಂಸ್ಕøತಿಕ ಕೇಂದ್ರದಿಂದ 10 ಕ್ಕಿಂತ ಹೆಚ್ಚು ತಂಡಗಳು ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ 10 ಕ್ಕೂ ಹೆಚ್ಚು ಕಲಾ ತಂಡಗಳು ಸೇರಿದಂತೆ ವಿವಿಧ ಕಾಲೇಜುಗಳು ವಿದ್ಯಾರ್ಥಿಗಳ ತಂಡಗಳು ಕಲಾ ಮೇಳದಲ್ಲಿ ಭಾಗಿಯಾಗಲಿದ್ದು ಆಕರ್ಷಕ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದರು.

ಕದ್ರಿ ಮಣಿಕಂಠ ಮತ್ತು ತಂಡದಿಂದ ಸಾಂಸ್ಕøತಿಕ ಸಂಜೆ; ಯುವಜನೋತ್ಸವ ಅಂಗವಾಗಿ ಖ್ಯಾತ ಕಲಾವಿದರಾದ ಕದ್ರಿ ಮಣಿಕಂಠ ಮತ್ತು ತಂಡದವರಿಂದ ಜನವರಿ 5 ರ ಸಂಜೆ 5 ಗಂಟೆಯಿಂದ ಪ್ರಧಾನ ವೇದಿಕೆ ಎಂಬಿಎ ಮೈದಾನದಲ್ಲಿ ಸಾಂಸ್ಕøತಿಕ ಸಂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ವೇದಿಕೆಯಲ್ಲಿ ಐದು ಸಾವಿರಕ್ಕಿಂತಲೂ ಹೆಚ್ಚು ಆಸನದ ವ್ಯವಸ್ಥೆ ಮಾಡಲಾಗಿದ್ದು ಸುಮಾರು 10 ಸಾವಿರಕ್ಕೂ ಹೆಚ್ಚಿನ ಜನರು ಸೇರುವ ನಿರೀಕ್ಷೆ ಹೊಂದಲಾಗಿದೆ. ಗ್ಲಾಸ್‍ಹೌಸ್‍ನಲ್ಲಿ ಫಲಪುಷ್ಪ ಪ್ರದರ್ಶನ ಭಾನುವಾರದಿಂದ ನಡೆಯುತ್ತಿದ್ದು ಜನವರಿ 5 ರವರೆಗೆ ಯುವಜನೋತ್ಸವ ಹಿನ್ನಲೆಯಲ್ಲಿ ಮುಂದುವರೆಸಲಾಗಿದ್ದು ದಾವಣಗೆರೆ ಜನತೆಯು ಯುವಜನೋತ್ಸವವನ್ನು ವೀಕ್ಷಣೆ ಮಾಡುವ ಮೂಲಕ ಪ್ರೋತ್ಸಾಹಿಸಬೇಕಾಗಿದೆ ಎಂದರು.

ಯುವಜನೋತ್ಸವ ವೀಕ್ಷಣೆಗೆ ನಗರ ಸಾರಿಗೆ; ಜನವರಿ 5 ಮತ್ತು 6 ರಂದು ನಡೆಯುವ ಯುವಜನೋತ್ಸವ ವೀಕ್ಷಣೆಗಾಗಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಕೆಎಸ್‍ಆರ್‍ಟಿಸಿ ಯಿಂದ ನಿರಂತರ ಬಸ್ ಸೇವೆಯನ್ನು ಒದಗಿಸಲಾಗುತ್ತಿದೆ. ವೀಕ್ಷಣೆ ಮಾಡುವವರು ಈ ಬಸ್ ಸೌಲಭ್ಯ ಪಡೆಯಬಹುದಾಗಿದ್ದು ಎಲ್ಲಾ ವೇದಿಕೆಗಳಿಗೂ ಬಸ್ ಕರೆದುಕೊಂಡು ಹೋಗಲಿದೆ ಎಂದರು.

ಜನಪ್ರತಿನಿಧಿಗಳು, ಯುವ ಪುರಸ್ಕøತರು ಭಾಗಿ; ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಸೇರಿದಂತೆ ರಾಜ್ಯದಲ್ಲಿನ ಪ್ರಮುಖ ಯುವ ಪುರಸ್ಕøತರು ಭಾಗವಹಿಸುವರು. ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಊಟದ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗುತ್ತಿದೆ. ವಿವಿಧ ಜಿಲ್ಲೆಗಳಿಂದ ಆಗಮಿಸುವ ಯುವ ಸ್ಪರ್ಧಾಳುಗಳಿಗೆ ಊಟ, ವಸತಿ ಸೇರಿದಂತೆ ಜಿಲ್ಲೆಯಲ್ಲಿನ ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವಾಸ ಹಮ್ಮಿಕೊಳ್ಳಲು ಸೂಕ್ತ ವಾಹನಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದರು.

BIG NEWS : ಇಂದು ದಾವಣಗೆರೆಯಲ್ಲಿ `ರಾಜ್ಯ ಮಟ್ಟದ ಯುವಜನೋತ್ಸವ’ : CM ಸಿದ್ದರಾಮಯ್ಯ ಉದ್ಘಾಟನೆ.! BIG NEWS: CM Siddaramaiah inaugurates 'State-level Youth Festival' in Davanagere today
Share. Facebook Twitter LinkedIn WhatsApp Email

Related Posts

ರಾಜ್ಯದ NHM ನೌಕರರಿಗೆ ಹೊಸ HR ಪಾಲಿಸಿ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು ಗೊತ್ತಾ?

02/12/2025 8:24 PM2 Mins Read

ಮಂಡ್ಯದ ಮದ್ದೂರು ಪಟ್ಟಣದ ಟಿ.ಬಿ ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆ ಅಗಲೀಕರಣ ಕಾಮಗಾರಿ: ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

02/12/2025 8:09 PM1 Min Read

BREAKING: ರಾಜ್ಯದ ಖಾಯಂ, ಗುತ್ತಿಗೆ, ಹೊರಗುತ್ತಿಗೆ ಮಹಿಳಾ ನೌಕರರಿಗೆ ವೇತನ ಸಹಿತ ಋತುಚಕ್ರ ರಜೆ: ಸರ್ಕಾರ ಅಧಿಕೃತ ಆದೇಶ

02/12/2025 7:51 PM1 Min Read
Recent News

ವಿಜಯ್ ಹಜಾರೆ ಟ್ರೋಫಿಯಲ್ಲಿ ದೆಹಲಿ ಪರ ‘ವಿರಾಟ್ ಕೊಹ್ಲಿ’ ಬ್ಯಾಟಿಂಗ್

02/12/2025 9:58 PM
Sanchar Saathi App

‘ಸಂಚಾರ್ ಸಾಥಿ ಅಪ್ಲಿಕೇಶನ್’ ಮೊದಲೇ ಸ್ಥಾಪಿಸಲು ‘ಆಪಲ್’ ನಕಾರ ; ವರದಿ

02/12/2025 9:30 PM

‘ದಿತ್ವಾ ಚಂಡಮಾರುತದಿಂದ ತತ್ತರಿಸಿದ ಜನರಿಗೆ ಸಹಾಯ ಹಸ್ತ ಚಾಚಿದ ಮೊದಲ ದೇಶ ಭಾರತ’ ; ಶ್ರೀಲಂಕಾ ಭಾವನಾತ್ಮಕ ಸಂದೇಶ!

02/12/2025 9:22 PM

ಕ್ರಿಮಿನಲ್ ಪ್ರಕರಣಗಳಲ್ಲಿ ಜಾಮೀನು ನೀಡಲು ಸಮಾನತೆ ಒಂದೇ ಆಧಾರವಲ್ಲ ; ಸುಪ್ರೀಂಕೋರ್ಟ್ ಮಹತ್ವದ ತೀರ್ಪು

02/12/2025 9:11 PM
State News
KARNATAKA

ರಾಜ್ಯದ NHM ನೌಕರರಿಗೆ ಹೊಸ HR ಪಾಲಿಸಿ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು ಗೊತ್ತಾ?

By kannadanewsnow0902/12/2025 8:24 PM KARNATAKA 2 Mins Read

ಶಿವಮೊಗ್ಗ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನ( NHM) ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ…

ಮಂಡ್ಯದ ಮದ್ದೂರು ಪಟ್ಟಣದ ಟಿ.ಬಿ ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆ ಅಗಲೀಕರಣ ಕಾಮಗಾರಿ: ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

02/12/2025 8:09 PM

BREAKING: ರಾಜ್ಯದ ಖಾಯಂ, ಗುತ್ತಿಗೆ, ಹೊರಗುತ್ತಿಗೆ ಮಹಿಳಾ ನೌಕರರಿಗೆ ವೇತನ ಸಹಿತ ಋತುಚಕ್ರ ರಜೆ: ಸರ್ಕಾರ ಅಧಿಕೃತ ಆದೇಶ

02/12/2025 7:51 PM

ಸಾಗರ ತಾಲ್ಲೂಕು ಜನತೆ ಗಮನಕ್ಕೆ: ಡಿ.4ರಂದು ‘ಶಾಸಕ ಗೋಪಾಲಕೃಷ್ಣ ಬೇಳೂರು ಜನ ಸಂಪರ್ಕ ಸಭೆ’

02/12/2025 7:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.