Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಾಸನದಲ್ಲಿ ಮತ್ತೆ ಕಾಡಾನೆ ಅಟ್ಟಹಾಸ : ಆನೆ ದಾಳಿಗೆ ಮಹಿಳೆ ದುರ್ಮರಣ!

13/01/2026 2:31 PM

BIG NEWS : ‘ಜಿ ರಾಮ್ ಜಿ’ ಯೋಜನೆಯಲ್ಲಿರೋದು ಗೋಡ್ಸೆ ರಾಮ : ಸಿಎಂ ಸಿದ್ದರಾಮಯ್ಯ ಕಿಡಿ

13/01/2026 2:28 PM

BREAKING : ಲಕ್ಕುಂಡಿಯಲ್ಲಿ ಸಿಕ್ಕ ನಿಧಿಯನ್ನು ಹಸ್ತಾಂತರಿಸಿದ ಬಾಲಕ ಪ್ರಜ್ವಲ್ ಗೆ, ಪಿಯುಸಿವರೆಗೆ ಉಚಿತ ಶಿಕ್ಷಣ

13/01/2026 2:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸ್ವ-ಸಹಾಯ ಗುಂಪಿನ ಮಹಿಳೆಯರ ಖಾದಿ ಉತ್ಪನ್ನಗಳ ಮಾರಾಟ ಮೇಳ : ಬೆಳಗಾವಿಯಲ್ಲಿ ಇಂದು `CM ಸಿದ್ದರಾಮಯ್ಯ’ ಉದ್ಘಾಟನೆ
KARNATAKA

BIG NEWS : ಸ್ವ-ಸಹಾಯ ಗುಂಪಿನ ಮಹಿಳೆಯರ ಖಾದಿ ಉತ್ಪನ್ನಗಳ ಮಾರಾಟ ಮೇಳ : ಬೆಳಗಾವಿಯಲ್ಲಿ ಇಂದು `CM ಸಿದ್ದರಾಮಯ್ಯ’ ಉದ್ಘಾಟನೆ

By kannadanewsnow5726/12/2024 6:27 AM

ಬೆಂಗಳೂರು : ದುಡಿಯುವ ವರ್ಗಗಳ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ರಾಜ್ಯ ಸರ್ಕಾರದ ಕಾಳಜಿಯ ಮತ್ತೊಂದು ಕುರುಹಾಗಿ ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳು ಹಾಗೂ ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ ಮತ್ತು ಮಾರಾಟವನ್ನು ಡಿ.26ರ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.‌

“ಅಸ್ಮಿತೆ ವ್ಯಾಪಾರಮೇಳ-2024” ಹೆಸರಿನಲ್ಲಿ ಮುಖ್ಯಮಂತ್ರಿಗಳ ಕನಸು ಮತ್ತು ಕಾಳಜಿಯನ್ನು ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಸಾಕಾರಗೊಳಿಸಿದ್ದಾರೆ. ಶ್ರಮಿಕ ವರ್ಗದ ಮಹಿಳಾ ಶಕ್ತಿಯನ್ನು ಆರ್ಥಿಕವಾಗಿ ಮೇಲೆತ್ತಬೇಕು ಎನ್ನುವ ಮುಖ್ಯ ಉದ್ದೇಶದೊಂದಿಗೆ ಹಲವಾರು ಯೋಜನೆಗಳನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದೆ. ಈ ನಿಟ್ಟಿನಲ್ಲಿ ಸ್ವ ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳು ಹಾಗೂ ಖಾದಿ ಉತ್ಪನ್ನಗಳ ಬೃಹತ್‌ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಬೆಳಗಾವಿಯಲ್ಲಿ ಆಯೋಜಿಸಲಾಗಿದೆ.

ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಮತ್ತು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮತ್ತು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಸಹಭಾಗಿತ್ವದಲ್ಲಿ ಬೆಳಗಾವಿಯ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಈ ಮೇಳವನ್ನು ಡಿಸೆಂಬರ್‌ 26 ರಿಂದ ಜನವರಿ 4 ರವರೆಗೆ ಆಯೋಜಿಸಲಾಗಿದೆ.

ನಗರ ಹಾಗೂ ಗ್ರಾಮೀಣ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸುವ ಉತ್ಪನ್ನಗಳು ಮಾರಾಟ ಮಾಡುತ್ತಿರುವುದರಿಂದ ಹೆಚ್ಚು ಹೆಚ್ಚು ಸಾರ್ವಜನಿಕರು ಈ ಮೇಳದ ಸದುಪಯೋಗವನ್ನು ಪಡೆದುಕೊಂಡು ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳನ್ನು ಖರೀದಿಸಿ, ಹೆಚ್ಚಿನ ವಹಿವಾಟಿನೊಂದಿಗೆ ಅವರ ಆರ್ಥಿಕ ಸಬಲತೆಗೆ ಕೈ ಜೋಡಿಸಲಿದ್ದಾರೆ ಎಂಬ ನಿರೀಕ್ಷೆ ಹೊಂದಲಾಗಿದೆ.

ಮಹಿಳೆಯರ ಉತ್ಪನ್ನಗಳ ಮಾರಾಟಕ್ಕೆ ಹಳ್ಳಿ ಸಂತೆ, ತಾಲ್ಲೂಕು ಮಟ್ಟದಲ್ಲಿ ಮಾಸಿಕ ಸಂತೆ, ಜಿಲ್ಲಾ ವಸ್ತು ಪ್ರದರ್ಶನ ಮಾರಾಟ ಮೇಳ ಹಾಗೂ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ನಡೆಯುವ ಮೇಳಗಳನ್ನು ಆಯೋಜಿಸುವ ಮೂಲಕ ಮಾರುಕಟ್ಟೆ ಒದಗಿಸಲಾಗುತ್ತಿದೆ.

ಬೆಳಗಾವಿಯಲ್ಲಿ ಕಳೆದ 3 ವರ್ಷದಿಂದ ಬೃಹತ್‌ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಪ್ರತಿ ದಿನ ಸಂಜೆ 6.30 ರಿಂದ 9.00 ಗಂಟೆಯವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರುತ್ತದೆ.

ರಾಜ್ಯದ ಎಲ್ಲಾ ಜಿಲ್ಲೆಗಳ ಸ್ವ-ಸಹಾಯ ಗುಂಪಿನ ಮಹಿಳೆಯರು ತಮ್ಮ ಜಿಲ್ಲೆಯ ಪ್ರಮುಖ ಉತ್ಪನ್ನಗಳನ್ನು ಇಲ್ಲಿ ಪ್ರದರ್ಶಿಸುತ್ತಿದ್ದಾರೆ. ಒಟ್ಟು 150 ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ 10 ಆಹಾರ ಮೇಳದ ಮಳಿಗೆಗಳು ಮತ್ತು 50 ಖಾದಿ ಉತ್ಪನ್ನಗಳ ಮಳಿಗೆಗಳನ್ನು ಒಳಗೊಂಡಿದೆ.

ಈ ಮೇಳಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು, ಡಿಸೆಂಬರ್‌ 26ರ ಬೆಳಗ್ಗೆ 10.30 ರಿಂದ ರಾತ್ರಿ 9.30 ರವರೆಗೆ ಪ್ರದರ್ಶನವಿರಲಿದೆ.

ಪ್ರದರ್ಶನಗೊಳ್ಳುವ ಆಕರ್ಷಕ ವಸ್ತುಗಳು:

ಚನ್ನಪಟ್ಟಣದ ಮರದ ಗೊಂಬೆಗಳು, ಕೊಪ್ಪಳದ ಕಿನ್ನಾಳ ಆಟದ ಸಾಮಾನುಗಳು, ಮೊಳಕಾಲ್ಮೂರು ಸೀರೆಗಳು, ಇಳಕಲ್ ಸೀರೆಗಳು, ರೇಷ್ಮೆ ಸೀರೆಗಳು, ವಿವಿಧ ಅಕರ್ಷಣೆಯ ಬಟ್ಟೆಗಳು, ನಾರಿನ ಉತ್ಪನ್ನದ ಬ್ಯಾಗ್‌ಗಳು, ಮಸಾಲಾ ಉತ್ಪನ್ನಗಳು, ಸಿರಿ ಧಾನ್ಯ ಉತ್ಪನ್ನಗಳು, ಮೌಲ್ಯವರ್ಧಿತ ಕರಾವಳಿ ಉತ್ಪನ್ನಗಳು, ವಿವಿಧ ಬಗೆಯ ಖಾದಿ ಉತ್ಪನ್ನಗಳು, ಬಾಳೆ ನಾರಿನಿಂದ ಉತ್ಪಾದಿಸಿದ ಉತ್ಪನ್ನಗಳು, ಗೃಹಾಲಂಕಾರಿಕ ವಸ್ತುಗಳು, ಆಯುರ್ವೇದ ಔಷಧಿಯುತ ಉತ್ಪನ್ನಗಳು, ಪಾರಂಪರಿಕ ವಸ್ತುಗಳು, ಗೃಹೋಪಯೋಗಿ ವಸ್ತುಗಳು, ನವೀನ ವಿನ್ಯಾಸದ ಆಭರಣಗಳು, ಆಹಾರ ಉತ್ಪನ್ನಗಳು.

ಅಕ್ಕ ಕೆಫೆ ಮಾದರಿ:
ಸರ್ಕಾರವು 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ರಾಜ್ಯದಲ್ಲಿ 50 ಅಕ್ಕ ಕೆಫೆಗಳನ್ನು ಒಂದೇ ಮಾದರಿ ವಿನ್ಯಾಸದಡಿ ಅನುಷ್ಠಾನಗೊಳಿಸಲಾಗುತ್ತಿದೆ. 1200 ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ಜೀವನೋಪಾಯಕ್ಕೆ ಅನುಕೂಲ ಕಲ್ಪಿಸಲಾಗುತ್ತಿದೆ. ಅಕ್ಕ-ಕೆಫೆ ಕಾರ್ಯಕ್ರಮದ ಭಾಗವಾಗಿ ಈ ಮೇಳದ ಮೈದಾನದಲ್ಲಿನ ಆಹಾರ ಕೋರ್ಟ್‌ ಅನ್ನು “ಅಕ್ಕ-ಕೆಫೆ” ಶೀರ್ಷಿಕೆಯಡಿ ಆಕರ್ಷಣೀಯವಾಗಿ ಆಯೋಜಿಸಲಾಗುತ್ತಿದೆ.

ಬಗೆಬಗೆಯ ಆಹಾರ ಪದಾರ್ಥಗಳ ಮಾರಾಟ:
ಆಹಾರ ಮಳಿಗೆಗಳಲ್ಲಿ ಉತ್ತರ ಕರ್ನಾಟಕದ ಗಿರ್ಮಿಟ್‌/ಮಂಡಕ್ಕಿ, ಮೆಣಸಿನಕಾಯಿ ಬಜ್ಜಿ, ಜೋಳದ ಖಡಕ್‌ ರೊಟ್ಟಿ, ಹೋಳಿಗೆ, ಮಂಗಳೂರ ನೀರ್‌ ದೋಸೆ ಮತ್ತು ಮಾಂಸಹಾರಿ ಆಹಾರಗಳಾದ ಬಂಬೂ ಬಿರಿಯಾನಿ ಮುಂತಾದವುಗಳು ಲಭ್ಯವಿರಲಿದೆ.

BIG NEWS : ಸ್ವ-ಸಹಾಯ ಗುಂಪಿನ ಮಹಿಳೆಯರ ಖಾದಿ ಉತ್ಪನ್ನಗಳ ಮಾರಾಟ ಮೇಳ : ಬೆಳಗಾವಿಯಲ್ಲಿ ಇಂದು `CM ಸಿದ್ದರಾಮಯ್ಯ' ಉದ್ಘಾಟನೆ BIG NEWS: 'CM Siddaramaiah' to inaugurate khadi products sale fair for women in self-help groups in Belagavi today
Share. Facebook Twitter LinkedIn WhatsApp Email

Related Posts

BREAKING : ಹಾಸನದಲ್ಲಿ ಮತ್ತೆ ಕಾಡಾನೆ ಅಟ್ಟಹಾಸ : ಆನೆ ದಾಳಿಗೆ ಮಹಿಳೆ ದುರ್ಮರಣ!

13/01/2026 2:31 PM1 Min Read

BIG NEWS : ‘ಜಿ ರಾಮ್ ಜಿ’ ಯೋಜನೆಯಲ್ಲಿರೋದು ಗೋಡ್ಸೆ ರಾಮ : ಸಿಎಂ ಸಿದ್ದರಾಮಯ್ಯ ಕಿಡಿ

13/01/2026 2:28 PM2 Mins Read

BREAKING : ಲಕ್ಕುಂಡಿಯಲ್ಲಿ ಸಿಕ್ಕ ನಿಧಿಯನ್ನು ಹಸ್ತಾಂತರಿಸಿದ ಬಾಲಕ ಪ್ರಜ್ವಲ್ ಗೆ, ಪಿಯುಸಿವರೆಗೆ ಉಚಿತ ಶಿಕ್ಷಣ

13/01/2026 2:19 PM1 Min Read
Recent News

BREAKING : ಹಾಸನದಲ್ಲಿ ಮತ್ತೆ ಕಾಡಾನೆ ಅಟ್ಟಹಾಸ : ಆನೆ ದಾಳಿಗೆ ಮಹಿಳೆ ದುರ್ಮರಣ!

13/01/2026 2:31 PM

BIG NEWS : ‘ಜಿ ರಾಮ್ ಜಿ’ ಯೋಜನೆಯಲ್ಲಿರೋದು ಗೋಡ್ಸೆ ರಾಮ : ಸಿಎಂ ಸಿದ್ದರಾಮಯ್ಯ ಕಿಡಿ

13/01/2026 2:28 PM

BREAKING : ಲಕ್ಕುಂಡಿಯಲ್ಲಿ ಸಿಕ್ಕ ನಿಧಿಯನ್ನು ಹಸ್ತಾಂತರಿಸಿದ ಬಾಲಕ ಪ್ರಜ್ವಲ್ ಗೆ, ಪಿಯುಸಿವರೆಗೆ ಉಚಿತ ಶಿಕ್ಷಣ

13/01/2026 2:19 PM

BIG NEWS : ರಾಕಿಂಗ್ ಸ್ಟಾರ್ ನಟ ಯಶ್ ಬರ್ತಡೇಗೆ ಬ್ಯಾನರ್ ಹಾಕಿದ್ದಕ್ಕೆ ‘FIR’ ದಾಖಲು!

13/01/2026 2:12 PM
State News
KARNATAKA

BREAKING : ಹಾಸನದಲ್ಲಿ ಮತ್ತೆ ಕಾಡಾನೆ ಅಟ್ಟಹಾಸ : ಆನೆ ದಾಳಿಗೆ ಮಹಿಳೆ ದುರ್ಮರಣ!

By kannadanewsnow0513/01/2026 2:31 PM KARNATAKA 1 Min Read

ಹಾಸನ : ಹಾಸನದಲ್ಲಿ ಮತ್ತೆ ಕಾಡಾನೆ ಅಟ್ಟಹಾಸ ಮೆರೆದಿದ್ದು ಆನೆ ದಾಳಿಗೆ ಮಹಿಳೆ ಒಬ್ಬರು ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ…

BIG NEWS : ‘ಜಿ ರಾಮ್ ಜಿ’ ಯೋಜನೆಯಲ್ಲಿರೋದು ಗೋಡ್ಸೆ ರಾಮ : ಸಿಎಂ ಸಿದ್ದರಾಮಯ್ಯ ಕಿಡಿ

13/01/2026 2:28 PM

BREAKING : ಲಕ್ಕುಂಡಿಯಲ್ಲಿ ಸಿಕ್ಕ ನಿಧಿಯನ್ನು ಹಸ್ತಾಂತರಿಸಿದ ಬಾಲಕ ಪ್ರಜ್ವಲ್ ಗೆ, ಪಿಯುಸಿವರೆಗೆ ಉಚಿತ ಶಿಕ್ಷಣ

13/01/2026 2:19 PM

BIG NEWS : ರಾಕಿಂಗ್ ಸ್ಟಾರ್ ನಟ ಯಶ್ ಬರ್ತಡೇಗೆ ಬ್ಯಾನರ್ ಹಾಕಿದ್ದಕ್ಕೆ ‘FIR’ ದಾಖಲು!

13/01/2026 2:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.