ಬೆಂಗಳೂರು : ಬೆಂಗಳೂರಿನ ಬಾಬು ಸಾಬ್ ಪಾಳ್ಯದಲ್ಲಿ ನಡೆದ ಕಟ್ಟಡ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಸಿಎಂ ಸಿದ್ದರಾಮಯ್ಯ ಅವರು ಬಾಬುಸಾಬ್ ಪಾಳ್ಯಕ್ಕೆ ಕೆಲವೇ ಕ್ಷಣಗಳಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಈ ಒಂದು ಕಟ್ಟಡ ದುರಂತದಲ್ಲಿ ಇದುವರೆಗೂ 8 ಜನ ಕಾರ್ಮಿಕರು ಸಾವನ್ನಪ್ಪಿದ್ದು ಹಲವು ಕಾರ್ಮಿಕರು ಗಾಯಗೊಂಡಿದ್ದಾರೆ. ಈ ಒಂದು ದುರಂತದಲ್ಲೇ ಮೃತಪಟ್ಟ ಕುಟುಂಬಸ್ಥರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ ಕೆಲವೇ ಕ್ಷಣಗಳಲ್ಲಿ ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಸಚಿವರು, ಅಧಿಕಾರಿಗಳು ಕೂಡ ಸಾಥ್ ನೀಡಲಿದ್ದಾರೆ. ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳಿಂದ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆಯಲಿದ್ದಾರೆ.ನಂತರ ಅಲ್ಲಿಂದ ರಾಮನಗರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಇಂದು ಸಿ ಪಿ ಯೋಗೇಶ್ವರ್ ಅವರ ನಾಮಪತ್ರ ಸಲ್ಲಿಕೆಯಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ.