Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಹೀಗಿವೆ ಕರ್ನಾಟಕದ ಸೈಬರ್ ಪೊಲೀಸ್ ಠಾಣೆಗೆ ದೂರವಾಣಿ ಸಂಖ್ಯೆ

13/05/2025 5:54 PM

SHOCKING : ಬೈಕ್ ಓಡಿಸುವಾಗಲೇ ‘ಹೃದಯಾಘಾತವಾಗಿ’ ಸವಾರ ಸಾವು | Watch Video

13/05/2025 5:47 PM

ಇ-ಖಾತಾ ನೀಡಲು 6,500 ಲಂಚ ಸ್ವೀಕರಿಸುತ್ತಿದ್ದ PDO, ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

13/05/2025 5:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಅರಸೀಕೆರೆ ತರಕಾರಿ ಮಾರುಕಟ್ಟೆಯಲ್ಲಿ ‘ಶೀತಲ ಗೃಹ’ ನಿರ್ಮಾಣ : ಸಚಿವ ಶಿವಾನಂದ ಪಾಟೀಲ್
KARNATAKA

BIG NEWS : ಅರಸೀಕೆರೆ ತರಕಾರಿ ಮಾರುಕಟ್ಟೆಯಲ್ಲಿ ‘ಶೀತಲ ಗೃಹ’ ನಿರ್ಮಾಣ : ಸಚಿವ ಶಿವಾನಂದ ಪಾಟೀಲ್

By kannadanewsnow0513/12/2024 5:34 PM

ಬೆಳಗಾವಿ : ಆರ್ಥಿಕ ಇಲಾಖೆ ಅನುಮೋದನೆ ದೊರೆತ ನಂತರ ಅರಸೀಕೆರೆ ತರಕಾರಿ ಮಾರುಕಟ್ಟೆಯಲ್ಲಿ ಶೀತಲಗೃಹ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತೋಟಗಾರಿಕೆ ಬೆಳೆ, ಪುಷ್ಪೋದ್ಯಮ, ಮೆಣಸಿನಕಾಯಿ ಆವಕ ಹೆಚ್ಚು ಇರುವ ಮಾರುಕಟ್ಟೆಗಳಲ್ಲಿ ಶೀತಲಗೃಹ ನಿರ್ಮಾಣ ಮಾಡಬೇಕು ಎಂಬುದು ಸರ್ಕಾರದ ಆಶಯವಾಗಿದೆ.

೨೦೨೪-೨೫ನೇ ಸಾಲಿನ ಆರ್‌ ಐಡಿಎಫ್‌ -೩೦ ಯೋಜನೆ ಅಡಿಯಲ್ಲಿ ೨೫೪.೫೦ ಕೋಟಿ ರೂ. ಅನುದಾನ ಮಂಜೂರು ಮಾಡಲು ಆರ್ಥಿಕ ಇಲಾಖೆಗೆ ಕೋರಿಕೆ ಸಲ್ಲಿಸಲಾಗಿದ್ದು, ೧೪೪.೭೫ ಕೋಟಿ ರೂ. ವೆಚ್ಚದಲ್ಲಿ ಶೀತಲ ಗೃಹ ಮತ್ತಿತರ ಸೌಕರ್ಯ ನಿರ್ಮಾಣಕ್ಕೆ ಅನುಮೋದನೆ ನೀಡಿತ್ತು.

ಆದರೆ ಬಹುತೇಕ ಸಚಿವರು ಮತ್ತು ಶಾಸಕರಿಂದ ಶೀತಲಗೃಹ ನಿರ್ಮಾಣದ ಕೋರಿಕೆಗಳು ಬಂದಿರುವ ಹಿನ್ನೆಲೆಯಲ್ಲಿ ೩೫೪.೭೫ ಕೋಟಿ ರೂ. ಹೆಚ್ಚುವರಿ ಅನುದಾನ ಕೋರಿ ಆರ್ಥಿಕ ಇಲಾಖೆಗೆ ಪುನಃ ಕೋರಿಕೆ ಸಲ್ಲಿಸಲಾಗಿದೆ. ಅನುಮೋದನೆ ದೊರೆತ ನಂತರ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.

ನಷ್ಟದ ಸಹಕಾರಿ ಸಕ್ಕರೆ ಕಾರ್ಖಾನೆ ಖಾಸಗಿ ಗುತ್ತಿಗೆಗೆ, ಕೃಷಿ ಮಾರುಕಟ್ಟೆ

ಆರ್ಥಿಕ ಸಂಕಷ್ಟ ಹಾಗೂ ಇತರ ಆಡಳಿತಾತ್ಮಕ ಕಾರಣಗಳಿಂದ ಸ್ಥಗಿತಗೊಂಡಿರುವ ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ಖಾಸಗಿಯವರಿಗೆ ಗುತ್ತಿಗೆ ಆಧಾರದ ಮೇಲೆ ನೀಡುವ ಮೂಲಕ ಪುನಶ್ಚೇತನಗೊಳಿಸುವುದು ಸರ್ಕಾರ ಉದ್ದೇಶವಾಗಿದೆ ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಾಬಾ ಸಾಹೇಬ್‌ ಪಾಟೀಲ್‌ (ಕಿತ್ತೂರು) ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಆರ್ಥಿಕ ಸಂಕಷ್ಟದಲ್ಲಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಕಾರ್ಖಾನೆಗೆ ಸರ್ಕಾರದಿಂದ ಬಂಡವಾಳ ಅಥವಾ ಅನುದಾನ ನೀಡುವ ನೀತಿ ಸರ್ಕಾರದ ಮುಂದೆ ಇಲ್ಲ. ಸಾಲ ಪಡೆದು ಪುನಶ್ಚೇತನಗೊಳಿಸುವ ಪ್ರಯತ್ನ ಮಾಡಿದರೆ ಸರ್ಕಾರ ನೆರವಿಗೆ ಬರಲಿದೆ ಎಂದು ತಿಳಿಸಿದರು.

ಕಾರ್ಖಾನೆಯ ಕಾರ್ಯನಿರ್ವಹಣೆಗೆ ಅಗತ್ಯ ಸಂಪನ್ಮೂಲ ಕ್ರೋಢೀಕರಣ ಮಾಡುವುದು ಆಡಳಿತ ಮಂಡಳಿಯ ಜವಾಬ್ದಾರಿಯಾಗಿದ್ದು, ಸಾಮಾನ್ಯ ಸಭೆ ಮತ್ತು ಆಡಳಿತ ಮಂಡಳಿ ಸಭೆಗಳಲ್ಲಿ ಸೂಕ್ತ ತೀರ್ಮಾನ ಕೈಗೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ನಿಯಮಾನುಸಾರ ಪರಿಶೀಲನೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

Share. Facebook Twitter LinkedIn WhatsApp Email

Related Posts

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಹೀಗಿವೆ ಕರ್ನಾಟಕದ ಸೈಬರ್ ಪೊಲೀಸ್ ಠಾಣೆಗೆ ದೂರವಾಣಿ ಸಂಖ್ಯೆ

13/05/2025 5:54 PM1 Min Read

ಇ-ಖಾತಾ ನೀಡಲು 6,500 ಲಂಚ ಸ್ವೀಕರಿಸುತ್ತಿದ್ದ PDO, ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

13/05/2025 5:36 PM1 Min Read

8 ಸೆಂ.ಮೀ ಅಂಡಾಶಯ ಚೀಲ ಹೊಂದಿದ್ದ 16 ವರ್ಷದ ವಿದ್ಯಾರ್ಥಿಗೆ ಪೋರ್ಟಿಸ್ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

13/05/2025 5:09 PM1 Min Read
Recent News

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಹೀಗಿವೆ ಕರ್ನಾಟಕದ ಸೈಬರ್ ಪೊಲೀಸ್ ಠಾಣೆಗೆ ದೂರವಾಣಿ ಸಂಖ್ಯೆ

13/05/2025 5:54 PM

SHOCKING : ಬೈಕ್ ಓಡಿಸುವಾಗಲೇ ‘ಹೃದಯಾಘಾತವಾಗಿ’ ಸವಾರ ಸಾವು | Watch Video

13/05/2025 5:47 PM

ಇ-ಖಾತಾ ನೀಡಲು 6,500 ಲಂಚ ಸ್ವೀಕರಿಸುತ್ತಿದ್ದ PDO, ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

13/05/2025 5:36 PM

ಅಮೇಜಾನ್ ಪ್ರೈಮ್ ಚಂದಾದಾರರ ಗಮನಕ್ಕೆ: ಜೂ.17ರಿಂದ ಭಾರತದಲ್ಲಿ ಚಲನಚಿತ್ರದ ವೇಳೆ ಜಾಹೀರಾತು ಪ್ರಸಾರ | Amazon Prime Video

13/05/2025 5:29 PM
State News
KARNATAKA

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಹೀಗಿವೆ ಕರ್ನಾಟಕದ ಸೈಬರ್ ಪೊಲೀಸ್ ಠಾಣೆಗೆ ದೂರವಾಣಿ ಸಂಖ್ಯೆ

By kannadanewsnow0913/05/2025 5:54 PM KARNATAKA 1 Min Read

ಬೆಂಗಳೂರು: ರಾಜ್ಯದ ಜನರಿಗೆ ಉಪಯುಕ್ತವಾಗುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯಿಂದ ರಾಜ್ಯದ ಎಲ್ಲಾ ಸೈಬರ್ ಪೊಲೀಸ್ ಠಾಣೆಗಳ ದೂರವಾಣಿ ಸಂಖ್ಯೆ…

ಇ-ಖಾತಾ ನೀಡಲು 6,500 ಲಂಚ ಸ್ವೀಕರಿಸುತ್ತಿದ್ದ PDO, ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

13/05/2025 5:36 PM

8 ಸೆಂ.ಮೀ ಅಂಡಾಶಯ ಚೀಲ ಹೊಂದಿದ್ದ 16 ವರ್ಷದ ವಿದ್ಯಾರ್ಥಿಗೆ ಪೋರ್ಟಿಸ್ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

13/05/2025 5:09 PM

BIG NEWS : ಬೆಂಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ : ಹಲವಾರು ಅವಾಂತರ, ವಾಹನ ಸವಾರರ ಪರದಾಟ

13/05/2025 5:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.