ಬೆಳಗಾವಿ : ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮ ಆಸ್ತಿ, ಚಿನ್ನ ವಶಕ್ಕೆ ಪಡೆದು ಅನ್ಯರಿಗೆ ನೀಡಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನೀವು ಮಾಡಿಟ್ಟ ಮನೆ, ಆಸ್ತಿ, ಚಿನ್ನ ಎಲ್ಲವೂ ಅನ್ಯರ ಪಾಲಾಗಿದೆ. ಅವರು ಆಡಳಿತಕ್ಕೆ ಬಂದರೆ ನಿಮ್ಮ ಆಸ್ತಿಯನ್ನು ವಶಕ್ಕೆ ಪಡೆಯುತ್ತದೆ. ನೀವು ನಿಮ್ಮ ಮಕ್ಕಳಿಗಾಗಿ ಪೈಸೆ ಪೈಸೆ ಕೂಡಿಟ್ಟು ಮಾಡಿದ ಆಸ್ತಿಯಲ್ಲಿ ಶೇಕಡಾ 55 ರಷ್ಟು ಕಾಂಗ್ರೆಸ್‌ ವಶಕ್ಕೆ ಪಡೆಯಲಿದೆ. ಈ ಮೂಲಕ ನಿಮ್ಮ ಆಸ್ತಿಯು ನಿಮ್ಮ ಮಕ್ಕಳಿಗೆ ಸಿಗದಂತೆ ಮಾಡುತ್ತದೆ ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಇವಿಎಂಗಳ ನೆಪದಲ್ಲಿ ಕಾಂಗ್ರೆಸ್ ಭಾರತದ ಪ್ರಜಾಪ್ರಭುತ್ವವನ್ನು ಅಪಖ್ಯಾತಿಗೊಳಿಸಲು ಪ್ರಯತ್ನಿಸಿದೆ ಎಂದು ಅವರು ತಮ್ಮ ಭಾಷಣದಲ್ಲಿ ಹೇಳಿದರು. 25 ಕೋಟಿ ಜನರು ಬಡತನದಿಂದ ಹೊರಬಂದರು. ಭಾರತ ಮುಂದೆ ಸಾಗಿದಾಗ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುತ್ತಾನೆ. ಕಾಂಗ್ರೆಸ್ ದೇಶದ ಹಿತಾಸಕ್ತಿಯಿಂದ ಎಷ್ಟು ದೂರ ಹೋಗಿದೆಯೆಂದರೆ, ಕುಟುಂಬದ ಹಿತದೃಷ್ಟಿಯಿಂದ ಅದು ಎಷ್ಟು ಕಳೆದುಕೊಂಡಿದೆಯೆಂದರೆ ದೇಶದ ಪ್ರಗತಿ ಉತ್ತಮವಾಗಿ ಕಾಣುತ್ತಿಲ್ಲ. ಭಾರತದ ಪ್ರತಿಯೊಂದು ಯಶಸ್ಸಿನ ಬಗ್ಗೆ ಕಾಂಗ್ರೆಸ್ ನಾಚಿಕೆಪಡುತ್ತದೆ ಎಂದು ಕಿಡಿಕಾರಿದ್ದಾರೆ.

Share.
Exit mobile version