ಬೆಂಗಳೂರು : ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಇ – ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿ ಹಾಗೂ 2023 – 2024ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾದ ರಾಜ್ಯದ ಎಲ್ಲಾ ಜಿಲ್ಲಾವಾರು ವ್ಯಾಪ್ತಿಯ ಗ್ರಾ.ಪಂ.ಗಳ ಅಧ್ಯಕ್ಷರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳೊಂದಿಗೆ ಸಾಂಕೇತಿಕವಾಗಿ ಪ್ರಶಸ್ತಿ ವಿತರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದರು.
ಕಾಂಗ್ರೆಸ್ ಪಕ್ಷ ನಿಮ್ಮ ಹಿತಕ್ಕಾಗಿ ಕೆಲಸ ಮಾಡುತ್ತಿದೆ. ಭಾರತದ ಭವಿಷ್ಯ ಅಡಗಿರುವುದು ಹಳ್ಳಿಯಲ್ಲಿ ಎಂದು ಗಾಂಧೀಜಿ ಅವರು ದೇಶಕ್ಕೆ ದೊಡ್ಡ ಸಂದೇಶವನ್ನು ಕೊಟ್ಟಿದ್ದಾರೆ. ನಿಮ್ಮ ಮನೆ ಬಾಗಿಲಿಗೆ ಇ – ಸ್ವತ್ತು ಮೂಲಕ ದಾಖಲೆಗಳನ್ನು ತಲುಪಿಸುವ ವ್ಯವಸ್ಥೆಯನ್ನು ಸರ್ಕಾರ ರೂಪಿಸಿದೆ. ಆಸ್ತಿಗಳ ದಾಖಲೆಗಾಗಿ ‘ಇ – ಸ್ವತ್ತು’ ಯೋಜನೆಯಡಿ ಅರ್ಜಿ ಸಲ್ಲಿಸಿದ 15 ದಿನಗಳೊಳಗೆ ಇ – ಖಾತಾ ವಿತರಿಸಲಾಗುತ್ತಿದೆ. ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅಲೆದಾಡುವುದನ್ನು ತಪ್ಪಿಸಲು ಆನ್ಲೈನ್ ಹಾಗೂ ಬಾಪೂಜಿ ಸೇವಾ ಕೇಂದ್ರದಲ್ಲಿ ಇ – ಖಾತಾಕ್ಕಾಗಿ ಅರ್ಜಿ ಸಲ್ಲಿಸುವ ಅವಕಾಶವನ್ನು ಮಾಡಿದ್ದೇವೆ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಸದಾ ಜನಪರ ಕಾರ್ಯಕ್ರಮವನ್ನು ರೂಪಿಸಿದ್ದೇವೆ.
ಪಂಚಾಯತಿಯಿಂದ ಪಾರ್ಲಿಮೆಂಟ್ವರೆಗೆ ಹೊಸ ನಾಯಕರನ್ನ ಬೆಳೆಸಬೇಕು ಎಂಬುದು ನಮ್ಮ ನಾಯಕರಾದ ಶ್ರೀ ರಾಜೀವ್ ಗಾಂಧಿ ಅವರ ಕಲ್ಪನೆಯಾಗಿತ್ತು. ವಿಜಯಪುರ ಜಿಲ್ಲೆಯ ಗ್ರಾ.ಪಂ.ವೊಂದರ ಅಧ್ಯಕ್ಷರಾಗಿದ್ದ ಶ್ರೀ ಬಿ.ಡಿ. ಜತ್ತಿ ಅವರು ದೇಶದ ಉಪ ರಾಷ್ಟ್ರಪತಿಯಾಗಿ, ಈ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆಯನ್ನು ಸಲ್ಲಿಸಿದ್ದರು. ಸ್ಥಳೀಯ ಸಂಸ್ಥೆಗಳೇ ಸರ್ಕಾರದ ಆಧಾರಸ್ತಂಭ. ಗ್ರಾಮೀಣ ಮಟ್ಟದಲ್ಲಿ ನೀವು ನಾಯಕರಾಗಿ ಬೆಳೆದು ಜನರ ಹೃದಯವನ್ನು ಗೆಲ್ಲಬೇಕು. ಈ ಸರ್ಕಾರ ನಿಮ್ಮ ಪರವಾಗಿ, ನಿಮ್ಮ ಕೈ’ಬಲಪಡಿಸಲು ಸದಾ ಜೊತೆಯಾಗಿರಲಿದೆ.
ಭಾರತದ ಭವಿಷ್ಯ ಅಡಗಿರುವುದು ಹಳ್ಳಿಯಲ್ಲಿ ಎಂದು ಗಾಂಧೀಜಿ ತಿಳಿಸಿದ್ದರು. ಪ್ರತಿ ಹಳ್ಳಿಯಲ್ಲಿ ಪಂಚಾಯ್ತಿ, ಸೊಸೈಟಿ, ಶಾಲೆ ಇರಬೇಕು ಎಂದು ಮಾರ್ಗದರ್ಶನ ನೀಡಿದರು. ಅವರ ಮಾರ್ಗದರ್ಶನದಂತೆ ನಾವು ಕೆಲಸ ಮಾಡುತ್ತಿದ್ದೇವೆ. ನಿಮ್ಮ ಮನೆ ಬಾಗಿಲಿಗೆ ಇ-ಸ್ವತ್ತು ತಂದುಕೊಡುವ ಕೆಲಸ ಮಾಡುತ್ತಿದ್ದೇವೆ. ಇದು ನಿಮ್ಮೆಲ್ಲರ ಬದುಕಿಗೆ ಹೊಸರೂಪ ನೀಡಿ, ಎಲ್ಲ ಪಂಚಾಯ್ತಿ ಆಸ್ತಿ ದಾಖಲೆಗಳಿಗೆ 11 ಬಿ ಖಾತೆಗಳನ್ನು ನೀಡಲಾಗುತ್ತಿದೆ. ನೀವು ಅರ್ಜಿ ಹಾಕಿ 15 ದಿನದ ಒಳಗೆ ಖಾತೆ ನೀಡಲು ಸರ್ಕಾರ ತೀರ್ಮಾನಿಸಿದೆ. ಯಾರೂ ಕಚೇರಿ ಅಲೆಯುವುದು ಬೇಡ ಎಂದು ಆನ್ಲೈನ್ ಹಾಗೂ ಬಾಪುಜಿ ಕೇಂದ್ರಗಳಲ್ಲಿ ವಿತರಣೆಗೆ ಅವಕಾಶ ನೀಡಲಾಗಿದೆ.
ಜನರ ಶಕ್ತಿಯೇ ನಮ್ಮ ಶಕ್ತಿ – ಅವರೇ ನಮ್ಮ ಆಸ್ತಿ!
ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಇ – ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿ ಹಾಗೂ 2023 – 2024ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾದ ರಾಜ್ಯದ ಎಲ್ಲಾ ಜಿಲ್ಲಾವಾರು ವ್ಯಾಪ್ತಿಯ ಗ್ರಾ.ಪಂ.ಗಳ ಅಧ್ಯಕ್ಷರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ… pic.twitter.com/nz01nksj31
— DK Shivakumar (@DKShivakumar) December 1, 2025








