ದಾವಣಗೆರೆ : ನಿವೇಶನದ ಹಕ್ಕು ಪತ್ರ ನೀಡಲು ಐದು ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟು ಆ ಲಂಚದ ಹಣ ಪಡೆಯುವ ವೇಳೆ ಗ್ರಾ.ಪಂ ಬಿಲ್ ಕಲೆಕ್ಟರ್ ಹಾಗೂ ನೀರುಗಂಟಿ ಇಬ್ಬರು ಲೋಕಾಯುಕ್ತರ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆ ಜಿಲ್ಲೆಯ ದೇವರಹಳ್ಳಿಯಲ್ಲಿ ನಡೆದಿದೆ.
ದೇವರಹಳ್ಳಿ ಗ್ರಾ.ಪಂ ಹಂಗಾಮಿ ಬಿಲ್ ಕರೆಕ್ಟರ್ ಲೋಕೇಶ ಹಾಗೂ ನೀರುಗಂಟಿ ಶೇಖರಪ್ಪ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು. ಇಂದಿರಾ ಗ್ರಾಮೀಣ ವಸತಿ ನಿವೇಶನದಡಿ 2016ನೇ ಸಾಲಿನಲ್ಲಿ ಮಂಜೂರಾಗಿದ್ದ ವಸತಿ ಯೋಜನೆಯ ನಿವೇಶನದ ಹಕ್ಕುಪತ್ರ ನೀಡಲು 5 ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಈ ಘಟನೆ ನಡೆದಿದೆ. ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ದೇವರಹಳ್ಳಿ ಗ್ರಾಮದ ಆರ್.ಲಕ್ಷ್ಮಿದೇವಿ ಲಕ್ಷ್ಮೀಪತಿ ಎಂಬುವದು ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಇಂದಿರಾ ಗ್ರಾಮೀಣ ವಸತಿ ನಿವೇಶನ ಯೋಜನೆಯಡಿ 2016ನೇ ಸಾಲಿನಲ್ಲಿ ವಸತಿ ನಿವೇಶನ ಮಂಜೂರಾಗಿತ್ತು.ಬಿಲ್ ಕಲೆಕ್ಟರ್ ಲೋಕೇಶ ಹಕ್ಕುಪತ್ರ ನೀಡಲು 5 ಸಾವಿರ ರೂ. ಲಂಚದ ಬೇಡಿಕ ಇಟ್ಟಿದ್ದರು. ಲಂಚ ಕೊಡಲು ಇಷ್ಟವಿಲ್ಲದ ಲಕ್ಷ್ಮೀದೇವಿ ಗ್ರಾ.ಪಂ ಹಂಗಾಮಿ ಬಿಲ್ ಕಲೆಕ್ಟರ್ ಲೋಕೇಶ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದಾವಣಗೆರೆ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ನಿವೇಶನದ ಹಕ್ಕು ಪತ್ರವನ್ನು ನೀಡಲು ಬಿಲ್ ಕಲೆಕ್ಟರ್ ಹಾಗೂ ನೀರುಗಂಟಿ ಇಬ್ಬರು ಐದು ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 5 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಹಂಗಾಮಿ ಬಿಲ್ ಕಲೆಕ್ಟರ್ ಲೋಕೇಶ, ನೀರುಗಂಟಿ ಶೇಖರಪ್ಪ ಸಿಕ್ಕಿ ಬಿದ್ದಿದ್ದಾರೆ.ಇಬ್ಬರನ್ನೂ ವಶಕ್ಕೆ ಪಡೆದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.