ಬೆಳಗಾವಿ : ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅಶ್ಲೀಲ ಪದ ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯ ಜಯಂ ಎಫ್ ಸಿ ಕೋರ್ಟ್ ನಲ್ಲಿ ಸಿಟಿ ರವಿ ಜಾಮೀನು ಅರ್ಜಿ ವಿಚಾರಣೆ ನಡೆಯಿತು ಇದೀಗ JMFC ಜಡ್ಜ್ ಸ್ಪರ್ಶ ಡಿಸೋಜ ಅವರು ಈ ಒಂದು ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಿಟಿ ರವಿ ಅವರನ್ನು ಬೆಳಗಾವಿಯಿಂದ ಬೆಂಗಳೂರಿಗೆ ಕರೆದುಕೊಂಡು ಹೋಗುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ, ಯಾವುದೇ ನೋಟಿಸ್ ಕೊಡದೆ ಅಕ್ರಮ ಬಂಧನದಲ್ಲಿ ಇಟ್ಟು ರಾತ್ರಿ ಇಡೀ ಮೂರು ಜಿಲ್ಲೆಗಳಲ್ಲಿ ಸುತ್ತಾಡಿಸಿ, ಸರ್ವಾಧಿಕಾರ ಮೆರೆದಿದ್ದಾರೆ. ಎಲ್ಲದಕ್ಕೂ ಒಂದು ಫುಲ್ ಸ್ಟಾಪ್ ಇದ್ದೆ ಇರುತ್ತೆ. ಫುಲ್ ಸ್ಟಾಪ್ ಬೀಳುತ್ತೆ. ಸರ್ವಾಧಿಕಾರ ಬಹಳ ದಿನ ನಡೆಯಲ್ಲ ಸರ್ವಾಧಿಕಾರ ಕೊನೆ ಆಗಲೇಬೇಕು . ಪೊಲೀಸರನ್ನು ದುರ್ಬಳಕೆ ಮಾಡಿಕೊಂಡು ನನ್ನ ಮೇಲೆ ಹಲ್ಲೆ ನಡೆಸಿದ್ದೀರಲ್ಲ ಅತ್ತೆಗೆ ಒಂದು ಕಾಲ ಸೊಸೆಗೆ ಒಂದು ಕಾಲ ಎಂಬಂತೆ, ನನಗು ಒಂದು ಕಾಲ ಬಂದೇ ಬರುತ್ತದೆ ಎಂದು ತಿಳಿಸಿದರು.
ಸಿ ಟಿ ರವಿ ವಿರುದ್ಧ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹಿರೇಬಾಗೇವಾಡಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಸಿಟಿ ರವಿ ಅವರನ್ನು ಬಂಧಿಸಿ ಎಂದು ಬೆಳಿಗ್ಗೆ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಸಿಟಿ ರವಿ ಅವರ ಪರ ವಕೀಲ ಎಂಬಿ ಜಿರಲಿ ಅವರು ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಬಳಿಕ ಜಡ್ಜ್ ಮದ್ಯಾಹ್ನ 3 ಗಂಟೆಗೆ ವಿಚಾರಣೆ ಒಂದುಡಿ ಆದೇಶ ಹೊರಡಿಸಿದ್ದರು.
ಆದರೆ ಇದೀಗ ಬಂದ ಮಾಹಿತಿಗಳ ಪ್ರಕಾರ ಸಿ ಟಿ ರವಿ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಬೆಳಗಾವಿಯ ಜೆಎಂಎಫ್ಸಿ ಕೋರ್ಟ್ ನ ಜಡ್ಜ್ ಸ್ಪರ್ಶ ಡಿಸೋಜಾ ಅವರು ಈ ಒಂದು ಆದೇಶ ಹೊರಡಿಸಿದ್ದಾರೆ. ಆದೇಶ ಹೊರಬೀಳುತ್ತಿದ್ದಂತೆ ಕೋರ್ಟ್ ಹಾಲ್ನಲ್ಲಿ ಸಿಟಿ ರವಿ ಅವರನ್ನು ಪೊಲೀಸರು ಸುತ್ತುವರಿದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಇದೀಗ ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ.