Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 200 ಕೋಟಿ ಅಕ್ರಮ ವರ್ಗಾವಣೆ ಪ್ರಕರಣ : ನಟಿ ಜಾಕ್ವೆಲಿನ್ ಫರ್ನಾಂಡಿಸ್’ಗೆ ಬಿಗ್ ಶಾಕ್, ಅರ್ಜಿ ವಜಾ

03/07/2025 5:31 PM

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM

BREAKING : ಏಷ್ಯಾಕಪ್’ನಲ್ಲಿ ಸ್ಪರ್ಧಿಸಲು ‘ಪಾಕಿಸ್ತಾನ ಹಾಕಿ ತಂಡ’ ಭಾರತಕ್ಕೆ ಆಗಮನ : ಕ್ರೀಡಾ ಸಚಿವಾಲಯ ಗ್ರೀನ್ ಸಿಗ್ನಲ್

03/07/2025 4:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನಿವೃತ್ತಿ ಹೊಂದಲಿರುವ `ರಾಜ್ಯ ಸರ್ಕಾರಿ ನೌಕರರ’ ವಿರುದ್ಧ ಶಿಸ್ತು ಕ್ರಮ : ಸರ್ಕಾರದಿಂದ ಮಹತ್ವದ ಆದೇಶ.!
KARNATAKA

BIG NEWS : ನಿವೃತ್ತಿ ಹೊಂದಲಿರುವ `ರಾಜ್ಯ ಸರ್ಕಾರಿ ನೌಕರರ’ ವಿರುದ್ಧ ಶಿಸ್ತು ಕ್ರಮ : ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5722/04/2025 6:36 AM

ಬೆಂಗಳೂರು : ನಿವೃತ್ತಿ ಹೊಂದಲಿರುವ ಸರ್ಕಾರಿ ನೌಕರರ ವಿರುದ್ಧ ಸಕಾಲದಲ್ಲಿ ಇಲಾಖಾ ವಿಚಾರಣೆ ಆರಂಭಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಸೂಚನೆಗಳನ್ನು ಹೊರಡಿಸಿದೆ.

ನಿವೃತ್ತಿ ಹೊಂದಲಿರುವ ಸರ್ಕಾರಿ ನೌಕರರ ವಿರುದ್ಧ ಅವರು ಸೇವೆಯಲ್ಲಿರುವಾಗ ಎಸಗಿದ ದುರ್ನಡತೆಗಾಗಿ ಕ್ಷುಪ್ತ ಸಮಯದಲ್ಲಿ ಅಂದರೆ ಅಂತಹ ನೌಕರ ಸೇವೆಯಿಂದ ನಿವೃತ್ತಿ ಹೊಂದುವ ಸಾಕಷ್ಟು ಪೂರ್ವದಲ್ಲಿಯೇ ಶಿಸ್ತಿನ ಕ್ರಮ ಆರಂಭಿಸುವಂತೆ ಹಾಗೂ ಇತ್ಯರ್ಥಪಡಿಸುವಂತೆ ಮೇಲೆ ಉಲ್ಲೇಖಿಸಿರುವ ಹಲವಾರು ಸುತ್ತೋಲೆ ಹಾಗೂ ಅಧಿಕೃತ ಜ್ಞಾಪನಗಳಲ್ಲಿ ಸರ್ಕಾರದಿಂದ ಕಾಲ ಕಾಲಕ್ಕೆ ಸೂಚನೆಗಳನ್ನು ನೀಡಲಾಗಿದೆ. ಸರ್ಕಾರಿ ನೌಕರನ ನಿವೃತ್ತಿ ನಂತರದ ಶಿಸ್ತು ಕ್ರಮಗಳನ್ನು ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಹಾಗೂ ಮೇಲ್ಮನವಿ) ನಿಯಮಗಳು 1957 ರಡಿ ಕೈಗೊಳ್ಳಲು ಅವಕಾಶವಿರುವುದಿಲ್ಲ. ಅಂತಹ ಶಿಸ್ತಿನ ಕ್ರಮವನ್ನು ಕರ್ನಾಟಕ ನಾಗರಿಕ ಸೇವಾ ನಿಯಮಗಳ ನಿಯಮ 214 ರಡಿ ಮಾತ್ರ ಕೈಗೊಳ್ಳಲು ಅವಕಾಶವಿರುತ್ತದೆ. ಸರ್ಕಾರಿ ನೌಕರನು ನಿವೃತ್ತಿಯಾದ ನಂತರ ಅವನ ಮೇಲೆ ಹೂಡಲಾಗಿದ್ದ ಇಲಾಖಾ ವಿಚಾರಣೆಗಳನ್ನು ಸರ್ಕಾರಕ್ಕೆ ಆತನಿಂದ ಆರ್ಥಿಕ ಹಾನಿ ಉಂಟಾಗಿಲ್ಲವೆಂಬ ಕಾರಣದ ಮೇಲೆ ಹಿಂದಕ್ಕೆ ತೆಗೆದುಕೊಳ್ಳುವ ಪ್ರಸ್ತಾವನೆಗಳು ಸರ್ಕಾರಕ್ಕೆ ಬರುತ್ತಿವೆ. ಇದು ಸರಿಯಲ್ಲ. ಇದಲ್ಲದೇ ಸರ್ಕಾರಿ ನೌಕರ ನಿವೃತ್ತಿ ಹೊಂದುವ ಕೆಲವೇ ದಿನಗಳ ಮೊದಲು ಶಿಸ್ತು ಕ್ರಮದ ಪ್ರಸ್ತಾವನೆಗಳನ್ನು ಸಲ್ಲಿಸಲಾಗುತ್ತಿರುವುದನ್ನು ಕೂಡ ಗಮನಿಸಲಾಗಿದೆ.

ಸರ್ಕಾರಿ ನೌಕರನು ಸೇವೆಯಲ್ಲಿರುವಾಗಲೇ ಎಸಗಿದ ದುರ್ನಡತೆಗೆ ಸಂಬಂಧಿಸಿದಂತೆ ಆತ ನಿವೃತ್ತಿ ಹೊಂದುವವರೆಗೆ ಯಾವುದೇ ಕ್ರಮವಹಿಸದೆ ಅಥವಾ ನಿವೃತ್ತಿ ನಿಕಟಪೂರ್ವದಲ್ಲಿ ಅಂತಹ ಶಿಸ್ತಿನ ಕ್ರಮ ಆರಂಭಿಸುತ್ತಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಇದರಿಂದ ಅಂತಹ ಸರ್ಕಾರಿ ನೌಕರನ ವಿರುದ್ಧ ಪರಿಣಾಮಕಾರಿಯಾಗಿ ಶಿಸ್ತು ಕ್ರಮ ಕೈಗೊಳ್ಳಲು ಆಸ್ಪದವಾಗದೆ ಅಂತಹ ತಪ್ಪಿತಸ್ಥ ನೌಕರನು ರಕ್ಷಿಸಲ್ಪಡುವನಲ್ಲದೆ ಇದು ಸರ್ಕಾರದ ಹಿತಾಸಕ್ತಿಗೆ ಕೂಡ ಮಾರಕವಾಗಿರುತ್ತದೆ. ಮುಂದುವರೆದು ಕೆಲವು ಸಂದರ್ಭಗಳಲ್ಲಿ ದುರ್ನಡತೆಯು ಸರ್ಕಾರಿ ನೌಕರ ನಿವೃತ್ತಿ ಹೊಂದಿದ ನಾಲ್ಕು ವರ್ಷಕ್ಕೂ ಹಿಂದಿನ ಅವಧಿಗೆ ಸಂಬಂಧಿಸಿದೆ ಎಂಬ ಕಾರಣದ ಆಧಾರದ ಮೇಲೆ ಆತನ ವಿರುದ್ಧ ಕರ್ನಾಟಕ ನಾಗರಿಕ ಸೇವಾ ನಿಯಮಗಳ ನಿಯಮ 214 (ಬಿ)(ii)ರನ್ವಯ ಶಿಸ್ತಿನ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲವೆಂಬ ಅನಿವಾರ್ಯ ನಿಲುವಿಗೆ ಬರಲಾಗುತ್ತಿದೆ.

ಯಾವುದೇ ನಿವೃತ್ತ ಸರ್ಕಾರಿ ನೌಕರರ ವಿರುದ್ಧ ಶಿಸ್ತಿನ ಕ್ರಮ ಆರಂಭಿಸಲು ಸಂಬಂಧಪಟ್ಟ ಸಚಿವಾಲಯದ ಆಡಳಿತ ಇಲಾಖೆಗಳು ಕರ್ನಾಟಕ ನಾಗರಿಕ ಸೇವಾ ನಿಯಮಗಳ ನಿಯಮ 214 ರಡಿ ಕ್ರಮವಹಿಸಬೇಕಾಗಿರುವುದರಿಂದ ಅಂತಹ ಪ್ರಕರಣಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ, ಉಲ್ಲೇಖ (9)ರ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಂದ ಹೊರಡಿಸಲಾದ ದಿನಾಂಕ 21.01.2019ರ ಸುತ್ತೋಲೆಯಲ್ಲಿ ವಿವರವಾದ ಸೂಚನೆಗಳನ್ನು ನೀಡಲಾಗಿದೆ. ಅದರಲ್ಲಿ ನೀಡಲಾದ ಸೂಚನೆಗಳನ್ನು ಎಲ್ಲಾ ಶಿಸ್ತು ಪ್ರಾಧಿಕಾರಿಗಳ ಗಮನಕ್ಕೆ ತರುವಂತೆ ಈ ಮೂಲಕ ಮತ್ತೊಮ್ಮೆ ತಿಳಿಸಲಾಗಿದೆ. ಇಂತಹ ಪ್ರಕರಣಗಳಲ್ಲಿ ಶಿಸ್ತು ಕ್ರಮದ ಪ್ರಸ್ತಾವನೆಗಳನ್ನು ಸಂಬಂಧಿಸಿದ ಅಧಿಕಾರಿ ವಯೋನಿವೃತ್ತಿ ಹೊಂದುವ ಕನಿಷ್ಠ 30 ದಿನಗಳ ಮುಂಚೆಯೇ ಕರಡು ದೋಷಾರೋಪಣ ಪಟ್ಟಿ ಮತ್ತು ಇನ್ನಿತರೆ ಪೂರಕ ಕಾಗದ ಪತ್ರ ಮತ್ತು ದಾಖಲೆಗಳೊಡನೆ ಶಿಸ್ತು ಪ್ರಾಧಿಕಾರಿಗೆ ಸಲ್ಲಿಸುವಂತೆ ಮರುಸೂಚನೆಗಳನ್ನು ನೀಡಲಾಗಿದೆ. ಮುಂದುವರೆದು, ಯಾವುದೇ ಸರ್ಕಾರಿ ನೌಕರನು ಎಸಗಿದ ದುರ್ನಡತೆಯು ಶಿಸ್ತು ಪ್ರಾಧಿಕಾರಿಗಳ ಗಮನಕ್ಕೆ ಬಂದ ಸಂದರ್ಭದಲ್ಲಿ ಹಾಗೂ ಅಂತಹ ಸರ್ಕಾರಿ ನೌಕರ ನಿವೃತ್ತಿ ಅಂಚಿನಲ್ಲಿದ್ದಲ್ಲಿ ಸಂಬಂಧಪಟ್ಟ ಶಿಸ್ತು ಪ್ರಾಧಿಕಾರಿಗಳು ಯಾವುದೇ ಅನಗತ್ಯ ಹಾಗೂ ಉದ್ದೇಶಪೂರ್ವಕ ವಿಳಂಬಕ್ಕೆ ಆಸ್ಪದ ಕಲ್ಪಿಸದೇ ಅಂತಹ ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸತಕ್ಕದ್ದೆಂದು ಕೂಡ ತಿಳಿಸಲಾಗಿದೆ. ಕಾಲಮಿತಿ ಮೀರಿದ ಪ್ರಕರಣಗಳಲ್ಲಿ ವಿಳಂಬಕ್ಕೆ ಜವಾಬ್ದಾರರಾದ ನೌಕರರು/ಅಧಿಕಾರಿಗಳನ್ನು ಗುರುತಿಸಿ ಅವರುಗಳ ವಿರುದ್ಧ ಶಿಸ್ತಿನ ಕ್ರಮ ಜರುಗಿಸತಕ್ಕದ್ದು ಎಂದು ಕೂಡ ತಿಳಿಸಲಾಗಿದೆ.

BIG NEWS: Disciplinary action against `state government employees' who are about to retire: Important order from the government!
Share. Facebook Twitter LinkedIn WhatsApp Email

Related Posts

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM2 Mins Read

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM2 Mins Read

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM1 Min Read
Recent News

BREAKING : 200 ಕೋಟಿ ಅಕ್ರಮ ವರ್ಗಾವಣೆ ಪ್ರಕರಣ : ನಟಿ ಜಾಕ್ವೆಲಿನ್ ಫರ್ನಾಂಡಿಸ್’ಗೆ ಬಿಗ್ ಶಾಕ್, ಅರ್ಜಿ ವಜಾ

03/07/2025 5:31 PM

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM

BREAKING : ಏಷ್ಯಾಕಪ್’ನಲ್ಲಿ ಸ್ಪರ್ಧಿಸಲು ‘ಪಾಕಿಸ್ತಾನ ಹಾಕಿ ತಂಡ’ ಭಾರತಕ್ಕೆ ಆಗಮನ : ಕ್ರೀಡಾ ಸಚಿವಾಲಯ ಗ್ರೀನ್ ಸಿಗ್ನಲ್

03/07/2025 4:44 PM

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM
State News
KARNATAKA

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

By kannadanewsnow0903/07/2025 4:59 PM KARNATAKA 2 Mins Read

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಪ್ರತಿ ದಿನ ಸುಮಾರು 45 ಸಾವಿರ ಗುಣಮಟ್ಟದ ಹಾಲು ಉತ್ಪಾದನೆಯಾಗುತ್ತಿದ್ದು, ಜಿಲ್ಲೆಯಲ್ಲಿ ಹೊಸದುರ್ಗ…

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM

BREAKING : ರಾಜ್ಯದಲ್ಲಿ ಆನ್ಲೈನ್ ಗೇಮ್ ಗೆ ಮತ್ತೊಂದು ಬಲಿ : ಸೆಲ್ಫಿ ವಿಡಿಯೋ ಮಾಡಿ ನೇಣಿಗೆ ಶರಣಾದ ಯುವಕ!

03/07/2025 3:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.