ಬೆಂಗಳೂರು : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಎಡಿಜಿಪಿ ಚಂದ್ರಶೇಖರ್ ಅವರ ವಾಕ್ಸಮರ ತಾರಕಕ್ಕೆ ಏರಿದ್ದು, ಈ ಒಂದು ವಿಚಾರವಾಗಿ ಹೆಚ್ಡಿ ಕುಮಾರಸ್ವಾಮಿ ಕೆಪಿಸಿಸಿ ಕಚೇರಿಯಲ್ಲಿ ಲೆಟರ್ ಲೀಕ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಒಂದು ಆರೋಪಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕುಮಾರಸ್ವಾಮಿ ಅವರ ಹತ್ತಿರ ಏನು ದಾಖಲೆ ಇದೆಯೋ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಮಾತನಾಡಿದ ಅವರು, ಎಚ್ ಡಿ ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಚಂದ್ರಶೇಖರ್ ಪತ್ರ ಬರೆದ ವಿಚಾರವಾಗಿ ಕೆಪಿಸಿಸಿ ಕಚೇರಿಯಲ್ಲಿ ಲೆಟರ್ ಲಿಕ್ ಮಾಡಿದ್ದಾರೆ ಎಂದು ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದರು. ಇದೀಗ ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು, ಕುಮಾರಸ್ವಾಮಿ ಅವರು ಏನು ಮಾತನಾಡುತ್ತಿದ್ದಾರೆ ಎಂದು ಅವರಿಗೆ ಗೊತ್ತಿಲ್ಲ. ಕೆಪಿಸಿಸಿಗೂ ಎಡಿಜಿಪಿ ಚಂದ್ರಶೇಖರ್ ಗೂ ಏನು ಸಂಬಂಧ? ಎಂದು ಪ್ರಶ್ನಿಸಿದರು.
ನಾನು ನಿನ್ನೆ ಬೆಂಗಳೂರಿನಲ್ಲಿ ಇರಲಿಲ್ಲ. ನಾನು ಸಾತನೂರು ಹಾಗೂ ಕನಕಪುರದಲ್ಲಿ ಇದ್ದೆ. ಕುಮಾರಸ್ವಾಮಿ ಕೆಪಿಸಿಸಿಯನ್ನು ನೆನಪಿಸಿಕೊಂಡರೆ ನಾನು ಏನು ಮಾಡಕಾಗುತ್ತೆ? ಕುಮಾರಸ್ವಾಮಿ ಹತ್ತಿರ ಏನು ದಾಖಲೆ ಇದ್ದರೂ ಬಿಡುಗಡೆ ಮಾಡಲಿ. ಪಾಪ ಚಂದ್ರಶೇಖರ್ ನನ್ನ ನೋಡೇ ಇಲ್ಲ. ನನ್ನ ಜೊತೆಗೆ ಅವರು ಮಾತಾಡೇ ಇಲ್ಲ.ಅಲ್ಲದೆ ಅವರು ನನಗೆ ಸಿಕ್ಕಿಲ್ಲ. ಅವರು ನನಗೆ ಗೊತ್ತೇ ಇಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.