ತುಮಕೂರು : ತುಮಕೂರು ಜಿಲ್ಲೆಯ ಮಧುಗಿರಿಯನ್ನು ಜಿಲ್ಲೆಯಾಗಿ ಘೋಷಣೆ ಮಾಡುತ್ತೇವೆ. ನನ್ನ ಅವಧಿಯಲ್ಲಿ ಮಧುಗಿರಿಯನ್ನು ಜಿಲ್ಲೆಯಾಗಿ ಘೋಷಣೆ ಮಾಡುತ್ತೇನೆ ಎಂದು ತುಮಕೂರಿನಲ್ಲಿ ಇಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ನೀಡಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತುಮಕೂರು ಜಿಲ್ಲೆಯನ್ನು ಮೂರು ಜಿಲ್ಲೆಯಾಗಿ ಮಾಡಬಹುದು. ಹೇಗೆ ಧಾರವಾಡವನ್ನು ಮೂರು ಜಿಲ್ಲೆಯಾಗಿ ಮಾಡಲಾಗಿದೆಯೋ, ಅದೇ ರೀತಿ ತುಮಕೂರು ಜಿಲ್ಲೆಯನ್ನು ಮೂರು ಜಿಲ್ಲೆಯಾಗಿ ಮಾಡಬಹುದು. ತುಮಕೂರು ಮಧುಗಿರಿ ಹಾಗೂ ತಿಪಟೂರನ್ನು ಜಿಲ್ಲೆಯಾಗಿ ಮಾಡಬಹುದು ಎಂದು ಕೆ.ಎನ್ ರಾಜಣ್ಣ ಹೇಳಿಕೆ ನೀಡಿದರು.
ಸಿಎಂ ಬದಲಾವಣೆ ಬಗ್ಗೆ ಕಾಲವೇ ನಿರ್ಣಯ ಮಾಡಲಿದೆ. ನನ್ನ ಪ್ರಕಾರ ಕಾಂಗ್ರೆಸ್ ನಲ್ಲಿ ಮೂರು ಪವರ್ ಸೆಂಟರ್ ಇದೆ. ನಾನು ಯಾವತ್ತೂ ಸಿಎಂ ಸಿದ್ದರಾಮಯ್ಯ ಜೊತೆಗೆ ಇರುತ್ತೇನೆ. ಇಂದು ನಾಳೆ ಮುಂದೆಯೂ ನಾನು ಸಿಎಂ ಸಿದ್ದರಾಮಯ್ಯ ಪರವಾಗಿ ಇರುತ್ತೇನೆ. ಸುರ್ಜೆವಾಲಾ ಬಂದರೆ ನನಗೆ ಯಾಕೆ ತಾಕಿತ್ತು ಮಾಡುತ್ತಾರೆ? ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಪ್ರಶ್ನಿಸಿದರು.