Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ 4 ಲಕ್ಷ ಕಟ್ಟಡಗಳಿಗೆ ವಿದ್ಯುತ್, ನೀರಿನ ಸಂಪರ್ಕ ಬಂದ್ : 30X40 ನಿವೇಶನದ ಕಟ್ಟಡಕ್ಕೆ `ಓಸಿ’ ವಿನಾಯಿತಿ.!

18/08/2025 7:02 AM

BIG NEWS : ಹೋಗಿ ಸಾಯಿ ಎಂದರೆ `ಆತ್ಮಹತ್ಯೆಗೆ ಪ್ರಚೋದನೆ’ ಆಗಲ್ಲ : ಹೈಕೋರ್ಟ್ ಮಹತ್ವದ ಆದೇಶ

18/08/2025 6:54 AM

ದೆಹಲಿಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು: 12 ಗಂಟೆಗಳ ಕಾಲ ಮಿಲನ್ ನಲ್ಲಿ ಸಿಲುಕಿದ ವಿಮಾನ

18/08/2025 6:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನಕ್ಕೆ ಶೀಘ್ರ ಶಂಕುಸ್ಥಾಪನೆ : ಸಚಿವ ಈಶ್ವರ ಖಂಡ್ರೆ
KARNATAKA

BIG NEWS : ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನಕ್ಕೆ ಶೀಘ್ರ ಶಂಕುಸ್ಥಾಪನೆ : ಸಚಿವ ಈಶ್ವರ ಖಂಡ್ರೆ

By kannadanewsnow5721/10/2024 1:10 PM

ಬೆಂಗಳೂರು : ಯಲಹಂಕ ಬಳಿಯ ಮಾದಪ್ಪನಹಳ್ಳಿಯಲ್ಲಿರುವ 153 ಎಕರೆ ನೀಲಗಿರಿ ನೆಡುತೋಪು ಪ್ರದೇಶದಲ್ಲಿ ದಿವೌಷಧೀಯ ಸಸ್ಯವನ, ಪಕ್ಷಿಲೋಕ, ಕಿರು ಮೃಗಾಲಯ, ವೃಕ್ಷೋದ್ಯಾನ, ಮತ್ತು ಜೈವಿಕ ವನ ನಿರ್ಮಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಸುರಿಯುವ ಮಳೆಯ ನಡುವೆಯೂ ಮಾದಪ್ಪನಹಳ್ಳಿ ನೆಡುತೋಪಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಅರಣ್ಯ ಸಚಿವರು, ಬೆಂಗಳೂರು ಉತ್ತರ ಭಾಗದಲ್ಲಿ ಲಾಲ್ ಬಾಗ್, ಕಬ್ಬನ್ ಪಾರ್ಕ್ ನಂತಹ ಯಾವುದೇ ಸಸ್ಯೋದ್ಯಾನವಿಲ್ಲ ಹೀಗಾಗಿ ಇಲ್ಲಿ ಅರಣ್ಯ ಭೂಮಿಯಲ್ಲಿ ಇಂದಿರಾಗಾಂಧೀ ಜೈವಿಕ ಉದ್ಯಾನ, ವಿಶ್ವಗುರು ಬಸವಣ್ಣ ದಿವ್ಯೌಷಧೀಯ ಸಸ್ಯ ವನ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪಕ್ಷಿ ಲೋಕ, ನಾಡಪ್ರಭು ಕೆಂಪೇಗೌಡ ಕಿರು ಮೃಗಾಲಯ ಹಾಗೂ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ನಿರ್ಮಾಣ ಮಾಡಲು ಚಿಂತಿಸಲಾಗಿದೆ ಎಂದರು.

ಈ ಪ್ರದೇಶದಲ್ಲಿ ನೆಡಲಾಗಿರುವ ನೀಲಗಿರಿ ಮರಗಳನ್ನು ತೆಗೆದು ಅಲ್ಲಿ ಸ್ಥಳೀಯ ಜಾತಿಯ ನಂದಿ, ಹೊನ್ನೆ, ಬಿಲ್ವ, ಮಹಾಬಿಲ್ವವೇ ಮೊದಲಾದ ನೂರಾರು ಪ್ರಭೇದದ ಸಸಿಗಳನ್ನು ನೆಟ್ಟು ಬೆಳೆಸಲಾಗುವುದು. ಹೀಗೆ ಬೆಳೆಸುವ ಎಲ್ಲ ಮರಗಳ ಬಳಿ ವೃಕ್ಷದ ಹೆಸರು, ಪ್ರಭೇದ ಇತ್ಯಾದಿ ವೈಜ್ಞಾನಿಕ ವಿವರದ ಫಲಕ ಹಾಕುವ ಮೂಲಕ ಮುಂದಿನ ಪೀಳಿಗೆ ಕನಿಷ್ಠ 50 ಮರಗಳನ್ನು ಗುರುತಿಸುವಂತೆ ಜ್ಞಾನ ಸಿಂಚನ ಮಾಡಲು ಕ್ರಮ ವಹಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.

ಅತ್ಯಗತ್ಯವಾದ ಶ್ವಾಸ ತಾಣ:
ಬೆಂಗಳೂರು ನಗರ ವ್ಯಾಪಕವಾಗಿ ಬೆಳೆದಿದೆ ಮತ್ತು ಬೆಳೆಯುತ್ತಿದೆ. ಆದರೆ ಕಬ್ಬನ್ ಪಾರ್ಕ್, ಲಾಲ್ ಬಾಗ್ ನಂತಹ ಮತ್ತೊಂದು ಬೃಹತ್ ಉದ್ಯಾನ ಬೆಂಗಳೂರಿನಲ್ಲಿ ನಿರ್ಮಾಣವೇ ಆಗಲಿಲ್ಲ. ಹೀಗಾಗಿ ಉದ್ಯಾನ ನಗರಿ ಬೆಂಗಳೂರಿನ ಖ್ಯಾತಿಯನ್ನು ಉಳಿಸಲು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದರು.

ಯಲಹಂಕ ಸುತ್ತಮುತ್ತ ನೂರಾರು ವಸತಿ ಬಡಾವಣೆಗಳಿದ್ದು, ಬಿಡಿಎ ಸಹ 25 ಸಾವಿರ ನಿವೇಶನಗಳ ಡಾ.ಶಿವರಾಮಕಾರಂತ ಬಡಾವಣೆ ಅಭಿವೃದ್ಧಿ ಪಡಿಸುತ್ತಿದೆ. ಜೊತೆಗೆ ಇಲ್ಲಿ 5-6 ಸಾವಿರ ಮನೆಗಳು ಈಗಾಗಲೇ ಇವೆ. ಭವಿಷ್ಯದಲ್ಲಿ 2 ಲಕ್ಷ ಜನರು ವಾಸಿಸುವ ಈ ಪ್ರದೇಶದಲ್ಲಿ ಇಂದಿರಾಗಾಂಧೀ ಜೈವಿಕ ಉದ್ಯಾನ, ಗಿಡಮೂಲಿಕೆಗಳ ದಿವ್ಯೌಷಧ ವನ, ವೃಕ್ಷೋಧ್ಯಾನ ಮತ್ತು ಕಿರು ಮೃಗಾಲಯ ಸ್ಥಾಪಿಸುವುದರಿಂದ ಜನಾಕರ್ಷಣೆಯ ಕೇಂದ್ರವೂ ಆಗುತ್ತದೆ ಜೊತೆಗೆ ಬೆಂಗಳೂರಿನ ಈ ಭಾಗದ ಜನರಿಗೆ ಅತ್ಯುತ್ತಮ ಶ್ವಾಸತಾಣ (ಲಂಗ್ಸ್ ಸ್ಪೇಸ್) ಲಭಿಸಿದಂತಾಗುತ್ತದೆ ಎಂದು ಈಶ್ವರ ಖಂಡ್ರೆ ವಿವರಿಸಿದರು.

ನವೆಂಬರ್ ಅಂತ್ಯಕ್ಕೆ ಶಂಕುಸ್ಥಾಪನೆ:
ಅರಣ್ಯ ಇಲಾಖೆಯಿಂದ ನೆಡುತೋಪಿಗಾಗಿ ಕರ್ನಾಟಕ ಅರಣ್ಯ ನಿಗಮ ನಿಯಮಿತಕ್ಕೆ ನೀಡಲಾಗಿರುವ ಈ 153 ಎಕರೆ ಪ್ರದೇಶವನ್ನು ಇಲಾಖೆಗೆ ಮರಳಿ ಪಡೆಯುವ ಪ್ರಕ್ರಿಯೆಯನ್ನೂ ಈಗಾಗಲೇ ಆರಂಭಿಸಲಾಗಿದ್ದು, ನವೆಂಬರ್ ಕೊನೆಯ ವಾರದಲ್ಲಿ ಈ ಬೃಹತ್ ಉದ್ಯಾನದ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದೂ ಈಶ್ವರ ಖಂಡ್ರೆ ತಿಳಿಸಿದರು.
ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಾದ ರಾಧಾ ದೇವಿ, ಶಿವಶಂಕರ್, ರವೀಂದ್ರ ಕುಮಾರ್ ಉಪಸ್ಥಿತರಿದ್ದರು.

BIG NEWS : Early foundation stone laying for Thimmakka Arboriculture in Salumara: Minister Ishwara Khandre BIG NEWS : ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನಕ್ಕೆ ಶೀಘ್ರ ಶಂಕುಸ್ಥಾಪನೆ : ಸಚಿವ ಈಶ್ವರ ಖಂಡ್ರೆ
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ 4 ಲಕ್ಷ ಕಟ್ಟಡಗಳಿಗೆ ವಿದ್ಯುತ್, ನೀರಿನ ಸಂಪರ್ಕ ಬಂದ್ : 30X40 ನಿವೇಶನದ ಕಟ್ಟಡಕ್ಕೆ `ಓಸಿ’ ವಿನಾಯಿತಿ.!

18/08/2025 7:02 AM1 Min Read

BIG NEWS : ಹೋಗಿ ಸಾಯಿ ಎಂದರೆ `ಆತ್ಮಹತ್ಯೆಗೆ ಪ್ರಚೋದನೆ’ ಆಗಲ್ಲ : ಹೈಕೋರ್ಟ್ ಮಹತ್ವದ ಆದೇಶ

18/08/2025 6:54 AM2 Mins Read

GOOD NEWS : ಹೊಸ `BPL’ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ `ಪಡಿತರ ಚೀಟಿ’ ವಿತರಣೆ.!

18/08/2025 6:46 AM1 Min Read
Recent News

ರಾಜ್ಯದಲ್ಲಿ 4 ಲಕ್ಷ ಕಟ್ಟಡಗಳಿಗೆ ವಿದ್ಯುತ್, ನೀರಿನ ಸಂಪರ್ಕ ಬಂದ್ : 30X40 ನಿವೇಶನದ ಕಟ್ಟಡಕ್ಕೆ `ಓಸಿ’ ವಿನಾಯಿತಿ.!

18/08/2025 7:02 AM

BIG NEWS : ಹೋಗಿ ಸಾಯಿ ಎಂದರೆ `ಆತ್ಮಹತ್ಯೆಗೆ ಪ್ರಚೋದನೆ’ ಆಗಲ್ಲ : ಹೈಕೋರ್ಟ್ ಮಹತ್ವದ ಆದೇಶ

18/08/2025 6:54 AM

ದೆಹಲಿಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು: 12 ಗಂಟೆಗಳ ಕಾಲ ಮಿಲನ್ ನಲ್ಲಿ ಸಿಲುಕಿದ ವಿಮಾನ

18/08/2025 6:50 AM

GOOD NEWS : ಹೊಸ `BPL’ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ `ಪಡಿತರ ಚೀಟಿ’ ವಿತರಣೆ.!

18/08/2025 6:46 AM
State News
KARNATAKA

ರಾಜ್ಯದಲ್ಲಿ 4 ಲಕ್ಷ ಕಟ್ಟಡಗಳಿಗೆ ವಿದ್ಯುತ್, ನೀರಿನ ಸಂಪರ್ಕ ಬಂದ್ : 30X40 ನಿವೇಶನದ ಕಟ್ಟಡಕ್ಕೆ `ಓಸಿ’ ವಿನಾಯಿತಿ.!

By kannadanewsnow5718/08/2025 7:02 AM KARNATAKA 1 Min Read

ಬೆಂಗಳೂರು : ನಕ್ಷೆ ಮಂಜೂರಾತಿ ಪ್ರಕಾರ ಕಟ್ಟಡ ನಿರ್ಮಿಸಿ ವಾಸ ಯೋಗ್ಯ ಪ್ರಮಾಣ ಪತ್ರ ಪಡೆಯಬೇಕು. ಓಸಿ ಇಲ್ಲದ ಕಟ್ಟಡಗಳಿಗೆ…

BIG NEWS : ಹೋಗಿ ಸಾಯಿ ಎಂದರೆ `ಆತ್ಮಹತ್ಯೆಗೆ ಪ್ರಚೋದನೆ’ ಆಗಲ್ಲ : ಹೈಕೋರ್ಟ್ ಮಹತ್ವದ ಆದೇಶ

18/08/2025 6:54 AM

GOOD NEWS : ಹೊಸ `BPL’ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ `ಪಡಿತರ ಚೀಟಿ’ ವಿತರಣೆ.!

18/08/2025 6:46 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಭೂ ಒಡೆತನ’ ಸೇರಿ ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

18/08/2025 6:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.