Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಯಚೂರಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ: 10 ಜನರಿಗೆ ಗಂಭೀರ ಗಾಯ

25/01/2026 9:55 PM

ಮೈಸೂರು ಮೂಲದ ಎಂ.ಪುಟ್ಟಮಾದಯ್ಯ ಸೇರಿ ಐವರು IPS ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ

25/01/2026 9:45 PM

ನಾಳೆ ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ಹಿನ್ನಲೆ: ಈ ಸಂಚಾರ ಬದಲಾವಣೆ | Bengaluru Traffic Update

25/01/2026 9:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಶಾಲೆಯ ಅಡುಗೆ ಸಿಬ್ಬಂದಿಗಳನ್ನು ಸೇವೆಯಿಂದ ಬಿಡುಗಡೆ ಮಾಡುವ ಕುರಿತು, ಶಿಕ್ಷಣ ಇಲಾಖೆ ಮಹತ್ವದ ಆದೇಶ
KARNATAKA

BIG NEWS : ರಾಜ್ಯದ ಶಾಲೆಯ ಅಡುಗೆ ಸಿಬ್ಬಂದಿಗಳನ್ನು ಸೇವೆಯಿಂದ ಬಿಡುಗಡೆ ಮಾಡುವ ಕುರಿತು, ಶಿಕ್ಷಣ ಇಲಾಖೆ ಮಹತ್ವದ ಆದೇಶ

By kannadanewsnow0528/03/2025 5:31 AM

ಬೆಂಗಳೂರು : ರಾಜ್ಯದ ಶಾಲೆಯ ಅಡುಗೆ ಸಿಬ್ಬಂದಿ ಗಳನ್ನು ಸೇವೆಯಿಂದ ಬಿಡುಗಡೆ ಮಾಡುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.ಮಧ್ಯಾಹ್ನ ಉಪಾಹಾರ ಯೋಜನೆಯ ಅಡುಗೆ ಸಿಬ್ಬಂದಿಯನ್ನು ವಾರ್ಷಿಕ ಹತ್ತು ತಿಂಗಳ ತಾತ್ಕಾಲಿಕ ಸೇವೆಯನ್ನು ಪೊರೈಸಿದ ನಂತರ 31ನೇ-ಮಾರ್ಚ ಅಂತ್ಯಕ್ಕೆ ಸೇವೆಯಿಂದ ಕೈಬಿಡುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2024-25 ನೇ ಸಾಲಿನ ಪಿಎಂಪೋಷಣ್-ಮಧ್ಯಾಹ್ನ ಉಪಹಾರ ಯೋಜನೆ ಕಾರ್ಯಕ್ರಮದಡಿಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಜೂನ್-2024 ಮಾಹೆಯಿಂದ ಮಾರ್ಚ್-2025 ರ ಮಾಹೆಯವರೆಗೆ ಒಟ್ಟು 10 ತಿಂಗಳ ಅವಧಿಗೆ ಯೋಜನೆಯನ್ನು ನಡೆಸಲು ಅನುಮೋದನೆ ನೀಡಿರುತ್ತದೆ. ಸದರಿ ಅವಧಿಗೆ ಸರ್ಕಾರಿ/ಅನುದಾನಿತ ಪ್ರಾಥಮಿಕ/ಪ್ರೌಢ ಶಾಲೆಗಳಲ್ಲಿ ಅಡುಗೆ ತಯಾರಿಸಿ ವಿತರಿಸುವ ಕೆಲಸಕ್ಕೆ ತಾತ್ಕಾಲಿಕವಾಗಿ ಅಡುಗೆ ಸಿಬ್ಬಂದಿಯ ಸೇವೆಯನ್ನು ಪಡೆದುಕೊಂಡಿದ್ದು, ಈ ಅವಧಿಗೆ ಮಾಸಿಕ ಗೌರವ ಸಂಭಾವನೆಯನ್ನು ವಿತರಿಸಲಾಗಿರುತ್ತದೆ.

2024-25ನೇ ಸಾಲಿನಲ್ಲಿ ಯೋಜನೆಯ ಅವಧಿ 31ನೇ ಮಾರ್ಚ್ ಅಂತ್ಯಕ್ಕೆ ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ, ಯೋಜನೆಯಡಿ ತಾತ್ಕಾಲಿಕವಾಗಿ ಸೇವೆ ನಿರ್ವಹಿಸಿದ ಅಡುಗೆ ಸಿಬ್ಬಂದಿಯನ್ನು ದಿನಾಂಕ: 31.3.2025ರಂದು ಬಿಡುಗಡೆಗೊಳಿಸುವಂತೆ ಶಾಲೆಯ ಮುಖ್ಯ ಶಿಕ್ಷಕರಿಗೆ ಸೂಚಿಸಲು ತಿಳಿಸಿದೆ. ಈ ರೀತಿ ಬಿಡುಗಡೆಗೊಳಿಸಿದ ಅಡುಗೆ ಸಿಬ್ಬಂದಿಯನ್ನು 2025-26 ನೇ ಶೈಕ್ಷಣಿಕ ಸಾಲಿಗೂ ಮುಂದುವರೆಸಲು ಅಗತ್ಯ ಕ್ರಮ ವಹಿಸುವುದು. ಈ ಸಂಬಂಧ ಶಾಲಾ ಪ್ರಾರಂಭದ ದಿನದಿಂದ ಇವರನ್ನು ತಾತ್ಕಾಲಿಕ ಸೇವೆಗೆ ಪಡೆಯುವುದು.

ಈ ಸಂದರ್ಭದಲ್ಲಿ ಅಡುಗೆ ಸಿಬ್ಬಂದಿಯು 60 ವರ್ಷ ವಯೋಮಿತಿ ಮೀರಿದ ಪ್ರಕರಣಗಳಿದ್ದಲ್ಲಿ, ಅವರ ಬದಲಿಗೆ ಹೊಸ ಅಡುಗೆ ಸಿಬ್ಬಂದಿಯನ್ನು ಪಡೆಯಲು ಇಲಾಖೆಯಲ್ಲಿ ಜಾರಿಯಲ್ಲಿರುವ ಮಾರ್ಗಸೂಚಿಯಂತ ಅಗತ್ಯ ಕ್ರಮ ಕೈಗೊಳ್ಳುವುದು. ಶಾಲೆಯಲ್ಲಿ ಯೋಜನೆಯಡಿ ಮಧ್ಯಾಹ್ನ ಬಿಸಿಯೂಟ, ಕ್ಷೀರಭಾಗ್ಯ, ಪೂರಕ ಪೌಷ್ಠಿಕ ಆಹಾರ ವಿತರಣೆ ಕಾರ್ಯಕ್ರಮವನ್ನು ಯಾವುದೇ ಅಡೆ-ತಡೆ ಇಲ್ಲದೇ ಸುಸೂತ್ರವಾಗಿ ನಡೆಸಲು ಪೂರಕ ಕ್ರಮಗಳನ್ನು ಕೈಗೊಂಡು ಯೋಜನೆಯ ಯಶಸ್ಸಿಗೆ ಶ್ರಮವಹಿಸಲು ಸೂಚಿಸಿದೆ.
ತತ್ಸಂಬಂಧ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಶಿಕ್ಷಣಾಧಿಕಾರಿಗಳು (ಪಿಎಂಪೋಷಣ್) ಮತ್ತು ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಹಣಾಧಿಕಾರಿಗಳು, ಸಹಾಯಕ ನಿರ್ದೇಶಕರು (ಪಿಎಂಪೋಷಣ್) ರವರು ಸೂಕ್ತ ಮೇಲ್ವಿಚಾರಣೆಯನ್ನು ನಡೆಸುವುದು. ತತ್ಸಂಬಂಧಿತ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದೆ .

Share. Facebook Twitter LinkedIn WhatsApp Email

Related Posts

ರಾಯಚೂರಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ: 10 ಜನರಿಗೆ ಗಂಭೀರ ಗಾಯ

25/01/2026 9:55 PM1 Min Read

ಮೈಸೂರು ಮೂಲದ ಎಂ.ಪುಟ್ಟಮಾದಯ್ಯ ಸೇರಿ ಐವರು IPS ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ

25/01/2026 9:45 PM1 Min Read

ನಾಳೆ ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ಹಿನ್ನಲೆ: ಈ ಸಂಚಾರ ಬದಲಾವಣೆ | Bengaluru Traffic Update

25/01/2026 9:19 PM2 Mins Read
Recent News

ರಾಯಚೂರಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ: 10 ಜನರಿಗೆ ಗಂಭೀರ ಗಾಯ

25/01/2026 9:55 PM

ಮೈಸೂರು ಮೂಲದ ಎಂ.ಪುಟ್ಟಮಾದಯ್ಯ ಸೇರಿ ಐವರು IPS ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ

25/01/2026 9:45 PM

ನಾಳೆ ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ಹಿನ್ನಲೆ: ಈ ಸಂಚಾರ ಬದಲಾವಣೆ | Bengaluru Traffic Update

25/01/2026 9:19 PM

ಬಳ್ಳಾರಿಯಲ್ಲಿ ಆರೋಗ್ಯ ಅಧಿಕಾರಿಯಿಂದ ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ : ‘FIR’ ದಾಖಲು!

25/01/2026 9:12 PM
State News
KARNATAKA

ರಾಯಚೂರಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ: 10 ಜನರಿಗೆ ಗಂಭೀರ ಗಾಯ

By kannadanewsnow0925/01/2026 9:55 PM KARNATAKA 1 Min Read

ರಾಯಚೂರು: ಜಿಲ್ಲೆಯಲ್ಲಿ ಹುಚ್ಚು ನಾಯಿಯೊಂದು ಕಂಡಕಂಡವರ ಮೇಲೆ ಎರದಿ ಕಡಿದಿದೆ. ಆಟವಾಡುತ್ತಿದ್ದಂತ 10 ಮಕ್ಕಳಿಗೂ ಹುಚ್ಚು ನಾಯಿ ಕಡಿತವಾಗಿದ್ದು, ಗಂಭೀರವಾಗಿ…

ಮೈಸೂರು ಮೂಲದ ಎಂ.ಪುಟ್ಟಮಾದಯ್ಯ ಸೇರಿ ಐವರು IPS ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ

25/01/2026 9:45 PM

ನಾಳೆ ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ಹಿನ್ನಲೆ: ಈ ಸಂಚಾರ ಬದಲಾವಣೆ | Bengaluru Traffic Update

25/01/2026 9:19 PM

ಬಳ್ಳಾರಿಯಲ್ಲಿ ಆರೋಗ್ಯ ಅಧಿಕಾರಿಯಿಂದ ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ : ‘FIR’ ದಾಖಲು!

25/01/2026 9:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.