ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಂತ ಹಂತವಾಗಿ 5 ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಅದರಲ್ಲಿ ಪ್ರಮುಖವಾಗಿ ಮಹಿಳೆಯರಿಗೆ ಎಂದು ಜಾರಿ ಮಾಡಿದ ಗೃಹಲಕ್ಷ್ಮಿ ಯೋಜನೆ ಕೂಡ ಒಂದು. ಇದೀಗ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಸದ್ಯಕ್ಕೆ ಮಾರ್ಚ್ ತಿಂಗಳ ಹಣ ಅಕೌಂಟಿಗೆ ಜಮೆ ಆಗಲ್ಲ ಎಂದು ತಿಳಿದು ಬಂದಿದೆ.
ಹೌದು ರಾಜ್ಯ ಸರ್ಕಾರ 16 ನೇ ಕಂತಿನ ಹಣವನ್ನ ಜನವರಿ ತಿಂಗಳಿನಲ್ಲಿ ಮಹಿಳೆಯರ ಖಾತೆಗೆ ಜಮಾ ಮಾಡಬೇಕಿತ್ತು. ಆದರೆ, ತಾಂತ್ರಿಕ ಸಮಸ್ಯೆಯಿಂದಾಗಿ ಕಳೆದ ಮೂರ್ನಾಲ್ಕು ತಿಂಗಳ ಗೃಹಲಕ್ಷ್ಮಿ ಹಣ ಸರಿಯಾಗ ಖಾತಗೆ ಜಮಾ ಆಗದ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಹಾಗೂ ರಾಜ್ಯದ ಮಹಿಳೆಯರು ಅಸಮಾಧಾನವನ್ನ ಹೊರಹಾಕಿದ್ದಾರೆ. ಬಳಿಕ ಜನೆವರಿ ಹಾಗು ಫೆಬ್ರವರಿ ತಿಂಗಳ ಹಣ ಮಹಿಳೆಯರ ಖಾತೆಗೆ ಜಮೆ ಆಗಿತ್ತು. ಆದರೆ ಇದೀಗ ರಾಜ್ಯಾಧ್ಯಂತ ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಕಾರಣ ಏನು?
ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಮಹಿಳೆಯರ ಖಾತೆಗೆ ಜಮಾ ಆಗೋದಿಲ್ಲ. ಯಾಕೆಂದರೆ ರಾಜ್ಯ ಶಿಶು ಅಭಿವೃದ್ದಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂದಿಸಿದ ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಸಾರ್ವಜನಿಕ (ಫಲಾನುಭವಿಗಳ)ರ ಮಾಹಿತಿಗಾಗಿ ಐಟಿ/ಜಿಎಸ್ಟಿ ಟ್ಯಾಕ್ಸ್ ಪೇಯಿ ಎಂದು ತೋರಿಸುತ್ತಿರುವ ಫಲಾನುಭವಿಗಳು ಹಾಗೂ ಈಗಾಗಲೇ ದಾಖಾಲಾತಿಯನ್ನು ಸಲ್ಲಿಸಿರುವ ಫಲಾನುಭವಿಗಳ ಮಾಹಿತಿಗಾಗಿ ಸರ್ಕಾರದ ಆದಾಯ ತೆರಿಗೆ ಇಲಾಖೆಯಿಂದ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯಿಂದ ಫಲಾನುಭವಿಗಳ ದತ್ತಾಂಶದ ಪರಿಶೀಲನೆಯ ಮಾಹಿತಿ ಸ್ವೀಕೃತವಾದ ನಂತರ ಫಲಾನುಭವಿಗಳಿಗೆ ಧನಸಹಾಯ ಪಾವತಿಸುವ ಕುರಿತು ಸರ್ಕಾರದ ಹಂತದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಾಗುತ್ತದೆ ಎಂದು ತಿಳಿದು ಬಂದಿದೆ.
ಈ ಹಿನ್ನಲೆಯಲ್ಲಿ ಅಲ್ಲಿಯವರೆಗೂ ಐಟಿ ಹಾಗೂ ಜಿಎಸ್ಟಿ ಟ್ಯಾಕ್ಸ್ ಪೇಯಿ ಫಲಾನುಭವಿಗಳು ಮಾಹಿತಿಯನ್ನು ಪ್ರಧಾನ ಕಚೇರಿಗೆ ರವಾನಿಸದೇ ಇರುವಂತೆ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ಇವರಿಂದ ತಿಳಿಸಿರುತ್ತಾರೆ. ಹೀಗಾಗಿ ಸದ್ಯಕ್ಕೆ ಮಾರ್ಚ್ ಸೇರಿದಂತೆ ಬಾಕಿ ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿ ತಾತ್ಕಾಲಿಕವಾಗಿ ಸ್ಥಗಿತಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.








