ಹುಬ್ಬಳ್ಳಿ: ನಗರದಲ್ಲಿ ಐದು ವರ್ಷದ ಬಾಲಕಿಯನ್ನು ಹತ್ಯೆಗೈದಿದ್ದಂತ ಬಿಹಾರ ಮೂಲದ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಲಾಗಿತ್ತು. ಪೊಲೀಸರು ನಡೆಸಿದಂತ ಎನ್ ಕೌಂಟರ್ ನಲ್ಲಿ ಬಿಹಾರ ಮೂಲದ ರಿತೇಶ್ ಬಲಿಯಾಗಿದ್ದಾನೆ. ಇದೀಗ `PSI’ ಅನ್ನಪೂರ್ಣ ಆರ್. ಮುಕ್ಕಣ್ಣವರ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಹೌದು, 2018 ರ ಬ್ಯಾಚ್ ನ ಪಿಎಸ್ ಐ ಅನ್ನಪೂರ್ಣ ಆರ್. ಮುಕ್ಕಣ್ಣವರು ಬಯಸಿಂದ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದರು. ಬೆಳಗಾವಿ ಜಿಲ್ಲೆಯ ಗೋಕಾಕ್ ನ ಗುಜನಟ್ಟಿ ಗ್ರಾಮದವರಾಗಿದ್ದಾರೆ. ರೈತ ಕುಟುಂಬದವರಾದ ಇವರು ಎಂಎಸ್ಸಿ ಪದವಿ ಪಡೆದಿದ್ದಾರೆ. ಬಾಲ್ಯದಲ್ಲೇ ತಂದೆಯನ್ನು ಕಳೆದುಕೊಂಡಿದ್ದರು. ತಾಯಿ ನೆರಳಿನಲ್ಲಿ ಬೆಳೆದು ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದರು. ಇದೀಗ ಎನ್ ಕೌಂಟರ್ ನಲ್ಲಿ 5 ವರ್ಷದ ಬಾಲಕಿಯ ಹಂತಕನ ಹತ್ಯೆ ಮಾಡಿದ್ದು, ಸಾರ್ವಜನಿಕರಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಘಟನೆ ಹಿನ್ನೆಲೆ
ಅಶೋಕ ನಗರ ಠಾಣೆ ವ್ಯಾಪ್ತಿಯಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಮಗುವನ್ನು ಚಾಕೋಲೆಟ್ ಆಸೆ ತೋರಿಸಿ ಹೊತ್ತೊಯ್ದ ಕಾಮುಕ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬಳಿಕ ಕೊಲೆ ಮಾಡಿದ್ದ. ಅಶೋಕನಗರದ ಪಾಳು ಮನೆಯ ಶೆಡ್ ನಲ್ಲಿ ಬಾಲಕಿ ಶವವಿಟ್ಟು ಪರಾರಿಯಾಗಿದ್ದ. ಆರೋಪಿಯನ್ನು ಅಶೋಕನಗರ ಠಾಣೆ ಪೊಲೀಸರು 24ಗಂಟೆಯೊಳಗೆ ಬಂಧಿಸಿದ್ದರು.
ಹುಬ್ಬಳ್ಳಿಯಲ್ಲಿ ಬಿಹಾರದ ಯುವಕನಿಂದ ಐದು ವರ್ಷದ ಬಾಲಕಿಯನ್ನು ಹತ್ಯೆ ಮಾಡಿದಂತ ಆರೋಪಿಯನ್ನು ಬಂಧಿಸೋದಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದಂತ ಸಂದರ್ಭದಲ್ಲಿ ಕಾಲಿಗೆ ಗುಂಡೇಟು ನೀಡಿ ಬಂಧಿಸಿದ್ದರು ಎನ್ನಲಾಗಿತ್ತು. ಆದರೇ ಆ ಬಳಿಕ ಪೊಲೀಸರು ನಡೆಸಿದಂತ ಎನ್ ಕೌಂಟರ್ ನಲ್ಲಿ ಬಿಹಾರ ಮೂಲದ ರಿತೇಶ್ ಬಲಿಯಾಗಿದ್ದಾನೆ ಎಂಬುದಾಗಿ ಕಮೀಷನರ್ ಶಶಿಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಇನ್ನೂ ಈ ದಾಳಿಯಲ್ಲಿ ಓರ್ವ ಪಿಎಸ್ಐ, ಇಬ್ಬರು ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಗಾಯಾಳು ಪೊಲೀಸರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.