ಮೈಸೂರು : ನಿನ್ನೆ ನಡೆದ ದೆಹಲಿ ಸ್ಫೋಟ ಬಿಹಾರ ಚುನಾವಣೆ ಮೇಲೆ ಪರಿಣಾಮ ಬೀರಬಹುದು. ಅದೂ ಕೂಡ ಬಿಜೆಪಿ ವಿರುದ್ಧವಾಗಿ ಪರಿಣಾಮ ಬೀರಬಹುದು ಹಾಗಾಗಿ ಕೇಂದ್ರ ಸರ್ಕಾರವೇ ಈ ಕುರಿತು ತನಿಖೆ ನಡೆಸಲಿ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ದೆಹಲಿ ಸ್ಫೋಟ ಇವತ್ತಿನ ಬಿಹಾರ ಚುನಾವಣೆ ಮೇಲೆ ಪ್ರಭಾವ ಬೀರುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಚುನಾವಣೆ ವೇಳೆಯೇ ಬಾಂಬ್ ಬ್ಲಾಸ್ಟ್ಗಳ ಬಗ್ಗೆ ಕೇಂದ್ರ ಸರ್ಕಾರವೇ ಹೇಳಬೇಕು. ಕೇಂದ್ರವೇ ತನಿಖೆ ನಡೆಸಿ ಉತ್ತರಿಸಲಿ. ಬಾಂಬ್ ಬ್ಲಾಸ್ಟ್ಗಳು ಆಗಬಾರದು. ಇದರಿಂದಾಗುವ ಅಮಾಯಕರ ಜೀವಹಾನಿ ತುಂಬಾ ಬೇಸರದ ಸಂಗತಿ ಎಂದರು.








