ಚಿಕ್ಕಮಗಳೂರು : ಸುಡು ಬೇಸಿಗೆಯಿಂದ ಬಳಲಿದ್ದ ಚಿಕ್ಕಮಂಗಳೂರು ಜಿಲ್ಲೆಗೆ ವರುಣ ಇಂದು ತಂಪೆರೆದಿದ್ದಾನೆ ಗುಡುಗು ಸಹಿತ ಇಂದು ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಾಗಿದ್ದು ಅಲ್ಲದೆ ಇನ್ನೊಂದು ದುರಂತ ಒಂದು ಕೂಡ ಸಂಭವಿಸಿದೆ ಸಿಡಿಲು ಬಡಿದು ಓರ್ವ ಮಹಿಳೆ ಕೂಡ ಇಂದು ಮೃತಪಟ್ಟಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮೃತ ಮಹಿಳೆ ಬೇಲೂರು ತಾಲೂಕಿನ ಹೆಬ್ಬಾಳ ತಿಮ್ಮನಹಳ್ಳಿಯ ನಾಗಮ್ಮ (65) ಎಂದು ತಿಳಿದು ಬಂದಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ ಮೃಪಟ್ಟಿದ್ದಾರೆ.ಹೊಲದಲ್ಲಿ ಕೆಲಸ ಮಾಡುತ್ತಿದ್ದ ಉಳಿದವರು ಅಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.