ಬೆಂಗಳೂರು : ಮುಂದಿನ ಐದು ವರ್ಷಗಳಲ್ಲಿ ರಾಜ್ಯವನ್ನು ತಯಾರಿಕಾ ವಲಯದಲ್ಲಿ ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು, ರಾಜ್ಯ ಸರ್ಕಾರ ಕರ್ನಾಟಕದಲ್ಲಿ ತಯಾರಿಕಾ ವಲಯದ ಬಲವರ್ಧನೆಗೆ ಆರು ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ನಿನ್ನೆ ರಾಜ್ಯದಲ್ಲಿ ತಯಾರಿಕಾ ವಲಯದ ಬಲವರ್ಧನೆಗೆ ಆಗಬೇಕಾದ ಕಾಯಕಲ್ಪ ಕುರಿತು 60 ಕಂಪನಿಗಳ 80 ಮುಖ್ಯಸ್ಥರು ಮತ್ತು ಸಿಇಒಗಳೊಂದಿಗೆ ‘ಉತ್ಪಾದನಾ ಮಂಥನ’ ನಡೆಯಿತು. ಈ ಸಮಾವೇಶದಲ್ಲಿ ಏರೋಸ್ಪೇಸ್ ಮತ್ತು ಡಿಫೆನ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ಸ್, ಕ್ಯಾಪಿಟಲ್ ಗೂಡ್ಸ್ ಮತ್ತು ರೋಬೋಟಿಕ್ಸ್, ಆಟೋ ಮತ್ತು ಎಲೆಕ್ಟ್ರಿಕ್ ವೆಹಿಕಲ್ಸ್, ಟೆಕ್ನಿಕಲ್ ಮತ್ತು ಎಂಎಂಎಫ್ ಬೇಸ್ಡ್ ಟೆಕ್ಸ್ಟೈಲ್ಸ್ ಹಾಗೂ ಪಾದರಕ್ಷೆ, ಗೊಂಬೆ ಮತ್ತು ಎಫ್ಎಂಸಿಜಿ ಉತ್ಪನ್ನಗಳನ್ನು ಒಳಗೊಂಡಿರುವ ಗ್ರಾಹಕ ಉತ್ಪನ್ನಗಳ ವಲಯಗಳ ಮೇಲೆ ಗಮನ ಕೇಂದ್ರೀಕರಿಸಲಾಗಿತ್ತು.
ರಾಜ್ಯದ ಕೈಗಾರಿಕಾ ವಲಯವು ತಯಾರಿಕಾ ವಲಯಕ್ಕೆ ಹೊರಳಿಕೊಳ್ಳಬೇಕಾಗಿದೆ. ಇದಕ್ಕಾಗಿ ರಫ್ತು ಕೇಂದ್ರಿತವಾಗಿರುವಂಥ `ಫ್ರೀ ಟ್ರೇಡ್ ವೇರ್-ಹೌಸಿಂಗ್ ಝೋನ್’ಗಳು, ರಫ್ತನ್ನೇ ಮುಖ್ಯವಾಗಿ ಹೊಂದಿರುವ ಕೈಗಾರಿಕಾ ಪಾರ್ಕುಗಳು, ಬಂದರುಗಳಿಗೆ ತ್ವರಿತ ಸಂಪರ್ಕ ವ್ಯವಸ್ಥೆ ಎಲ್ಲವನ್ನೂ ಕಲ್ಪಿಸಲಾಗುವುದು. ಉದ್ಯಮಿಗಳು ಮಾಡಿರುವ ಶಿಫಾರಸುಗಳನ್ನು ಸರಕಾರದ ಕ್ರಿಯಾ ಯೋಜನೆಯ ಭಾಗವನ್ನಾಗಿ ಮಾಡಿಕೊಳ್ಳಲಾಗುವುದು.
6 ಪ್ರಮುಖ ವಲಯಗಳ ಪ್ರಗತಿಗೆ ಪ್ರತ್ಯೇಕ ಟಾಸ್ಕ್-ಫೋರ್ಸ್ ಗಳನ್ನು ರಚಿಸಲಿದೆ. ಇದಕ್ಕೆ ಬೇಕಾದ ಸಮಗ್ರ ಟೌನ್-ಶಿಪ್ ಗಳ ಅಭಿವೃದ್ಧಿಯಿಂದ ಹಿಡಿದು ಕೈಗಾರಿಕಾ ಪ್ರದೇಶಗಳಿಂದ ಮಂಗಳೂರು ಮತ್ತು ಚೆನ್ನೈ ಬಂದರುಗಳಿಗೆ ಬೇಕಾದ ಸಮರ್ಪಕ ಸಂಪರ್ಕದವರೆಗೆ ಪ್ರತಿಯೊಂದು ಸೌಲಭ್ಯಗಳನ್ನೂ ಒದಗಿಸಲಾಗುವುದು.ಜೊತೆಗೆ, ಆರೂ ವಲಯಗಳಲ್ಲಿ ಪ್ರಗತಿ ಸಾಧಿಸಲು ಟಾಸ್ಕ್-ಫೋರ್ಸ್ ಗಳನ್ನು ರಚಿಸಲಾಗುವುದು. ಇದಕ್ಕಾಗಿ 2030ರ ಹೊತ್ತಿಗೆ 7.5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಆಕರ್ಷಿಸುವ ಜತೆಗೆ, 20 ಲಕ್ಷ ಉದ್ಯೋಗ ಸೃಷ್ಟಿಸುವತ್ತ ದಾಪುಗಾಲು ಇಡಬೇಕಾಗಿದೆ.
ಉತ್ಪಾದನಾ ಮಂಥನ; ಕರ್ನಾಟಕವನ್ನು ಜಾಗತಿಕ ಉತ್ಪಾದನಾ ಹಬ್ ಆಗಿ ರೂಪಿಸುವತ್ತ ಮಹತ್ತರ ಹೆಜ್ಜೆ
ರಾಜ್ಯವನ್ನು ಜಾಗತಿಕ ಉತ್ಪಾದನಾ ಕೇಂದ್ರವಾಗಿ (ಗ್ಲೋಬಲ್ ಮ್ಯಾನ್ಯುಫ್ಯಾಕ್ಚರಿಂಗ್ ಹಬ್) ರೂಪಿಸುವ ಉದ್ದೇಶದೊಂದಿಗೆ ಆಯೋಜಿಸಲಾದ #ಉತ್ಪಾದನಾಮಂಥನ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದೆ.
ಇದೇ ಮೊಟ್ಟ ಮೊದಲ ಬಾರಿಗೆ ಆಯೋಜನೆ… pic.twitter.com/NlUpBomp6B
— M B Patil (@MBPatil) June 10, 2025