ಬೆಂಗಳೂರು : ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಏಪ್ರಿಲ್ 29ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಹೌದು ಆರೋಪಿ ರಜತ್ ಗೆ ಏಪ್ರಿಲ್ 29 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ. ಇನ್ನು ಇದೇ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯಾದ ವಿನಯ್ ಗೌಡಗೆ 500 ರೂಪಾಯಿ ದಂಡ ವಿಧಿಸಿ ವಾರಂಟ್ ರೀಕಾಲ್ ಮಾಡಲಾಗಿದ್ದು, ಬಳಿಕ ಜಾಮೀನು ಕೋರಿ ರಜತ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ರಜತ್ ಜಾಮೀನು ಅರ್ಜಿ ವಿಚಾರಣೆ ಕೋರ್ಟ್ ನಾಳೆ ನಿಗದಿಪಡಿಸಿದೆ.
ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಜೈಲು ಸೇರಿ ಜಾಮೀನು ಮೇಲೆ ರಿಲೀಸ್ ಆಗಿದ್ದ ರಜತ್ ಗೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿತ್ತು.ಆದರೆ ರಜತ್ ವಿಚಾರಣೆಗೆ ಹಾಜರಾಗದೇ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ರಹಿತ್ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಬಸವೇಶ್ವರ ನಗರ ಠಾಣೆ ಪೊಲೀಸರು ರಜತ್ ನನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದರು.ಈ ವೇಳೆ 24ನೇ ಎಸಿಎಂಎಂ ಕೋರ್ಟ್ ರಜತ್ ಗೆ ಮತ್ತೆ 14 ದಿನಗಳ ಕಾಲ ಏ.29ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.