Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ’ದ ಅಧ್ಯಕ್ಷರಾಗಿ ‘ಪುಷ್ಪರಾಜ್ ಶೆಟ್ಟಿ’ ಆಯ್ಕೆ

09/11/2025 10:13 PM

BREAKING : 2025ರ ‘SSC CHSL’ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ; ಡೌನ್ಲೋಡ್ ಮಾಡಲು ನೇರ ಲಿಂಕ್ ಇಲ್ಲಿದೆ!

09/11/2025 9:59 PM

BREAKING: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಿರುನಾಲೆಗೆ ಕಾರಿ ಬಿದ್ದು ಓರ್ವ ನಾಪತ್ತೆ, ಮೂವರಿಗೆ ಗಾಯ

09/11/2025 9:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಉಪಚುನಾವಣೆ ಬಳಿಕ `ಗೃಹಲಕ್ಷ್ಮಿ’ ಯೋಜನೆ ಸ್ಥಗಿತ : ಮಾಜಿ ಪ್ರಧಾನಿ H.D ದೇವೇಗೌಡ ಹೇಳಿಕೆ!
KARNATAKA

BIG NEWS : ಉಪಚುನಾವಣೆ ಬಳಿಕ `ಗೃಹಲಕ್ಷ್ಮಿ’ ಯೋಜನೆ ಸ್ಥಗಿತ : ಮಾಜಿ ಪ್ರಧಾನಿ H.D ದೇವೇಗೌಡ ಹೇಳಿಕೆ!

By kannadanewsnow5711/11/2024 6:14 AM

ರಾಮನಗರ: ರಾಜ್ಯ ಕಾಂಗ್ರೆಸ್ ಸರ್ಕಾರ ಖಜಾನೆಯನ್ನು ದಿವಾಳಿ ಎಬ್ಬಿಸಿದೆ. ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮಿ ಹಣವಿಲ್ಲ, ಆದರೆ ಚುನಾವಣೆ ದೃಷ್ಟಿಯಿಂದ ಚನ್ನಪಟ್ಟಣ ಕ್ಷೇತ್ರದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಮಾತ್ರ ಹಣ ಜಮೆ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಅವರು ಆರೋಪಿಸಿದರು.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ನಡೆಸಿದ ಅವರು; ಕಾಂಗ್ರೆಸ್ ಸರಕಾರ ಅಪರಿಮಿತವಾಗಿ ಚುನಾವಣಾ ಅಕ್ರಮಗಳನ್ನು ಎಸಗುತ್ತಿದೆ. ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಕೂಡ ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು.

ಈ ಸರಕಾರ ದಿವಾಳಿಯಾಗಿದೆ. ಚುನಾವಣೆ ಮುಗಿದ ಮೇಲೆ‌ ಹಣ ಜಮೆ ಮಾಡುವುದನ್ನು ಮತ್ತೆ ನಿಲ್ಲಿಸುತ್ತಾರೆ. ಐದು ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿ ಕಸಿದುಕೊಂಡು ಹೋಗಿದ್ದಾರೆ. ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚೋಕೆ ಕಾಸಿಲ್ಲ, ಜನ ಉಗಿಯುತ್ತಿದ್ದಾರೆ ಎಂದು ಮಾಜಿ ಪ್ರಧಾನಿಗಳು ಆಕ್ರೋಶ ವ್ಯಕ್ತಪಡಿಸಿದರು.

ಚನ್ನಪಟ್ಟಣಕ್ಕೆ ಯಾರು ಭಗೀರಥ?

ನಿಖಿಲ್ ಅವರನ್ನು ವಿಧಾನಸೌಧಕ್ಕೆ ಕಳಿಸಿ. ಆ ಹುಡುಗ ನಿಮ್ಮ ಪರವಾಗಿ ದನಿ ಎತ್ತುತ್ತಾನೆ. ಇದರಲ್ಲಿ ನಿಮಗೆ ಯಾವುದೇ ಸಂಶಯ ಬೇಡ ಎಂದ ಅವರು; ನಾನು ಒಬ್ಬ ರೈತನ ಮಗ, ನೀವು ರೈತನ ಮಕ್ಕಳು. ಇಗ್ಗಲೂರು ಅಣೆಕಟ್ಟು ಕಟ್ಟಿಸಿದ್ದು ಈ ದೇವೇಗೌಡ, ಬದುಕಿದ್ದಾನೆ. ಹದಿನೇಳು ಕೆರಗಳಿಗೆ ನೀರು ಹರಿಸಿದ್ದ ವ್ಯಕ್ತಿಯನ್ನು ಭಗೀರಥ ಅಂತಾರೆ. ಈ ಅಣೆಕಟ್ಟು ಕಟ್ಟಿಲ್ಲ ಅಂದರೆ ನೀರು ಹರಿಸೋಕೆ ಸಾಧ್ಯ ಆಗುತ್ತಿತ್ತಾ? ಎಂದು ಜನತೆಯಲ್ಲಿ ಕೇಳಿದರು ಮಾಜಿ ಪ್ರಧಾನಿಗಳು.

ಚನ್ನಪಟ್ಟಣ ಕ್ಷೇತ್ರದಲ್ಲಿ ಕುಮಾರಸ್ವಾಮಿ ಅವರು 1600 ಕೋಟಿಯಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಈಗಿರುವ ಸರ್ಕಾರ ಸಣ್ಣಪುಟ್ಟ ಕೆಲಸ ಮಾಡುತ್ತಿದೆ. ಪ್ರತಿಗ್ರಾಮಕ್ಕೆ ನೀರಾವರಿ ಸೌಲಭ್ಯ ಕೋಡಬೇಕಾದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಇಷ್ಟು ಹಣವನ್ನು ಕ್ಷೇತ್ರಕ್ಕೆ ಕೊಟ್ಟರು. ರಾಷ್ಟ್ರದ ಹಿತದೃಷ್ಟಿಯಿಂದ, ಮೋದಿ ಅವರ ಒತ್ತಾಸೆಯಿಂದ ಕುಮಾರಸ್ವಾಮಿ ಅವರು ದೆಹಲಿಗೆ ಹೋಗಿ ಸಚಿವರಾಗಿದ್ದಾರೆ ಎಂದು ಅವರು ಹೇಳಿದರು.

ಬಿಜೆಪಿಯಿಂದ ಅಭ್ಯರ್ಥಿಯನ್ನು ಹೈಜಾಕ್ ಮಾಡಿದ್ದಾರೆ

ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರಕ್ಕೆ ರಾಜೀನಾಮೆ ಕೊಟ್ಟ ಮೇಲೆ ಯಾರು ಅಭ್ಯರ್ಥಿಯಾಗಿ ನಿಲ್ಲಬೇಕು ಎಂದು ಚರ್ಚೆ ನಡೆಯಿತು. ಡಿ.ಕೆ.ಶಿವಕುಮಾರ್ ನಾನೇ ಅಭ್ಯರ್ಥಿ ಎಂದು ಹೇಳಿಕೊಂಡು ಓಡಾಡಿದರು. ಹಾಗಂತ ಎಲ್ಲರನ್ನೂ ನಂಬಿಸಿದರು. ನಾಮಪತ್ರ ಸಲ್ಲಿಸುವ ಒಂದು ದಿನಕ್ಕೆ ಮೊದಲು ಇದ್ದಕ್ಕಿದ್ದ ಹಾಗೆ ತಮ್ಮ ತೀರ್ಮಾನ ಬದಲಾಯಿಸಿ ಮತ್ತೊಬ್ಬ ಸ್ನೇಹಿತರನ್ನು ನಿಲ್ಲಿಸಿದ್ದಾರೆ. ಬಿಜೆಪಿಯಿಂದ ಅಭ್ಯರ್ಥಿಯನ್ನು ಹೈಜಾಕ್ ಮಾಡಿಕೊಂಡು ಹೋಗಿದ್ದಾರೆ ಎಂದು ಅವರು ಟೀಕಿಸಿದರು.

ನಿಖಿಲ್ ಕುಮಾರಸ್ವಾಮಿ ಅವರು 2028ಕ್ಕೆ ಸ್ಪರ್ಧೆ ಮಾಡುತ್ತೇನೆ, ನಾನು ಪಕ್ಷ ಕಟ್ಟುತ್ತೇನೆ ಎಂದರು. ನಾಮಪತ್ರ ಸಲ್ಲಿಸುವ ಹಿಂದಿನ ದಿನ ಪ್ರಧಾನಿ ನರೇಂದ್ರ ಮೋದಿ, ನಡ್ಡಾ, ಅಮಿಶ್ ಶಾ ಅವರೆಲ್ಲರೂ ಸೇರಿ ನಿಖಿಲ್ ಕುಮಾರಸ್ವಾಮಿ ಅವರನ್ನು ನಿಲ್ಲಿಸಲು ತೀರ್ಮಾನ ಮಾಡಿದರು. ಈ ಯುವಕ ನಿಮ್ಮ ಮೊಮ್ಮಗನಿದ್ದ ಹಾಗೆ,ವಿಧಾನಸಭೆಗೆ ಆಯ್ಕೆ ಮಾಡಿ ಆಶೀರ್ವಾದ ಮಾಡಿ. ಕೈಮುಗಿದು ಪ್ರಾರ್ಥನೆ ಮಾಡುತ್ತೇನೆ. ನಮ್ಮ ಹೆಣ್ಣು ಮಕ್ಕಳು ಮನಸ್ಸು ಮಾಡಿದರೆ ನಿಖಿಲ್ ಕುಮಾರಸ್ವಾಮಿ ವಿಧಾನಸೌಧಕ್ಕೆ ಹೋಗುವುದು 100ಕ್ಕೆ 100 ಸತ್ಯ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ಶಾಸಕರಾದ ಸಮೃದ್ಧಿ ಮಂಜುನಾಥ್, ಶರಣುಗೌಡ ಕಂದಕೂರ್ ಸೇರಿದಂತೆ ಸ್ಥಳೀಯ ಮುಖಂಡರು ಅನೇಕರು ಮಾಜಿ ಪ್ರಧಾನಿಗಳ ಜತೆಯಲ್ಲಿ ಇದ್ದರು.

ಚನ್ನಪಟ್ಟಣದಲ್ಲಿ ಎರಡು ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತದೆ. ಮಾಸಿಕ ₹80 ಲಕ್ಷ ತಾಲೂಕಿಗೆ ಬರುತ್ತದೆ. ಕರ್ನಾಟಕಕ್ಕೆ ಹಾಲಿನ ಡೈರಿ ತಂದಿದ್ದು ಯಾರು? ಅದನ್ನು ತಂದ ಈ ದೇವೇಗೌಡ ಇನ್ನೂ ಬದುಕಿದ್ದೇನೆ. ಇಗ್ಗಲೂರು ಡ್ಯಾಂನಿಂದ ಎಲ್ಲರಿಗೂ ನೀರು ಸಿಗಲ್ಲ. ಅದಕ್ಕಾಗಿ ಹೈನುಗಾರಿಕೆ ಮಾಡಿ ಕೆಲವರು ಜೀವನ ಮಾಡುತ್ತಿದ್ದಾರೆ. ನಮ್ಮ ಹುಟ್ಟುಗುಣ ಬೇರೆಯವರಿಂದ ಕಿತ್ತುಕೊಳ್ಳುವುದಲ್ಲ. ನಮ್ಮದು ಕೊಡುವ ಕೈ. ಈ ಹಣ ಶಾಶ್ವತವಾಗಿ ಚನ್ನಪಟ್ಟಣಕ್ಕೆ ಬರುತ್ತಿದೆ ಎಂದು ಪ್ರಧಾನಿಗಳು ಹೇಳಿದರು.

BIG NEWS : ಉಪಚುನಾವಣೆ ಬಳಿಕ `ಗೃಹಲಕ್ಷ್ಮಿ' ಯೋಜನೆ ಸ್ಥಗಿತ : ಮಾಜಿ ಪ್ರಧಾನಿ H.D ದೇವೇಗೌಡ ಹೇಳಿಕೆ! BIG NEWS: Former PM HD Deve Gowda says 'Grihalakshmi' scheme will be stopped after bypolls
Share. Facebook Twitter LinkedIn WhatsApp Email

Related Posts

‘ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ’ದ ಅಧ್ಯಕ್ಷರಾಗಿ ‘ಪುಷ್ಪರಾಜ್ ಶೆಟ್ಟಿ’ ಆಯ್ಕೆ

09/11/2025 10:13 PM1 Min Read

BREAKING: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಿರುನಾಲೆಗೆ ಕಾರಿ ಬಿದ್ದು ಓರ್ವ ನಾಪತ್ತೆ, ಮೂವರಿಗೆ ಗಾಯ

09/11/2025 9:48 PM1 Min Read

ಲೋಕಾಯುಕ್ತರ ಆಸ್ತಿ ಬಹಿರಂಗಕ್ಕೂ ಕಾಯ್ದೆ ತಿದ್ದುಪಡಿ ಮಾಡಿ: ಸಚಿವ ಹೆಚ್.ಕೆ ಪಾಟೀಲ್ ಗೆ MLC ರಮೇಶ್ ಬಾಬು ಪತ್ರ

09/11/2025 9:32 PM2 Mins Read
Recent News

‘ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ’ದ ಅಧ್ಯಕ್ಷರಾಗಿ ‘ಪುಷ್ಪರಾಜ್ ಶೆಟ್ಟಿ’ ಆಯ್ಕೆ

09/11/2025 10:13 PM

BREAKING : 2025ರ ‘SSC CHSL’ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ; ಡೌನ್ಲೋಡ್ ಮಾಡಲು ನೇರ ಲಿಂಕ್ ಇಲ್ಲಿದೆ!

09/11/2025 9:59 PM

BREAKING: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಿರುನಾಲೆಗೆ ಕಾರಿ ಬಿದ್ದು ಓರ್ವ ನಾಪತ್ತೆ, ಮೂವರಿಗೆ ಗಾಯ

09/11/2025 9:48 PM

ಕಾಲೇಜುಗಳು ತಮ್ಮ ಪ್ರವೇಶ ರದ್ದುಗೊಳಿಸುವ ವಿದ್ಯಾರ್ಥಿಗಳಿಗೆ ‘ಶುಲ್ಕ’ ಮರು ಪಾವತಿಸುವುದು ಕಡ್ಡಾಯ ; UGC

09/11/2025 9:48 PM
State News
KARNATAKA

‘ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ’ದ ಅಧ್ಯಕ್ಷರಾಗಿ ‘ಪುಷ್ಪರಾಜ್ ಶೆಟ್ಟಿ’ ಆಯ್ಕೆ

By kannadanewsnow0909/11/2025 10:13 PM KARNATAKA 1 Min Read

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಾರ್ತಾಭಾರತಿ ಪತ್ರಿಕೆಯ ಹಿರಿಯ ಪತ್ರಕರ್ತ ಪುಷ್ಪರಾಜ್ ಶೆಟ್ಟಿ…

BREAKING: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಿರುನಾಲೆಗೆ ಕಾರಿ ಬಿದ್ದು ಓರ್ವ ನಾಪತ್ತೆ, ಮೂವರಿಗೆ ಗಾಯ

09/11/2025 9:48 PM

ಲೋಕಾಯುಕ್ತರ ಆಸ್ತಿ ಬಹಿರಂಗಕ್ಕೂ ಕಾಯ್ದೆ ತಿದ್ದುಪಡಿ ಮಾಡಿ: ಸಚಿವ ಹೆಚ್.ಕೆ ಪಾಟೀಲ್ ಗೆ MLC ರಮೇಶ್ ಬಾಬು ಪತ್ರ

09/11/2025 9:32 PM

GOOD NEWS: ರಾಜ್ಯದಲ್ಲಿ 18,000 ಶಿಕ್ಷಕರ ನೇಮಕಾತಿಗೆ ಸರ್ಕಾರ ತೀರ್ಮಾನ: ಸಚಿವ ಮಧು ಬಂಗಾರಪ್ಪ

09/11/2025 9:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.