ಬೆಂಗಳೂರು : ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಈಗಾಗಲೇ ಬಿಜೆಪಿ 2 ಕ್ಷೇತ್ರಗಳಿಗೆ ಹೆಸರು ಘೋಷಣೆ ಮಾಡಿದ್ದು, ಇಂದು ಸಂಜೆ ವೇಳೆ ಚನ್ನಪಟ್ಟಣ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಹೆಸರು ಘೋಷಣೆ ಆಗುವ ಸಾಧ್ಯತೆ ಇದೆ.
ಈಗಾಗಲೇ ಬಿಜೆಪಿ ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಹೆಸರು ಘೋಷಣೆ ಮಾಡಿದ್ದು, ಇಂದು ಸಂಜೆ ವೇಳೆಗೆ ಚನ್ನಪಟ್ಟಣ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಘೋಷಣೆ ಮಾಡುವ ಸಾಧ್ಯತೆ ಇದೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್ ಸ್ಪರ್ಧೆ ಬಹುತೇಕ ಫೈನಲ್ ಆಗಿದೆ ಎನ್ನಲಾಗಿದ್ದು, ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸುವ ಕುರಿತು ಜೆಡಿಎಸ್ ಆಫರ್ ನೀಡಿದೆ ಎಂದು ಹೇಳಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಇಂದು ಚನ್ನಪಟ್ಟಣ ಅಭ್ಯರ್ಥಿ ಹೆಸರು ಘೋಷಣೆ ಆಗಲಿದೆ. ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಗೊಂದಲ್ಲ ಇಲ್ಲ. ನ್ಯಾಯಯುತವಾಗಿ ಚನ್ನಪಟ್ಟಣ ಟಿಕೆಟ್ ನಮಗೆ ಬೇಕು ಎಂದು ಹೇಳಿದ್ದಾರೆ.