Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಕುಟುಂಬ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Govt Employee

26/06/2025 7:23 AM

BIG NEWS : ಇನ್ಮುಂದೆ ರಾಜ್ಯದ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ

26/06/2025 7:15 AM

GOOD NEWS : ರಾಜ್ಯದ ಕಲಾವಿದರ ಮಾಸಾಶನ ರೂ.2,000ದಿಂದ 2,500ಕ್ಕೆ ಹೆಚ್ಚಳ: ರಾಜ್ಯ ಸರ್ಕಾರ ಅಧಿಕೃತ ಆದೇಶ

26/06/2025 7:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಇನ್ಮುಂದೆ ರಾಜ್ಯದ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ
KARNATAKA

BIG NEWS : ಇನ್ಮುಂದೆ ರಾಜ್ಯದ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ

By kannadanewsnow5726/06/2025 7:15 AM

ಬೆಂಗಳೂರು: ರಾಜ್ಯದ ಎಲ್ಲಾ ಇಲಾಖೆಗಳು ಆಡಳಿತದಲ್ಲಿ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸುವಂತೆ ಆದೇಶದಲ್ಲಿ ನಿರ್ದೇಶಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸುತ್ತೋಲೆ ಹೊರಡಿಸಿದ್ದು, ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆಯಾಗಿ ಇರತಕ್ಕದ್ದೆಂದು ಕರ್ನಾಟಕ ರಾಜ್ಯ ಭಾಷಾ ಅಧಿನಿಯಮ 1963ರಲ್ಲಿ ತಿಳಿಸಲಾಗಿದೆ. ಕನ್ನಡದಲ್ಲಿ ಬರುವ ಅರ್ಜಿ ಮತ್ತು ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು. ಸರ್ಕಾರಿ ಕಛೇರಿಗಳ ನಾಮಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು ಎಂದಿದ್ದಾರೆ.

ವಿಧಾನ ಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರ, ಗಮನಸೆಳೆಯುವ ಸೂಚನೆ ಇತ್ಯಾದಿಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಸಲ್ಲಿಸಲು ತಿಳಿಸಲಾಗಿದೆ. ನೇಮಕಾತಿ, ವರ್ಗಾವಣೆ ಮತ್ತು ರಜೆ ಮಂಜೂರಾತಿ ಇತರೆ ಎಲ್ಲಾ ಸರ್ಕಾರದ ಆದೇಶಗಳನ್ನು ಕನ್ನಡದಲ್ಲಿ ಹೊರಡಿಸಲು ಸ್ಪಷ್ಟವಾಗಿ ಸೂಚನೆಗಳನ್ನು ನೀಡಲಾಗಿದೆ. ಕಛೇರಿಗಳಿಗೆ ಒದಗಿಸಿರುವ ಆಂಗ್ಲ ಭಾಷಾ ನಮೂನೆ, ದಾಖಲೆ ಪುಸ್ತಕ ಮುಂತಾದವುಗಳನ್ನು ಕನ್ನಡದಲ್ಲಿ ಭರ್ತಿ ಮಾಡುವಂತೆ ಆಂತರಿಕ ಪತ್ರ ವ್ಯವಹಾರ, ಕಡತದ ಟಿಪ್ಪಣಿ ಕನ್ನಡದಲ್ಲಿಯೇ ಇರುವಂತೆ ತಿಳಿಸಲಾಗಿದೆ. ಸಭಾ ಸೂಚನೆ, ಕಾರ್ಯಸೂಚಿ, ಸಂಕ್ಷಿಪ್ತ ಟಿಪ್ಪಣಿ ಹಾಗೂ ನಡವಳಿಗಳನ್ನು ಕನ್ನಡದಲ್ಲಿ ತಯಾರಿಸಿ ಸರ್ಕಾರದ ಭಾಷಾ ನೀತಿಯನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರುವಂತೆ ಈಗಾಗಲೇ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಕೇಂದ್ರ ಸರ್ಕಾರ, ಹೊರ ರಾಜ್ಯಗಳು ಮತ್ತು ನ್ಯಾಯಾಲಯಗಳ ಪತ್ರ ವ್ಯವಹಾರಗಳನ್ನು ಹೊರತುಪಡಿಸಿ, ಉಳಿದೆಲ್ಲಾ ಪತ್ರ ವ್ಯವಹಾರಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಇರುವಂತೆ ಸೂಚಿಸಲಾಗಿದೆ.

ಸರ್ಕಾರಿ ಪತ್ರ ವ್ಯವಹಾರಗಳಲ್ಲಿ ಕಡತದ ಟಿಪ್ಪಣಿಗಳನ್ನು ಕನ್ನಡದಲ್ಲಿ ಮಾಡುವಂತೆ ಸೂಚಿಸಿದ್ದರೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸದಿರು ವುದನ್ನು ಗಮನಿಸಿದ ಸನ್ಮಾನ್ಯ ಮುಖ್ಯಮಂತ್ರಿಯವರು ಕಡತದಲ್ಲಿನ ಟಿಪ್ಪಣಿ ಮತ್ತು ಪತ್ರ ವ್ಯವಹಾರಗಳು ಕನ್ನಡದಲ್ಲಿ ಬಾರದಿದ್ದ ಪಕ್ಷದಲ್ಲಿ ಅಂತಹ ಕಡತಗಳನ್ನು ಹಿಂದಿರುಗಿಸಿ ಸೂಕ್ತ ಸಮಜಾಯಿಷಿ ಪಡೆಯಲು ನಿರ್ದೇಶನ ನೀಡಿರುತ್ತಾರೆ. ಆಡಳಿತದಲ್ಲಿ ಭಾಷಾ ನೀತಿಯನ್ನು ಪೂರ್ಣ ಪ್ರಮಾಣದಲ್ಲಿ ಹಾಗೂ ಎಲ್ಲಾ ಹಂತಗಳಲ್ಲಿ ಜಾರಿಗೊಳಿಸುವುದು ಎಲ್ಲ ಅಧಿಕಾರಿಗಳ ನೌಕರರ ಕರ್ತವ್ಯವಾಗಿದೆ. ಆದುದರಿಂದ ಈಗಾಗಲೇ ಹೊರಡಿಸಿರುವ ಸರ್ಕಾರಿ ಆದೇಶಗಳಲ್ಲಿ ನೀಡಿರುವ ಸೂಚನೆಗಳನ್ನು ಸರಕಾರ/ನಿಗಮ/ಮಂಡಳಿ/ಸ್ಥಳೀಯ ಸಂಸ್ಥೆಗಳ/ ವಿಶ್ವವಿದ್ಯಾಲಯ ಗಳ/ ಅನುದಾನಿತ ಸಂಘ-ಸಂಸ್ಥೆಗಳ ಎಲ್ಲಾ ಅಧಿಕಾರಿ/ ನೌಕರರು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಮತ್ತೊಮ್ಮೆ ಪುನರುಚ್ಚರಿಸಲಾಗಿದೆ.

ಇತ್ತೀಚೆಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕೆ.ಡಿ.ಪಿ. ಸಭೆಯ ಕಾರ್ಯಸೂಚಿಯನ್ನು ಆಂಗ್ಲ ಭಾಷೆಯಲ್ಲಿ ಹೊರಡಿಸಿರುತ್ತಾರೆಂದು ಹಾಗೂ ವಿಶೇಷವಾಗಿ ಕಾಮಗಾರಿ ಇಲಾಖೆಗಳು ತಮ್ಮೆಲ್ಲ ಮಾಹಿತಿಗಳನ್ನು ಆಂಗ್ಲ ಭಾಷೆಯಲ್ಲಿ ಮಂಡಿಸುತ್ತಿದೆ. ಇದನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಅನುಮೋದಿಸುತ್ತಿದ್ದಾರೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ವರದಿ ಮಾಡಿರುತ್ತಾರೆ.

ಕನ್ನಡ ಭಾಷೆಯಲ್ಲಿಯೇ ಆಡಳಿತ ನಡೆಸುವ ಬಗ್ಗೆ ಈಗಾಗಲೇ ಹಲವಾರು ಬಾರಿ ಸೂಚನೆಗಳನ್ನು ನೀಡಿ ಸುತ್ತೋಲೆಗಳನ್ನು ಹೊರಡಿಸಿದ್ದರೂ ಸಹ ಪಾಲನೆಯಾಗದೇ ಇರುವ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವರದಿ ಮಾಡುತ್ತಲೇ ಬಂದಿದೆ. ಈ ಹಿನ್ನೆಲೆಯಲ್ಲಿ ಮೇಲ್ಕಂಡ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. ಸದರಿ ಸೂಚನೆಗಳನ್ನು ಉಲ್ಲಂಘಿಸಿದವರ ವಿರುದ್ಧ ವೈಯಕ್ತಿಕವಾಗಿ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮತ್ತೊಮ್ಮೆ ತಿಳಿಸಲಾಗಿದೆ ಎಂದಿದ್ದಾರೆ.

‘use of Kannada’ will be mandatory in all departments of the state: State government issues important order BIG NEWS: From now on
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಕುಟುಂಬ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Govt Employee

26/06/2025 7:23 AM2 Mins Read

GOOD NEWS : ರಾಜ್ಯದ ಕಲಾವಿದರ ಮಾಸಾಶನ ರೂ.2,000ದಿಂದ 2,500ಕ್ಕೆ ಹೆಚ್ಚಳ: ರಾಜ್ಯ ಸರ್ಕಾರ ಅಧಿಕೃತ ಆದೇಶ

26/06/2025 7:13 AM2 Mins Read

Rain Alert : ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ : 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

26/06/2025 7:01 AM2 Mins Read
Recent News

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಕುಟುಂಬ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Govt Employee

26/06/2025 7:23 AM

BIG NEWS : ಇನ್ಮುಂದೆ ರಾಜ್ಯದ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ

26/06/2025 7:15 AM

GOOD NEWS : ರಾಜ್ಯದ ಕಲಾವಿದರ ಮಾಸಾಶನ ರೂ.2,000ದಿಂದ 2,500ಕ್ಕೆ ಹೆಚ್ಚಳ: ರಾಜ್ಯ ಸರ್ಕಾರ ಅಧಿಕೃತ ಆದೇಶ

26/06/2025 7:13 AM

BREAKING : ಮೆಕ್ಸಿಕೋದಲ್ಲಿ ಸಂಭ್ರಮಾಚರಣೆಯ ವೇಳೆ ಭೀಕರ ಗುಂಡಿನ ದಾಳಿಯಲ್ಲಿ 12 ಮಂದಿ ಸಾವು : ಭಯಾನಕ ವಿಡಿಯೋ ವೈರಲ್ | WATCH VIDEO

26/06/2025 7:08 AM
State News
KARNATAKA

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಕುಟುಂಬ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Govt Employee

By kannadanewsnow5726/06/2025 7:23 AM KARNATAKA 2 Mins Read

ಬೆಂಗಳೂರು :ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಟ್ಟ ಸರ್ಕಾರಿ ಅಧಿಕಾರಿ/ನೌಕರರು ಪ್ರಾನ್ ಖಾತೆಯನ್ನು ಪಡೆಯುವ ಮುಂಚಿತವಾಗಿ ಮೃತಪಟ್ಟಲ್ಲಿ ಕುಟುಂಬ ಪಿಂಚಣಿ ಮಂಜೂರು…

BIG NEWS : ಇನ್ಮುಂದೆ ರಾಜ್ಯದ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ

26/06/2025 7:15 AM

GOOD NEWS : ರಾಜ್ಯದ ಕಲಾವಿದರ ಮಾಸಾಶನ ರೂ.2,000ದಿಂದ 2,500ಕ್ಕೆ ಹೆಚ್ಚಳ: ರಾಜ್ಯ ಸರ್ಕಾರ ಅಧಿಕೃತ ಆದೇಶ

26/06/2025 7:13 AM

Rain Alert : ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ : 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

26/06/2025 7:01 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.