ಬೆಂಗಳೂರು : ವಿಧಾನಸಭೆಯಲ್ಲಿ ಜಿ ರಾಮ್ ಜಿ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರವಾಯಿತು. ನಿರ್ಣಯ ಅಂಗೀಕಾರದ ನಂತರ ಅನಿರ್ದಿಷ್ಟವಧಿಗೆ ಕಲಾಪ ಮುಂದೂಡಿಕೆ ಮಾಡಲಾಯಿತು.
ಜಿ ರಾಮ ಜಿ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರವಾದ ಬಳಿಕ ಕಲಾಪವನ್ನು ಸ್ಪೀಕರ್ ಯುಟಿ ಖಾದರ್ ನಿರ್ದಿಷ್ಟ ಅವಧಿಗೆ ಮುಂದೂಡಿದರು. ಈ ವೇಳೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಪ್ರತಿಗಳನ್ನು ಹರಿದು ಹಾಕಿ ಆಕ್ರೋಶ ಹೊರ ಹಾಕಿದರು ಬಳಿಕ ಸಭಾ ತ್ಯಾಗ ಮಾಡಿದ ಪ್ರಸಂಗ ನಡೆಯಿತು.








