ಬೆಂಗಳೂರು: ಜುಲೈ 1 ರಿಂದ ಮನೆ ಮನೆಗೆ ಇ-ಖಾತಾ ಅಭಿಯಾನ ಆರಂಭಿಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ತಿಗಳ ಇ – ಖಾತಾ ದಾಖಲೆ ವಿತರಣೆ ಆಂದೋಲನ ನಡೆಸಲಾಗುವುದು. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಕ್ಷೇತ್ರದಲ್ಲಿ ಜುಲೈ ತಿಂಗಳಿನಲ್ಲಿ ಇದನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. 25 ಸಾವಿರ ಆಸ್ತಿಗಳ ದಾಖಲೆಗಳು ಸಿದ್ಧವಿದ್ದು, ಜುಲೈ 1ರಿಂದ ಆಸ್ತಿಗಳ ಇ – ಖಾತಾ ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ 25 ಲಕ್ಷ ಆಸ್ತಿಗಳಿದ್ದು, 5 ಲಕ್ಷ ಮಂದಿ ದಾಖಲೆಗಳನ್ನು ಆನ್ಲೈನ್ ಮೂಲಕ ಅಪ್ಲೋಡ್ ಮಾಡಿದ್ದಾರೆ. ಇನ್ನೂ 20 ಲಕ್ಷ ಆಸ್ತಿಗಳ ದಾಖಲೆ ಸಿದ್ಧಪಡಿಸುವುದು ಬಾಕಿ ಇದೆ ಎಂದು ಹೇಳಿದ್ದಾರೆ.
ಇನ್ನೂ ‘ಬಿ – ಖಾತಾ ಆಸ್ತಿಗಳಿಗೆ ‘ಎ’ ಖಾತೆ ನೀಡುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಕಾನೂನು ಆಯಾಮಗಳ ಬಗ್ಗೆ ಪರಾಮರ್ಶಿಸಿ ಅಧಿಕೃತ ಘೋಷಣೆ ಮಾಡಲಾಗುವುದು’ ಎಂದು ತಿಳಿಸಿದ್ದಾರೆ.