Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಾಮರಾಜನಗರದಲ್ಲಿ 2 ಕಾರುಗಳ ಮಧ್ಯ ಭೀಕರ ಅಪಘಾತ : 7 ತಿಂಗಳ ಮಗು ಸೇರಿ ಇಬ್ಬರು ಸಾವು!

BIG NEWS : ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

BREAKING : ಸಿಎಂ ಡಿಕೆ ಶಿವಕುಮಾರ್ ಸಂಪುಟದಲ್ಲಿ ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಮಾಹಿತಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!
KARNATAKA

BIG NEWS : ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

By kannadanewsnow57

ಬೆಂಗಳೂರು: ರಾಜ್ಯದ ವಿಕಲಚೇತನರ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಸಬಲೀಕರಣಕ್ಕಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಹತ್ತಾರು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತಂದಿದೆ. ಅರ್ಹ ಫಲಾನುಭವಿಗಳು ಈ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಮುಖ ಯೋಜನೆಗಳು ಮತ್ತು ಅವುಗಳ ವಿವರಗಳು ಈ ಕೆಳಗಿನಂತಿವೆ:

1. ಶೈಕ್ಷಣಿಕ ಪ್ರೋತ್ಸಾಹ ಮತ್ತು ವಿದ್ಯಾರ್ಥಿವೇತನ

ವಿದ್ಯಾರ್ಥಿವೇತನ: 1ನೇ ತರಗತಿಯಿಂದ ಸ್ನಾತಕೋತ್ತರ ಪದವಿವರೆಗೆ ವ್ಯಾಸಂಗ ಮಾಡುತ್ತಿರುವ ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಗೆ SSP ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ವಿದ್ಯಾರ್ಥಿವೇತನ ಮಂಜೂರು ಮಾಡಲಾಗುತ್ತಿದೆ. ಇದಕ್ಕೆ ಯಾವುದೇ ಆದಾಯ ಮಿತಿ ಇರುವುದಿಲ್ಲ.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ: ಸಾರ್ವತ್ರಿಕ ಪರೀಕ್ಷೆಗಳಲ್ಲಿ ಶೇ. 60 ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ‘ಸೇವಾ ಸಿಂಧು’ ಪೋರ್ಟಲ್ ಮೂಲಕ ಪ್ರೋತ್ಸಾಹ ಧನ ನೀಡಲಾಗುತ್ತದೆ.

ಶುಲ್ಕ ಮರುಪಾವತಿ: ಎಸ್.ಎಸ್.ಎಲ್.ಸಿ ನಂತರದ ಉನ್ನತ, ವೃತ್ತಿಪರ ಹಾಗೂ ತಾಂತ್ರಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ, ಬೋಧನಾ ಶುಲ್ಕ, ಪ್ರಯೋಗಾಲಯ ಹಾಗೂ ಗ್ರಂಥಾಲಯ ಶುಲ್ಕಗಳನ್ನು ನಿಯಮಾನುಸಾರ ಮರುಪಾವತಿಸಲಾಗುತ್ತದೆ.

ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ಹಾಗೂ ಬ್ರೈಲ್ ಕಿಟ್: ಉನ್ನತ ಶಿಕ್ಷಣ ಪಡೆಯುವ ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ಹಾಗೂ ದೈನಂದಿನ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಟಾಕಿಂಗ್ ಮೊಬೈಲ್, ಬ್ರೈಲ್ ವಾಚ್ ಒಳಗೊಂಡ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

2. ಸ್ವಯಂ ಉದ್ಯೋಗ ಮತ್ತು ಆರ್ಥಿಕ ನೆರವು
ಆಧಾರ ಯೋಜನೆ: ವಿಕಲಚೇತನರು ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕ್ ಸಾಲದ ಜೊತೆಗೆ ಇಲಾಖೆಯಿಂದ ಶೇ. 50 ರಷ್ಟು (ಗರಿಷ್ಠ ಮಿತಿ ಇರಲಿದೆ) ಸಹಾಯಧನ ನೀಡಲಾಗುತ್ತದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೊಲಿಗೆ ಯಂತ್ರಗಳ ವಿತರಣೆ: ಶ್ರವಣದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ರಾಜ್ಯಾದ್ಯಂತ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸುವ ಯೋಜನೆ ಜಾರಿಯಲ್ಲಿದೆ.

3. ಸಾಮಾಜಿಕ ಮತ್ತು ವೈದ್ಯಕೀಯ ಭದ್ರತೆ
ವಿವಾಹ ಪ್ರೋತ್ಸಾಹ ಧನ ಯೋಜನೆ: ವಿಕಲಚೇತನ ಯುವಕ/ಯುವತಿಯರನ್ನು ಸಾಮಾನ್ಯ ವ್ಯಕ್ತಿಗಳು ವಿವಾಹವಾದಲ್ಲಿ, ಅವರಿಗೆ ನಿರಂತರ ಮಾಸಿಕ ಆದಾಯ ಸಿಗುವಂತೆ ವಿಕಲಚೇತನ ವ್ಯಕ್ತಿಯ ಹೆಸರಿನಲ್ಲಿ ರೂ. 50,000/- ಗಳನ್ನು 5 ವರ್ಷಗಳ ಅವಧಿಗೆ ಹೂಡಿಕೆ ಮಾಡಲಾಗುತ್ತದೆ.

ಅಂಧ ಮಹಿಳೆಯರ ಮಕ್ಕಳ ಆರೈಕೆ ಭತ್ಯೆ: ಅಂಧ ಮಹಿಳೆಯರಿಗೆ ಜನಿಸುವ ಗರಿಷ್ಠ ಇಬ್ಬರು ಮಕ್ಕಳಿಗೆ 5 ವರ್ಷಗಳ ಅವಧಿಗೆ ಮಾಸಿಕ ರೂ. 2,000/- ಗಳಂತೆ ಆರೈಕೆ ಭತ್ಯೆ ನೀಡಲಾಗುತ್ತದೆ.

ನಿರಾಮಯ ಆರೋಗ್ಯ ವಿಮಾ ಯೋಜನೆ: ಬುದ್ಧಿಮಾಂದ್ಯ, ಸೆರೆಬ್ರಲ್ ಪಾಲ್ಸಿ, ಆಟಿಸಂ ಹಾಗೂ ಬಹುವಿಧ ವಿಕಲಚೇತನ ಹೊಂದಿರುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವ್ಯಕ್ತಿಗಳಿಗೆ ವರ್ಷಕ್ಕೆ ರೂ. 1.00 ಲಕ್ಷದವರೆಗೆ ವೈದ್ಯಕೀಯ ಸೌಲಭ್ಯ ಸಿಗುವ ವಿಮಾ ಯೋಜನೆ ಇದಾಗಿದೆ. ಇದರ ಪ್ರೀಮಿಯಂ ಮೊತ್ತ ರೂ. 250/- ಅನ್ನು ಸರ್ಕಾರವೇ ನ್ಯಾಷನಲ್ ಟ್ರಸ್ಟ್ ಸಂಸ್ಥೆಗೆ ಪಾವತಿಸುತ್ತದೆ.

ವೈದ್ಯಕೀಯ ಪರಿಹಾರ ನಿಧಿ: ಅಂಗವಿಕಲತೆ ನಿವಾರಣೆಯ ಶಸ್ತ್ರಚಿಕಿತ್ಸೆಗಾಗಿ ಸರ್ಕಾರಿ ಹಾಗೂ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ರೂ. 1.00 ಲಕ್ಷದವರೆಗೆ ನೆರವು ನೀಡಲಾಗುತ್ತದೆ.

ಆರೈಕೆದಾರರ ಭತ್ಯೆ: ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟ್ರೋಫಿ, ಪಾರ್ಕಿಸನ್ ಮತ್ತು ಮಲ್ಟಿಪಲ್ ಸ್ಕ್ಲೆರೋಸಿಸ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ 2024-25ನೇ ಸಾಲಿನಿಂದ ಪ್ರತಿ ಮಾಹೆ ರೂ. 1,000/- ಗಳ ಪ್ರೋತ್ಸಾಹ ಧನ ನೀಡಲಾಗುತ್ತಿದೆ.

4. ಸಾಧನ ಸಲಕರಣೆಗಳು ಮತ್ತು ವಾಹನ ಸೌಲಭ್ಯ
ಉಚಿತ ಸಾಧನ ಸಲಕರಣೆಗಳು: ಗ್ರಾಮೀಣ ಭಾಗದ (ವಾರ್ಷಿಕ ಆದಾಯ ರೂ. 11,500/- ಒಳಗಿನ) ಮತ್ತು ನಗರ ಭಾಗದ (ವಾರ್ಷಿಕ ಆದಾಯ ರೂ. 24,000/- ಒಳಗಿನ) ವಿಕಲಚೇತನರಿಗೆ ಕ್ಯಾಲಿಪರ್ಸ್, ಬ್ರೈಲ್ ವಾಚ್, ವಾಕಿಂಗ್ ಸ್ಟಿಕ್, ಶ್ರವಣ ಸಾಧನ ಮುಂತಾದವುಗಳನ್ನು ರೂ. 15,000/- ಗಳ ಮಿತಿಯೊಳಗೆ ಉಚಿತವಾಗಿ ನೀಡಲಾಗುತ್ತದೆ.

ಯಾಂತ್ರೀಕೃತ ದ್ವಿಚಕ್ರ ವಾಹನ: 20 ರಿಂದ 60 ವರ್ಷ ವಯೋಮಾನದ, ವಾರ್ಷಿಕ ಆದಾಯ ರೂ. 2.00 ಲಕ್ಷಕ್ಕಿಂತ ಕಡಿಮೆ ಇರುವ ತೀವ್ರತರದ ದ್ಹೈಹಿಕ ವಿಕಲಚೇತನರಿಗೆ ಜೀವಿತಾವಧಿಯಲ್ಲಿ ಒಂದು ಬಾರಿ ಯಾಂತ್ರೀಕೃತ ದ್ವಿಚಕ್ರ ವಾಹನ ಒದಗಿಸಲಾಗುತ್ತದೆ.

ಬ್ಯಾಟರಿ ಚಾಲಿತ ವೀಲ್ ಚೇರ್: 2023-24ನೇ ಸಾಲಿನಿಂದ ತೀವ್ರ ದ್ಹೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವೀಲ್ ಚೇರ್‌ಗಳನ್ನು ವಿತರಿಸಲಾಗುತ್ತಿದೆ.

5. ಪುನರ್ವಸತಿ ಕಾರ್ಯಕರ್ತರ ಗೌರವಧನ ಹೆಚ್ಚಳ
ರಾಜ್ಯದ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪುನರ್ವಸತಿ ಕಾರ್ಯಕರ್ತರಿಗೆ ಪ್ರಸ್ತುತ ಈ ಕೆಳಗಿನಂತೆ ಗೌರವಧನ ಪಾವತಿಸಲಾಗುತ್ತಿದೆ:

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು (MRW): ರೂ. 9,000/-

ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು (VRW): ರೂ. 15,000/-

ನಗರ ಪುನರ್ವಸತಿ ಕಾರ್ಯಕರ್ತರು (URW): ರೂ. 9,000/-

ಜಿಲ್ಲಾ ಸಂಯೋಜಕರು: ರೂ. 19,000/-

ರಾಜ್ಯ ಸಂಯೋಜಕರು: ರೂ. 38,000/-
(ಈ ಕಾರ್ಯಕರ್ತರು ನಿಧನ ಹೊಂದಿದಲ್ಲಿ ಅವರ ಕುಟುಂಬಕ್ಕೆ ರೂ. 1.00 ಲಕ್ಷ ಮರಣ ಪರಿಹಾರ ನಿಧಿ ನೀಡುವ ಯೋಜನೆಯೂ ಇದೆ).

6. ವಿಶೇಷ ತರಬೇತಿ ಮತ್ತು ವಸತಿ ನಿಲಯಗಳು
ಸ್ಪರ್ಧಾ ಚೇತನ: ಐ.ಎ.ಎಸ್./ಕೆ.ಎ.ಎಸ್. ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿಕಲಚೇತನ ಅಭ್ಯರ್ಥಿಗಳಿಗೆ ಉಚಿತ ಪೂರ್ವ ಸಿದ್ಧತಾ ತರಬೇತಿ ನೀಡಲಾಗುತ್ತದೆ.

ವಿಶೇಷ ಶಾಲೆಗಳು: ಬುದ್ಧಿಮಾಂದ್ಯ, ಆಟಿಸಂ, ದೃಷ್ಟಿದೋಷ, ಶ್ರವಣದೋಷವುಳ್ಳ ಮಕ್ಕಳಿಗಾಗಿ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಒಟ್ಟು 164 ವಿಶೇಷ ಶಾಲೆಗಳನ್ನು ನಡೆಸಲಾಗುತ್ತಿದೆ.

ನಿರಾಶ್ರಿತ ಬೌದ್ಧಿಕ ವಿಕಲಚೇತನರ ಅನುಪಾಲನಾ ಗೃಹ: ಬೆಂಗಳೂರು ನಗರ, ಬೆಳಗಾವಿ, ಕಲಬುರಗಿ ಮತ್ತು ಮೈಸೂರು ವಿಭಾಗಗಳಲ್ಲಿ ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆಗಾಗಿ 4 ಅನುಪಾಲನಾ ಗೃಹಗಳನ್ನು ಪ್ರಾರಂಭಿಸಲು ಇಲಾಖೆ ಕ್ರಮ ಕೈಗೊಂಡಿದೆ.

ಮಾಹಿತಿಗಾಗಿ ಸಂಪರ್ಕಿಸಿ:
ಯೋಜನೆಗಳ ಹೆಚ್ಚಿನ ಮಾಹಿತಿ ಮತ್ತು ಸಹಾಯಕ್ಕಾಗಿ ಬೆಂಗಳೂರಿನ ಪ್ರಧಾನ ಕಚೇರಿಯಲ್ಲಿ  ಮಾಹಿತಿ ಸಲಹಾ ಕೇಂದ್ರ ಹಾಗೂ ರಾಜ್ಯದ 30 ಜಿಲ್ಲೆಗಳ ಜಿಲ್ಲಾ ಕಚೇರಿಗಳಲ್ಲಿ ವಿಕಲಚೇತನರ ಸಹಾಯವಾಣಿ/ಮಾಹಿತಿ ಕೇಂದ್ರಗಳನ್ನು ನಡೆಸಲಾಗುತ್ತಿದೆ. ಅರ್ಹರು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ‘ಸೇವಾ ಸಿಂಧು’ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಬಹುದು ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.

BIG NEWS: Good news for the disabled in the state: You will get all these facilities from the government!
Share. Facebook Twitter LinkedIn WhatsApp Email

Related Posts

BREAKING : ಚಾಮರಾಜನಗರದಲ್ಲಿ 2 ಕಾರುಗಳ ಮಧ್ಯ ಭೀಕರ ಅಪಘಾತ : 7 ತಿಂಗಳ ಮಗು ಸೇರಿ ಇಬ್ಬರು ಸಾವು!

1 Min Read

BREAKING : ಸಿಎಂ ಡಿಕೆ ಶಿವಕುಮಾರ್ ಸಂಪುಟದಲ್ಲಿ ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಮಾಹಿತಿ!

2 Mins Read

BIG NEWS : ರಾಜ್ಯದ `ಗ್ರಾಮ ಪಂಚಾಯಿತಿಗಳು’ ಸಾರ್ವಜನಿಕರಿಗೆ ಈ 30 ಮಾಹಿತಿಗಳನ್ನು ನೀಡುವುದು ಕಡ್ಡಾಯ.!

2 Mins Read
Recent News

BREAKING : ಚಾಮರಾಜನಗರದಲ್ಲಿ 2 ಕಾರುಗಳ ಮಧ್ಯ ಭೀಕರ ಅಪಘಾತ : 7 ತಿಂಗಳ ಮಗು ಸೇರಿ ಇಬ್ಬರು ಸಾವು!

BIG NEWS : ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

BREAKING : ಸಿಎಂ ಡಿಕೆ ಶಿವಕುಮಾರ್ ಸಂಪುಟದಲ್ಲಿ ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಮಾಹಿತಿ!

BIG NEWS : ರಾಜ್ಯದ `ಗ್ರಾಮ ಪಂಚಾಯಿತಿಗಳು’ ಸಾರ್ವಜನಿಕರಿಗೆ ಈ 30 ಮಾಹಿತಿಗಳನ್ನು ನೀಡುವುದು ಕಡ್ಡಾಯ.!

State News
KARNATAKA

BREAKING : ಚಾಮರಾಜನಗರದಲ್ಲಿ 2 ಕಾರುಗಳ ಮಧ್ಯ ಭೀಕರ ಅಪಘಾತ : 7 ತಿಂಗಳ ಮಗು ಸೇರಿ ಇಬ್ಬರು ಸಾವು!

By ಸುರೇಶ್‌ KARNATAKA 1 Min Read

ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಏಳು…

BIG NEWS : ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

BREAKING : ಸಿಎಂ ಡಿಕೆ ಶಿವಕುಮಾರ್ ಸಂಪುಟದಲ್ಲಿ ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಮಾಹಿತಿ!

BIG NEWS : ರಾಜ್ಯದ `ಗ್ರಾಮ ಪಂಚಾಯಿತಿಗಳು’ ಸಾರ್ವಜನಿಕರಿಗೆ ಈ 30 ಮಾಹಿತಿಗಳನ್ನು ನೀಡುವುದು ಕಡ್ಡಾಯ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.