Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain Alert : ರಾಜ್ಯದಲ್ಲಿ ಇಂದಿನಿಂದ ಮೇ.21 ರವರೆಗೆ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

17/05/2025 6:03 AM

BIG NEWS : ರಾಜ್ಯದ `ಆಶಾ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್ : ಗೌರವಧನ 1,000 ರೂ. ಹೆಚ್ಚಳ ಮಾಡಿ ಸರ್ಕಾರ ಮಹತ್ವದ ಆದೇಶ.!

17/05/2025 5:56 AM
vidhana soudha

BIG NEWS : ರಾಜ್ಯ ಸರ್ಕಾರದಿಂದ `ಆಸ್ತಿ’ ಖರೀದಿ, ಮಾರಾಟಗಾರರಿಗೆ ಬಿಗ್ ಶಾಕ್ : 30 ಲಕ್ಷ ರೂ. ಮೇಲ್ಪಟ್ಟ ಆಸ್ತಿಗೆ `IT’ ವಿವರ ಸಲ್ಲಿಕೆ ಕಡ್ಡಾಯ.!

17/05/2025 5:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ `ಆಶಾ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್ : ಗೌರವಧನ 1,000 ರೂ. ಹೆಚ್ಚಳ ಮಾಡಿ ಸರ್ಕಾರ ಮಹತ್ವದ ಆದೇಶ.!
KARNATAKA

BIG NEWS : ರಾಜ್ಯದ `ಆಶಾ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್ : ಗೌರವಧನ 1,000 ರೂ. ಹೆಚ್ಚಳ ಮಾಡಿ ಸರ್ಕಾರ ಮಹತ್ವದ ಆದೇಶ.!

By kannadanewsnow5717/05/2025 5:56 AM

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿಗೆ ಸಿಹಿಸುದ್ದಿ ನೀಡಲಾಗಿದೆ. ಸಿಎಂ ಸಿದ್ಧರಾಮಯ್ಯ ಹೇಳಿದಂತೆ ಗೌರವಧನವನ್ನು ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2025-26 ನೇ ಸಾಲಿನ ಆಯವ್ಯಯ ಭಾಷಣದ ಖಂಡಿಕೆ 148 ರಲ್ಲಿ “ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ ನೀಡುವುದರ ಮೂಲಕ ಗೌರವಧನವನ್ನು 1000 ರೂ. ಹೆಚ್ಚಿಸಲಾಗುವುದು” ಎಂದು ಘೋಷಿಸಲಾಗಿದೆ ಎಂದಿದ್ದಾರೆ.

ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರಿಂದ ಸ್ವೀಕೃತವಾದ ಏಕಕಡತದಲ್ಲಿ ಆಶಾ ಕಾಯಕರ್ತೆಯು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿದ್ದು, ಸ್ಥಳೀಯ ಸಮುದಾಯದಿಂದ ಗುರುತಿಸಿ, ಆಯ್ಕೆ ಮಾಡಲಾಗಿದ್ದು, ಅವರ ಗ್ರಾಮ/ಪ್ರದೇಶದ ವ್ಯಾಪ್ತಿಯಲ್ಲಿ ಸಮುದಾಯದ ಆರೋಗ್ಯ ಸ್ಥಿತಿಯ ಸುಧಾರಣೆಗೆ ಆರೋಗ್ಯ ಸೇವೆಗಳನ್ನು ಪಡೆಯಲು ಮತ್ತು ಆರೋಗ್ಯ ಆರೈಕೆ ಚಟುವಟಿಕೆಗಳು ಹಾಗೂ ನಡವಳಿಕೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಪ್ರತಿ 1000 ಜನಸಂಖ್ಯೆಗೆ ಹಾಗೂ ನಗರ ಪ್ರದೇಶದಲ್ಲಿ ಪ್ರತಿ 2500 ಜನಸಂಖ್ಯೆಗೆ ಒಬ್ಬರಂತೆ ಆಶಾಕಾರ್ಯಕರ್ತೆಯನ್ನು ಆಯ್ಕೆ ಮಾಡಲಾಗುವುದು, ಇದರಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 42,524 ಹುದ್ದೆಗಳು ಮಂಜೂರಾಗಿದ್ದು, ಪ್ರಸ್ತುತ 41000 ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಆಯುಷ್ಮಾನ ಆರೋಗ್ಯ ಮಂದಿರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಮತ್ತು ಸಾಮೂಹಿಕ ನೆಲೆಗಟ್ಟಿನ ಕಾರ್ಯನಿರ್ವಹಣೆಯನ್ನು ಉತ್ತೇಜಿಸಲು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅನುದಾನದಿಂದ ತಂಡ ಆಧಾರಿತ ಪ್ರೋತ್ಸಾಹಧನವನ್ನು (Team based Incentive) ವಿನ್ಯಾಸಗೊಳಿಸಲಾಗಿದೆ ಎಂದು ಹೇಳಿದ್ದಾರೆ.

  1. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು- ರೂ.1,500
  2. ಆರೋಗ್ಯ ನಿರೀಕ್ಷಣಾಧಿಕಾರಿಗಳು- ರೂ.1500
  3. ಆಶಾ ಕಾರ್ಯಕರ್ತೆಯರು – ರೂ.1000

ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರ-ಆಯುಷ್ಮಾನ್ ಆರೋಗ್ಯ ಮಂದಿರ ಕೇಂದ್ರ ಸ್ನಾನದ ಆರೋಗ್ಯ ಉಪಕೇಂದ್ರಗಳು, ಆಯುಷ್ಮಾನ್ ಆರೋಗ್ಯ ಮಂದಿರಗಳಾಗಿ ಮೇಲ್ದರ್ಜೆಗೇರದ ಆರೋಗ್ಯ ಉಪಕೇಂದ್ರಗಳು ಮತ್ತು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 15004 ಆಶಾಕಾರ್ಯಕರ್ತೆಯರಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ತಂಡ ಆಧಾರಿತ ಪ್ರೋತ್ಸಾಹ ಧನವು (Team based Incentive) ಅನುಮೋದನೆಯಾಗಿರುವುದಿಲ್ಲ. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಆಶಾಕಾರ್ಯಕರ್ತೆಯರಿಗೆ ಸಮಾನವಾಗಿ ತಂಡ ಆಧಾರಿತ ಪ್ರೋತ್ಸಾಹ ಧನವನ್ನು ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಆಶಾಕಾರ್ಯಕರ್ತೆಯರಿಗೆ ಮಾಸಿಕ ರೂ. 1000/- ಗಳಂತೆ ಪ್ರೋತ್ಸಾಹಧನವನ್ನು ನೀಡಲು do.1800.48 ಲಕ್ಷಗಳನ್ನು ರಾಜ್ಯ ಸರ್ಕಾರದ ಅನುದಾನದಿಂದ ಲೆಕ್ಷ ಶೀರ್ಷಿಕೆ 2211-00-103-0-11 ಉಪಲೆಕ್ಕಶೀರ್ಷಿಕೆ 324 ಅಡಿಯಲ್ಲಿ ಒದಗಿಸಲಾದ ಅನುದಾನದಿಂದ ಭರಿಸಲು ಅನುಮೋದನೆ ನೀಡುವಂತೆ ಕೋರಲಾಗಿದೆ ಎಂದಿದ್ದಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2025-26ನೇ ಸಾಲಿನ ಆಯವ್ಯಯದ ಕಂಡಿಕೆ 148 ರ ಘೋಷಣೆಯನ್ವಯ ಆಯುಷ್ಮಾನ್ ಆರೋಗ್ಯ ಮಂದಿರಗಳಾಗಿ ಮೇಲ್ದರ್ಜೆಗೇರದ ಆರೋಗ್ಯ ಉಪಕೇಂದ್ರಗಳು ಮತ್ತು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ರೂ. 1000/- ಗಳ ( ಒಂದು ಸಾವಿರ ರೂಪಾಯಿಗಳು) ತಂಡ ಆಧಾರಿತ ಪ್ರೋತ್ಸಾಹ ಧನವನ್ನು ಪಾವತಿಸಲು ಹಾಗೂ ಇದಕ್ಕಾಗಿ ತಗಲುವ ವೆಚ್ಚ ರೂ.1800.48 2211-00-103-0-11-324 ಲಕ್ಷಗಳನ್ನು ರಣ ಒದಗಿಸಲಾದ 0.2500.00 ಲಕ್ಷಗಳ ಅನುದಾನದಲ್ಲಿ ಭರಿಸಲು ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ: 90 23-5/2025, ದಿನಾಂಕ:18.03.2025ರಲ್ಲಿ ನೀಡಿರುವ ಸಹಮತಿ ಹಾಗೂ ಸಚಿವ ಸಂಪುಟ ಟಿಪ್ಪಣಿ ಸಂಖ್ಯೆ: ಸಿ.340/2025, ದಿನಾಂಕ:09.05.2025 ರ ಅನುಮೋದನೆಯನ್ವಯ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

 

BIG NEWS: Good news for the state's 'ASHA workers': Government issues important order increasing honorarium by Rs. 1000!
Share. Facebook Twitter LinkedIn WhatsApp Email

Related Posts

Rain Alert : ರಾಜ್ಯದಲ್ಲಿ ಇಂದಿನಿಂದ ಮೇ.21 ರವರೆಗೆ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

17/05/2025 6:03 AM1 Min Read
vidhana soudha

BIG NEWS : ರಾಜ್ಯ ಸರ್ಕಾರದಿಂದ `ಆಸ್ತಿ’ ಖರೀದಿ, ಮಾರಾಟಗಾರರಿಗೆ ಬಿಗ್ ಶಾಕ್ : 30 ಲಕ್ಷ ರೂ. ಮೇಲ್ಪಟ್ಟ ಆಸ್ತಿಗೆ `IT’ ವಿವರ ಸಲ್ಲಿಕೆ ಕಡ್ಡಾಯ.!

17/05/2025 5:53 AM1 Min Read

GOOD NEWS: ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿಗೆ ಗುಡ್ ನ್ಯೂಸ್: ಗೌರವಧನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

17/05/2025 5:45 AM2 Mins Read
Recent News

Rain Alert : ರಾಜ್ಯದಲ್ಲಿ ಇಂದಿನಿಂದ ಮೇ.21 ರವರೆಗೆ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

17/05/2025 6:03 AM

BIG NEWS : ರಾಜ್ಯದ `ಆಶಾ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್ : ಗೌರವಧನ 1,000 ರೂ. ಹೆಚ್ಚಳ ಮಾಡಿ ಸರ್ಕಾರ ಮಹತ್ವದ ಆದೇಶ.!

17/05/2025 5:56 AM
vidhana soudha

BIG NEWS : ರಾಜ್ಯ ಸರ್ಕಾರದಿಂದ `ಆಸ್ತಿ’ ಖರೀದಿ, ಮಾರಾಟಗಾರರಿಗೆ ಬಿಗ್ ಶಾಕ್ : 30 ಲಕ್ಷ ರೂ. ಮೇಲ್ಪಟ್ಟ ಆಸ್ತಿಗೆ `IT’ ವಿವರ ಸಲ್ಲಿಕೆ ಕಡ್ಡಾಯ.!

17/05/2025 5:53 AM

GOOD NEWS: ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿಗೆ ಗುಡ್ ನ್ಯೂಸ್: ಗೌರವಧನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

17/05/2025 5:45 AM
State News
KARNATAKA

Rain Alert : ರಾಜ್ಯದಲ್ಲಿ ಇಂದಿನಿಂದ ಮೇ.21 ರವರೆಗೆ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

By kannadanewsnow5717/05/2025 6:03 AM KARNATAKA 1 Min Read

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮೇ 21ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

BIG NEWS : ರಾಜ್ಯದ `ಆಶಾ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್ : ಗೌರವಧನ 1,000 ರೂ. ಹೆಚ್ಚಳ ಮಾಡಿ ಸರ್ಕಾರ ಮಹತ್ವದ ಆದೇಶ.!

17/05/2025 5:56 AM
vidhana soudha

BIG NEWS : ರಾಜ್ಯ ಸರ್ಕಾರದಿಂದ `ಆಸ್ತಿ’ ಖರೀದಿ, ಮಾರಾಟಗಾರರಿಗೆ ಬಿಗ್ ಶಾಕ್ : 30 ಲಕ್ಷ ರೂ. ಮೇಲ್ಪಟ್ಟ ಆಸ್ತಿಗೆ `IT’ ವಿವರ ಸಲ್ಲಿಕೆ ಕಡ್ಡಾಯ.!

17/05/2025 5:53 AM

GOOD NEWS: ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿಗೆ ಗುಡ್ ನ್ಯೂಸ್: ಗೌರವಧನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

17/05/2025 5:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.