Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪಂಜಾಬ್ ನ ಏರ್ ಬೇಸ್ ನಲ್ಲಿ `ಆಪರೇಷನ್ ಸಿಂಧೂರ್’ ವೀರರನ್ನು ಭೇಟಿಯಾದ ಪ್ರಧಾನಿ ಮೋದಿ | WATCH VIDEO

13/05/2025 12:59 PM

BIG NEWS : ರಾಜ್ಯ ಸರ್ಕಾರದಿಂದ ಹಾಡಿ, ಹಟ್ಟಿ, ತಾಂಡಾ ನಿವಾಸಿಗಳಿಗೆ ಗುಡ್ ನ್ಯೂಸ್ : ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು.!

13/05/2025 12:57 PM

GOOD NEWS : ರಾಜ್ಯ ಸರ್ಕಾರದಿಂದ ಮೇ 20ರಂದು 1 ಲಕ್ಷ ಕುಟುಂಬಗಳಿಗೆ `ಡಿಜಿಟಲ್ ಹಕ್ಕುಪತ್ರ’ ವಿತರಣೆ.!

13/05/2025 12:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದಿಂದ ಹಾಡಿ, ಹಟ್ಟಿ, ತಾಂಡಾ ನಿವಾಸಿಗಳಿಗೆ ಗುಡ್ ನ್ಯೂಸ್ : ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು.!
KARNATAKA

BIG NEWS : ರಾಜ್ಯ ಸರ್ಕಾರದಿಂದ ಹಾಡಿ, ಹಟ್ಟಿ, ತಾಂಡಾ ನಿವಾಸಿಗಳಿಗೆ ಗುಡ್ ನ್ಯೂಸ್ : ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು.!

By kannadanewsnow5713/05/2025 12:57 PM

ಬಳ್ಳಾರಿ : ಜಿಲ್ಲೆಯಲ್ಲಿ ಹಟ್ಟಿ, ತಾಂಡಾ ನಿವಾಸಿಗಳಿಗೆ ಶಾಶ್ವತ ನೆಮ್ಮದಿ ನೀಡುವ ಸಲುವಾಗಿ ತಾಂಡಾಗಳಿಗೆ ಕಂದಾಯ ಗ್ರಾಮದ ಸ್ಥಾನಮಾನ ನೀಡಲು ನಮ್ಮ ಸರ್ಕಾರ ನಿರ್ಧರಿಸಲಾಗಿದ್ದು, ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ ಅರ್ಹವಿರುವ ಗ್ರಾಮಗಳಿಗೆ ಸಂಬAಧಿಸಿದAತೆ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಾಡಿ, ಹಟ್ಟಿ, ತಾಂಡಾಗಳು ಸೇರಿದಂತೆ ಜನ ವಸತಿ ಪ್ರದೇಶಗಳು ಕಂದಾಯ ಗ್ರಾಮಗಳಾಗಿ ಅಂಗೀಕರಿಸದ ಕಾರಣ ಅಲ್ಲಿನ ನಿವಾಸಿಗಳು ಅನೇಕ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಹಟ್ಟಿ, ತಾಂಡಾ ನಿವಾಸಿಗಳ ಮನೆಗಳಿಗೆ ಕಾನೂನಿನ ಆಸರೆ ನೀಡಬೇಕು. ಕಳೆದ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಹಟ್ಟಿ, ಹಾಡಿ, ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವ ಕಾರ್ಯ ತ್ವರಿತಗತಿಯಲ್ಲಿ ನಡೆಯಬೇಕು ಎಂದು ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದಕ್ಕೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪ್ರತಿಕ್ರಿಯಿಸಿ, ಕಂದಾಯ ಗ್ರಾಮಗಳ ರಚನೆಗೆ ಜಿಲ್ಲೆಯಲ್ಲಿ ಒಟ್ಟು 74 ಗ್ರಾಮಗಳ ಗುರುತಿಸಲಾಗಿದ್ದು, ಈಗಾಗಲೇ 71 ಪ್ರಾಥಮಿಕ ಸೂಚನೆ ಹಾಗೂ ಸರ್ಕಾರದಿಂದ 51 ಗ್ರಾಮಗಳು ಅಂತಿಮ ಅಧಿಸೂಚನೆ ಹೊರಡಿಸಿದ್ದು, 1 ಗ್ರಾಮವು ಅಂತಿಮ ಅಧಿಸೂಚನೆಗೆ ಸಲ್ಲಿಕೆಯಾಗಿದೆ. ಇನ್ನೂ 19 ಗ್ರಾಮಗಳು ಅಂತಿಮ ಅಧಿಸೂಚನೆಗೆ ಬಾಕಿ ಇರುವ ಗ್ರಾಮಗಳಾಗಿವೆ ಎಂದು ಮಾಹಿತಿ ನೀಡಿದರು.

ಕಂದಾಯ ಗ್ರಾಮಗಳ ರಚನೆ ಕುರಿತಂತೆ ಜೂನ್ 30 ರ ಗಡುವನ್ನು ನಿಗದಿಪಡಿಸಲಾಗಿದ್ದು, ಹೊಸ ಕಂದಾಯ ಘಟಕಗಳ ರಚನೆಗೆ ನಿಷೇಧ ಅನ್ವಯ ಆಗಲಿದೆ. ಈ ನಿಷೇಧ ತೆರವಾಗಲು ಎರಡು ವರ್ಷ ಆಗಬಹುದು. ಹೀಗಾಗಿ ಬಾಕಿ ಇರುವ ಎಲ್ಲ ಕಂದಾಯ ಗ್ರಾಮಗಳ ರಚನೆ ಕಾರ್ಯ ಜೂ. 30 ರ ಒಳಗಾಗಿ ಪೂರ್ಣಗೊಳ್ಳಬೇಕು ಎಂದು ತಾಕೀತು ಮಾಡಿದರು.

ಗ್ರಾಮ ಪಂಚಾಯಿತಿಯಲ್ಲಿ ವಸತಿ ಪ್ರದೇಶಗಳ ಪಟ್ಟಿ ಇದೆ. ಕಂದಾಯ ಗ್ರಾಮಗಳ ಸಂಖ್ಯೆಗಿAತ ವಸತಿ ಪ್ರದೇಶಗಳ ಸಂಖ್ಯೆ ಹೆಚ್ಚಿದೆ. ಇಲ್ಲಿ ದಾಖಲೆ ರಹಿತ ವಸತಿ ಪ್ರದೇಶಗಳ ನಮೂದಾಗಿರುತ್ತವೆ. ಕಂದಾಯ ಇಲಾಖೆಯ ಬಳಿ ದಾಖಲೆ ಸಹಿತ ಗ್ರಾಮಗಳ ಮಾಹಿತಿ ಇರುತ್ತದೆ ಎಂದು ತಿಳಿಸಿದ ಅವರು, ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಗಮನಿಸಿ, ಗ್ರಾಮ ರಚನೆ ಮಾಡಬೇಕು. ದಾಖಲೆ ರಹಿತ ಇದ್ದಲ್ಲಿ ಅವರಿಗೆ ಒಂದು ದಾಖಲೆ ಕಲ್ಪಿಸಿ, ಬದುಕು ಕಲ್ಪಿಸಿಕೊಡಬೇಕಿದೆ ಎಂದರು.

ಗ್ರಾಮದ 1 ಕಿ.ಮೀ ವ್ಯಾಪ್ತಿ ಒಳಗೆ ಇದ್ದು, 10 ಮನೆಗಳಿಗಿಂತಲೂ ಹೆಚ್ಚು ಇದ್ದರೆ ಉಪ ಗ್ರಾಮ ರಚನೆ ಮಾಡಲು ಅವಕಾಶ ಇದೆ. ಜನರಿಗೆ ನಾವು ಸ್ಥಿರ ಬದುಕು ನೀಡಬೇಕು. ಬಿಟ್ಟು ಹೋಗಿರುವ ಕಂದಾಯ ಗ್ರಾಮಗಳ ರಚನೆ ಹಾಗೂ ಗುರುತಿಸುವ ಕಾರ್ಯ ಆಗಬೇಕು. ಈ ನಿಟ್ಟಿನಲ್ಲಿ ಯಾದವ ಹಾಗೂ ತಾಂಡಾ ಸಂಘದವರಿAದ ಮಾಹಿತಿ ಪಡೆದು ಗ್ರಾಮ ಪಂಚಾಯಿತಿಯಿAದ ಜನವಸತಿ ಪಟ್ಟಿ ಪಡೆಯುವಂತೆ ಸಚಿವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಸುಮಾರು 70 ಸಾವಿರ ಜಮೀನುಗಳು ಮೃತ ಹೊಂದಿರುವವರ ಹೆಸರಿನಲ್ಲಿ ಮುಂದುವರೆದಿದ್ದು, ಇಂತಹ ದಾಖಲೆಗಳು ಸಕಾಲದಲ್ಲಿ ಆಪ್‌ಡೇಟ್ ಆಗಬೇಕು. ಇಲ್ಲದಿದ್ದರೆ ವಾರಸುದಾರರಿಗೆ ನಾನಾ ರೀತಿಯ ತೊಂದರೆಗಳಾಗಲಿವೆ. ಹಾಗಾಗಿ ಪೌತಿ ಆಗದೇ ಉಳಿದಿರುವಂತಹ ಜಮೀನುಗಳನ್ನು ತಕ್ಷಣವೇ ಅಭಿಯಾನ ಕೈಗೊಳ್ಳಲಾಗುವುದು. ಈ ಅಭಿಯಾನದಲ್ಲಿ ಅಂತಹ ಕುಟುಂಬಗಳು ಭಾಗವಹಿಸಿದಲ್ಲಿ ಪೌತಿ ಖಾತೆ ಮಾಡಿಕೊಡಲಾಗುವುದು ಎಂದು ಸಚಿವರು ಹೇಳಿದರು.

ಭೂ ಸುರಕ್ಷಾ ಯೋಜನೆಗೆ ವೇಗ ನೀಡಿ:
ಭೂ ಸುರಕ್ಷಾ ಯೋಜನೆಯನ್ನು ಭೂ ಕಂದಾಯ ಇಲಾಖೆಯ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿದ್ದು, ಈ ಯೋಜನೆ ತ್ವರಿತಗತಿಯಲ್ಲಿ ಆಗಬೇಕು. ಜಿಲ್ಲೆಯಲ್ಲಿ ಸರಾಸರಿ 10 ಸಾವಿರ ಪುಟಗಳ ಸ್ಕಾö್ಯನ್ ಹಾಗೂ ಅಪ್‌ಲೋಡ್ ಆಗಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಸರ್ಕಾರದಿಂದ 1 ಲಕ್ಷ ಕುಟುಂಬಗಳಿಗೆ ಡಿಜಿಟಲ್ ಹಕ್ಕುಪತ್ರ ವಿತರಣೆ:
ರಾಜ್ಯ ಸರ್ಕಾರವು ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆ ಜನಪರ ಆಡಳಿತಕ್ಕೆ ಸಾಕ್ಷಿಯಾಗಿ ಕಂದಾಯ ಗ್ರಾಮಗಳ 1 ಲಕ್ಷ ಕುಟುಂಬಗಳಿಗೆ ಶಾಶ್ವತ ಡಿಜಿಟಲ್ ಹಕ್ಕುಪತ್ರ ವಿತರಿಸಲು ಉದ್ದೇಶಿಸಲಾಗಿದೆ. ಇದೇ ಮೇ 20ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಕ್ಕುಪತ್ರ ವಿತರಿಸಲಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು.

ಸಭೆಯಲ್ಲಿ ಸಂಸದ ಈ.ತುಕಾರಾಮ್, ಸಂಡೂರು ಶಾಸಕರಾದ ಈ.ಅನ್ನಪೂರ್ಣ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಪಿ.ಪ್ರಮೋದ್ ಸೇರಿದಂತೆ ಜಿಲ್ಲೆಯ ಐದು ತಾಲ್ಲೂಕುಗಳ ತಹಶೀಲ್ದಾರರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

and Tanda: June 30th deadline to complete the revenue village formation process! BIG NEWS: Good news from the state government for residents of Hadi Hatti
Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯ ಸರ್ಕಾರದಿಂದ ಮೇ 20ರಂದು 1 ಲಕ್ಷ ಕುಟುಂಬಗಳಿಗೆ `ಡಿಜಿಟಲ್ ಹಕ್ಕುಪತ್ರ’ ವಿತರಣೆ.!

13/05/2025 12:54 PM3 Mins Read

 BREAKING : ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ಕೇಸ್ : `FIR’ ರದ್ದು ಕೋರಿ ಹೈಕೋರ್ಟ್ ಗೆ ಗಾಯಕ ಸೋನು ನಿಗಮ್ ಅರ್ಜಿ.!

13/05/2025 12:20 PM1 Min Read

JOB ALERT : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ.!

13/05/2025 10:24 AM3 Mins Read
Recent News

BREAKING : ಪಂಜಾಬ್ ನ ಏರ್ ಬೇಸ್ ನಲ್ಲಿ `ಆಪರೇಷನ್ ಸಿಂಧೂರ್’ ವೀರರನ್ನು ಭೇಟಿಯಾದ ಪ್ರಧಾನಿ ಮೋದಿ | WATCH VIDEO

13/05/2025 12:59 PM

BIG NEWS : ರಾಜ್ಯ ಸರ್ಕಾರದಿಂದ ಹಾಡಿ, ಹಟ್ಟಿ, ತಾಂಡಾ ನಿವಾಸಿಗಳಿಗೆ ಗುಡ್ ನ್ಯೂಸ್ : ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು.!

13/05/2025 12:57 PM

GOOD NEWS : ರಾಜ್ಯ ಸರ್ಕಾರದಿಂದ ಮೇ 20ರಂದು 1 ಲಕ್ಷ ಕುಟುಂಬಗಳಿಗೆ `ಡಿಜಿಟಲ್ ಹಕ್ಕುಪತ್ರ’ ವಿತರಣೆ.!

13/05/2025 12:54 PM

BIG NEWS : ಭಯೋತ್ಪಾದನೆ ಮುಕ್ತ ಕಾಶ್ಮೀರ’: ಪಹಲ್ಗಾಮ್ ದಾಳಿಯ ಉಗ್ರರ ಬಗ್ಗೆ ಮಾಹಿತಿ ನೀಡಿದವರಿಗೆ 20 ಲಕ್ಷ ರೂ. ಬಹುಮಾನ ಘೋಷಣೆ | Terror free Kashmir

13/05/2025 12:44 PM
State News
KARNATAKA

BIG NEWS : ರಾಜ್ಯ ಸರ್ಕಾರದಿಂದ ಹಾಡಿ, ಹಟ್ಟಿ, ತಾಂಡಾ ನಿವಾಸಿಗಳಿಗೆ ಗುಡ್ ನ್ಯೂಸ್ : ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು.!

By kannadanewsnow5713/05/2025 12:57 PM KARNATAKA 3 Mins Read

ಬಳ್ಳಾರಿ : ಜಿಲ್ಲೆಯಲ್ಲಿ ಹಟ್ಟಿ, ತಾಂಡಾ ನಿವಾಸಿಗಳಿಗೆ ಶಾಶ್ವತ ನೆಮ್ಮದಿ ನೀಡುವ ಸಲುವಾಗಿ ತಾಂಡಾಗಳಿಗೆ ಕಂದಾಯ ಗ್ರಾಮದ ಸ್ಥಾನಮಾನ ನೀಡಲು…

GOOD NEWS : ರಾಜ್ಯ ಸರ್ಕಾರದಿಂದ ಮೇ 20ರಂದು 1 ಲಕ್ಷ ಕುಟುಂಬಗಳಿಗೆ `ಡಿಜಿಟಲ್ ಹಕ್ಕುಪತ್ರ’ ವಿತರಣೆ.!

13/05/2025 12:54 PM

 BREAKING : ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ಕೇಸ್ : `FIR’ ರದ್ದು ಕೋರಿ ಹೈಕೋರ್ಟ್ ಗೆ ಗಾಯಕ ಸೋನು ನಿಗಮ್ ಅರ್ಜಿ.!

13/05/2025 12:20 PM

JOB ALERT : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ.!

13/05/2025 10:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.