Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದ್ವಿತೀಯ ಪಿಯುಸಿ ಫಲಿತಾಂಶ: ಕಲಾ ವಿಭಾಗದಲ್ಲಿ ಕೊಟ್ಟೂರು ಇಂದೂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಟಾಪರ್

09/04/2026 5:06 PM

ಪಿಯುಸಿ ಬಳಿಕ ಯಾವ ಕೋರ್ಸ್ ಸೇರಬೇಕು ಎನ್ನುವ ಗೊಂದಲವಿದೆಯಾ? ಹಾಗಾದ್ರೆ ಇಲ್ಲಿದೆ ಸಂಪೂರ್ಣ ಮಾಹಿತಿ

09/04/2026 4:31 PM

BREAKING : ಯಾರನ್ನು ಪ್ರೀತಿಸಬೇಡಿ : ಬೆಂಗಳೂರಲ್ಲಿ ಪ್ರೀತಿ ನಿರಾಕರಿಸಿದಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ!

09/04/2026 4:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಸ್ತೆ ಬದಿಯ ಅಂಗಡಿಗಳಲ್ಲಿ ಗೋಬಿ, ಪಾನಿಪೂರಿಯಲ್ಲಿ `ಕೃತಕ ಬಣ್ಣ ಬಳಕೆ’ ನಿಷೇಧ : ಸರ್ಕಾರ ಮಹತ್ವದ ಆದೇಶ
KARNATAKA

BIG NEWS : ರಸ್ತೆ ಬದಿಯ ಅಂಗಡಿಗಳಲ್ಲಿ ಗೋಬಿ, ಪಾನಿಪೂರಿಯಲ್ಲಿ `ಕೃತಕ ಬಣ್ಣ ಬಳಕೆ’ ನಿಷೇಧ : ಸರ್ಕಾರ ಮಹತ್ವದ ಆದೇಶ

By kannadanewsnow5704/02/2026 7:05 AM

ರಸ್ತೆ ಬದಿ ದೊರೆಯುವ ಗೋಬಿ ಮಂಚೂರಿ, ಪಾನಿಪೂರಿ ಮುಂತದಾ ಚಾಟ್ಸ್ಗಳಲ್ಲಿ ಕೃತಕ ಬಣ್ಣ ಹಾಗೂ ನಿಷೇಧಿತ ವಸ್ತುಗಳನ್ನು ಬೆರೆಸದಂತೆ ಸರ್ಕಾರ ಆದೇಶಿಸಿದೆ. ಅದರಂತೆ ಸರ್ಕಾರದ ಆದೇಶ ಪಾಲನೆಯಾಗುತ್ತಿರುವ ಬಗ್ಗೆ ಇಲಾಖೆ ಎಚ್ಚರಿಕೆ ವಹಿಸಿ, ಖಾತ್ರಿಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪ್ರಾಧಿಕಾರದ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರಾದ ಡಾ.ಸುರೇಶ ಬಿ.ಇಟ್ನಾಳ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಮವಾರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲ ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ತಯಾರಾಗುವ ಆಹಾರ ಹಾಗೂ ರಸ್ತೆ ಬದಿ ಮಾರಾಟ ಮಾಡುವ ಗೋಬಿ ಮಂಚೂರಿ, ಪಾನಿ ಪೂರಿಯಂತಹ ಚಾಟ್ಸ್, ಫಾಸ್ಟ್ ಫುಡ್‌ಗಳಲ್ಲಿ ಕೃತಕ ಬಣ್ಣಗಳನ್ನು ಹಾಗೂ ಆಹಾರದ ರುಚಿ ಹೆಚ್ಚಿಸುವ ನಿಷೇಧಿತ ವಸ್ತುಗಳನ್ನು ಬಳಸದಂತೆ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಆದಾಗ್ಯೂ ಕೆಲ ಅಂಗಡಿಗಳಲ್ಲಿ ನಿಷೇಧಿತ ವಸ್ತುಗಳು ಹಾಗೂ ಕೃತಕ ಬಣ್ಣಗಳ ಬಳಕೆ ನಡೆಯುತ್ತಿದೆ. ಇಂತಹ ಹೋಟೆಲ್, ರಸ್ತೆ ಬದಿ ಅಂಗಡಿಗಳನ್ನು ಗುರುತಿಸಿ, ಅದರ ಮಾಲೀಕರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಿ. ರುಚಿ ಹೆಚ್ಚಿಸುವ ನಿಷೇಧಿತ ವಸ್ತುಗಳು ಆರೋಗ್ಯಕ್ಕೆ ತುಂಬಾ ಹಾನಿಕಾರಕ. ಆದ್ದರಿಂದ ಯಾವುದೇ ಹೋಟೆಲ್, ರಸ್ತೆ ಬದಿ ಅಂಗಡಿಗಳಲ್ಲಿ ಇಂತಹ ನಿಷೇಧಿತ ವಸ್ತುಗಳ ಬಳಕೆ ಮಾಡುತ್ತಿಲ್ಲ ಎಂಬುದನ್ನು ಖಾತ್ರಿಪಡಿಸಿಕೊಂಡು, ಸರ್ಕಾರದ ಆದೇಶದ ಕಟ್ಟುನಿಟ್ಟಿನ ಪಾಲನೆಗೆ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪ್ರಾಧಿಕಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಎಲ್ಲ ವಸತಿ ಶಾಲೆಗಳಲ್ಲಿ, ಅಂಗನವಾಡಿಗಳಲ್ಲಿ ಹಾಗೂ ಶಾಲೆಗಳಲ್ಲಿ ನೀಡುವ ಆಹಾರಗಳಲ್ಲಿ ಬಳಸುವ ದಿನಸಿ ವಸ್ತುಗಳ ಗುಣಮಟ್ಟ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಬೇಕು. ಹಾಗೂ ಆಹಾರ ಸಾಮಗ್ರಿ ಶೇಖರಿಸುವ ಗೋದಾಮುಗಳಲ್ಲಿ ನಿಯಮಾನುಸಾರ ಸ್ವಚ್ಛತೆ ಹಾಗೂ ಸುರಕ್ಷತೆ ನಿರ್ವಹಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಹಳ್ಳಿಗಳಲ್ಲಿ ಹಾಲು ಸಂಗ್ರಹಣಾ ಕೇಂದ್ರಗಳಿಗೆ ಗುಣಮಟ್ಟ ಪರೀಕ್ಷೆಯ ಮಾನದಂಡಗಳನ್ನು ನೀಡಲಾಗಿದೆ. ಆ ಮಾನದಂಡಗಳನ್ವಯ ಗುಣಮಟ್ಟದ ಹಾಲನ್ನು ಮಾತ್ರ ಹಾಲು ಮಾರಾಟಗಾರರಿಂದ ಸಂಗ್ರಹಿಸಬೇಕು. ಇಂತಹ ಹಾಲು ಸಂಗ್ರಹಣಾ ಕೇಂದ್ರಗಳಲ್ಲಿ ದೊರೆಯುವ ಹಾಲನ್ನು ಪರೀಕ್ಷೆಗೊಳಪಡಿಸಿ. ಯೂರಿಯಾ ಬಳಸಿ ನಕಲಿ ಹಾಲು ಹಾಗೂ ಹಾಲಿನ ಉತ್ಪನ್ನಗಳಾದ ಪನೀರ್, ಚೀಸ್ ಮುಂತಾದವುಗಳನ್ನು ತಯಾರಿಸಲಾಗುತ್ತದೆ. ಅಂತಹವುಗಳನ್ನು ಗುರುತಿಸಿ ಮಾರಾಟವಾಗದಂತೆ ಎಚ್ಚರಿಕೆ ವಹಿಸಬೇಕು. ಬೇಕರಿ ಹಾಗೂ ಎಗ್‌ರೈಸ್ ಅಂಗಡಿಗಳಲ್ಲಿ ಒಡೆದ ಹಾಗೂ ಕೆಟ್ಟ ಮೊಟ್ಟೆಗಳನ್ನು ಬಳಸುತ್ತಿರುವ ಕುರಿತು ದೂರುಗಳಿವೆ. ಈ ಬಗ್ಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಮಾದರಿ ಪರೀಕ್ಷೆ ಮಾಡಿ, ತಪ್ಪು ಕಂಡುಬಂದಲ್ಲಿ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿಯೂ ಇಲಾಖೆಯಿಂದ ಮಾದರಿ ಪರೀಕ್ಷೆ ನಡೆಸಬೇಕು. ಸರ್ಕಾರದಿಂದ ಜನರಿಗೆ ನೀಡುವ ಯಾವುದೇ ಆಹಾರ ಸಾಮಗ್ರಿ, ದಿನಸಿ ಮುಂತಾದವು ಗುಣಮಟ್ಟದಿಂದ ಕೂಡಿರಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಮಾತನಾಡಿ, ಸಾರ್ವಜನಿಕರು ಹೋಟೆಲ್ ಹಾಗೂ ರಸ್ತೆ ಬದಿ ಅಂಗಡಿಗಳಲ್ಲಿ ದೊರೆಯುವ ಆಹಾರ ಸೇವಿಸುವ ಮುನ್ನ ಎಚ್ಚರಿಕೆ ವಹಿಸಬೇಕು. ಗುಣಮಟ್ಟದ ಆಹಾರ ಸೇವನೆಗೆ ಆದ್ಯತೆ ನೀಡಬೇಕು. ಕಿರಾಣಿ ಹಾಗೂ ಮಾರ್ಟ್ಗಳಲ್ಲಿ ದೊರೆಯುವ ದಿನಸಿ ಸಾಮಗ್ರಿಗಳ ಮೇಲೆ ಕಡ್ಡಾಯವಾಗಿ ಸುರಕ್ಷಿತ ಬಳಕೆಯ ಅವಧಿಯನ್ನು ನಮೂದಿಸಬೇಕು. ಗ್ರಾಹಕರು ಅವಧಿ ನಮೂದಿಸಿದ ಬಗ್ಗೆ ಖಾತ್ರಿಪಡಿಸಿಕೊಂಡು ಸರಕು ಕೊಳ್ಳಬೇಕು. ಮಕ್ಕಳಿಗೆ ನೀಡುವ ಸಿಹಿತಿಂಡಿ, ಐಸ್‌ಕ್ರೀಮ್ ಮುಂತಾದ ತಿನಿಸುಗಳಲ್ಲಿ ಬಳಸಲಾದ ಅನುಮತಿಸಲಾದ ವಸ್ತುಗಳ ವಿವರಣೆ ನಂತರವೇ ಮಕ್ಕಳಿಗೆ ತಿನಿಸುಗಳನ್ನು ನೀಡಬೇಕು. ಕುರುಕಲು ತಿಂಡಿಗಳಲ್ಲಿ ಬಳಸುವ ಎಣ್ಣೆ ಕಳಪೆಯಾಗಿರುವ ಸಾಧ್ಯತೆ ಇರುತ್ತದೆ. ಆದ್ದರಿಂದ ಅಂತಹ ತಿನಿಸುಗಳ ಬಗ್ಗೆ ಜಾಗ್ರತೆ ವಹಿಸಬೇಕು. ಈ ಬಗ್ಗೆ ಸಾರ್ವಜನಿಕರಿಗೆ ಅಗತ್ಯ ಮಾಹಿತಿ ನೀಡಿ, ಜಾಗೃತಿ ಮೂಡಿಸಬೇಕು ಎಂದು ಅವರು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಂಕಿತ ಅಧಿಕಾರಿ ಡಾ.ಅಲಕನಂದಾ ಮಳಗಿ ಇಲಾಖೆ ಕೈಗೊಂಡ ಕ್ರಮಗಳು, ಆಹಾರ ಸುರಕ್ಷತಾ ಮಾನದಂಡಗಳು ಕುರಿತು ವಿವರವಾದ ಮಾಹಿತಿ ನೀಡಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಆಹಾರ ಇಲಾಖೆ ಉಪನಿರ್ದೇಶಕ ವಿಶ್ವನಾಥ, ಅಬಕಾರಿ ಇಲಾಖೆ ಡಿವೈಎಸ್‌ಪಿ ಬಿ.ಆಂಜನೇಯ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

BIG NEWS: Government orders ban on use of artificial colours in Gobi and Panipuri at roadside stalls
Share. Facebook Twitter LinkedIn WhatsApp Email

Related Posts

ದ್ವಿತೀಯ ಪಿಯುಸಿ ಫಲಿತಾಂಶ: ಕಲಾ ವಿಭಾಗದಲ್ಲಿ ಕೊಟ್ಟೂರು ಇಂದೂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಟಾಪರ್

09/04/2026 5:06 PM1 Min Read

ಪಿಯುಸಿ ಬಳಿಕ ಯಾವ ಕೋರ್ಸ್ ಸೇರಬೇಕು ಎನ್ನುವ ಗೊಂದಲವಿದೆಯಾ? ಹಾಗಾದ್ರೆ ಇಲ್ಲಿದೆ ಸಂಪೂರ್ಣ ಮಾಹಿತಿ

09/04/2026 4:31 PM3 Mins Read

BREAKING : ಯಾರನ್ನು ಪ್ರೀತಿಸಬೇಡಿ : ಬೆಂಗಳೂರಲ್ಲಿ ಪ್ರೀತಿ ನಿರಾಕರಿಸಿದಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ!

09/04/2026 4:14 PM1 Min Read
Recent News

ದ್ವಿತೀಯ ಪಿಯುಸಿ ಫಲಿತಾಂಶ: ಕಲಾ ವಿಭಾಗದಲ್ಲಿ ಕೊಟ್ಟೂರು ಇಂದೂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಟಾಪರ್

09/04/2026 5:06 PM

ಪಿಯುಸಿ ಬಳಿಕ ಯಾವ ಕೋರ್ಸ್ ಸೇರಬೇಕು ಎನ್ನುವ ಗೊಂದಲವಿದೆಯಾ? ಹಾಗಾದ್ರೆ ಇಲ್ಲಿದೆ ಸಂಪೂರ್ಣ ಮಾಹಿತಿ

09/04/2026 4:31 PM

BREAKING : ಯಾರನ್ನು ಪ್ರೀತಿಸಬೇಡಿ : ಬೆಂಗಳೂರಲ್ಲಿ ಪ್ರೀತಿ ನಿರಾಕರಿಸಿದಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ!

09/04/2026 4:14 PM

BIG NEWS : ಕರ್ನಾಟಕ ದ್ವಿತೀಯ ಪರೀಕ್ಷೆ ಫಲಿತಾಂಶ : ರಾಜ್ಯಕ್ಕೆ ಉಡುಪಿ , ಮಂಗಳೂರು ಫಸ್ಟ್.!

09/04/2026 3:55 PM
State News
KARNATAKA

ದ್ವಿತೀಯ ಪಿಯುಸಿ ಫಲಿತಾಂಶ: ಕಲಾ ವಿಭಾಗದಲ್ಲಿ ಕೊಟ್ಟೂರು ಇಂದೂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಟಾಪರ್

By kannadanewsnow0909/04/2026 5:06 PM KARNATAKA 1 Min Read

ಕೊಟ್ಟೂರು: ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದೂ ಪಿಯು ಕಾಲೇಜು ತನ್ನ ಅಪ್ರತಿಮ…

ಪಿಯುಸಿ ಬಳಿಕ ಯಾವ ಕೋರ್ಸ್ ಸೇರಬೇಕು ಎನ್ನುವ ಗೊಂದಲವಿದೆಯಾ? ಹಾಗಾದ್ರೆ ಇಲ್ಲಿದೆ ಸಂಪೂರ್ಣ ಮಾಹಿತಿ

09/04/2026 4:31 PM

BREAKING : ಯಾರನ್ನು ಪ್ರೀತಿಸಬೇಡಿ : ಬೆಂಗಳೂರಲ್ಲಿ ಪ್ರೀತಿ ನಿರಾಕರಿಸಿದಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ!

09/04/2026 4:14 PM

BIG NEWS : ಕರ್ನಾಟಕ ದ್ವಿತೀಯ ಪರೀಕ್ಷೆ ಫಲಿತಾಂಶ : ರಾಜ್ಯಕ್ಕೆ ಉಡುಪಿ , ಮಂಗಳೂರು ಫಸ್ಟ್.!

09/04/2026 3:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.