Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

7ನೇ ವೇತನ ಆಯೋಗದ ಅಂತ್ಯದ ದಿನಾಂಕ ನಿಗದಿ ; 8ನೇ ವೇತನ ಆಯೋಗದಲ್ಲಿ ‘ಸಂಬಳ’ ಎಷ್ಟು ಹೆಚ್ಚಾಗ್ಬೋದು ಗೊತ್ತಾ.?

22/12/2025 10:20 PM

BREAKING: ದೇಶೀಯ ಮಹಿಳಾ ಕ್ರಿಕೆಟಿಗರು, ಅಧಿಕಾರಿಗಳಿಗೆ ಬಂಪರ್ ಗಿಫ್ಟ್ ಕೊಟ್ಟ BCCI: ಭಾರೀ ವೇತನ ಹೆಚ್ಚಳ

22/12/2025 10:16 PM

BREAKING ; ದೇಶೀಯ ‘ಮಹಿಳಾ ಕ್ರಿಕೆಟ್ ಆಟಗಾರ್ತಿ’ಯರಿಗೆ ‘BCCI’ ಗುಡ್ ನ್ಯೂಸ್ ; ವೇತನದಲ್ಲಿ ಭಾರೀ ಹೆಚ್ಚಳ ಘೋಷಣೆ

22/12/2025 10:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸರಕಾರಿ ಬಸ್ ಪ್ರಯಾಣದರ ಶೇ 15ರಷ್ಟು ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಕೆ.!
KARNATAKA

BIG NEWS : ಸರಕಾರಿ ಬಸ್ ಪ್ರಯಾಣದರ ಶೇ 15ರಷ್ಟು ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಕೆ.!

By kannadanewsnow5728/12/2024 8:21 PM

ಬೆಂಗಳೂರು : ಸಾರಿಗೆ ಇಲಾಖೆಯನ್ನು ಸಮಾಧಿ ಮಾಡುವ ಮಟ್ಟಕ್ಕೆ ಈ ಸರಕಾರ ತಂದು ನಿಲ್ಲಿಸಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಆಕ್ಷೇಪಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ ಇಲಾಖೆ ನೌಕರರು ನಾಳೆಯಿಂದ ಪ್ರತಿಭಟನೆ ನಡೆಸಲು ಕರೆ ನೀಡಿದ್ದಾರೆ. ಸಾರಿಗೆ ಇಲಾಖೆ ನೌಕರರ ಜೊತೆಗೆ ಬಿಜೆಪಿ ನಿಲ್ಲಲಿದೆ. ಸಾರಿಗೆ ಇಲಾಖೆ ಸಚಿವರಿಗೆ ತನ್ನ ಇಲಾಖೆಯ ಆರ್ಥಿಕ ಸ್ಥಿತಿಗತಿಯೇನೆಂದು ಅರ್ಥವಾಗಿಲ್ಲದೇ ಇರುವುದು ದುರಂತ ಎಂದು ಟೀಕಿಸಿದರು.

ಸಚಿವ ರಾಮಲಿಂಗಾರೆಡ್ಡಿಯವರು ಇಲಾಖೆ ಲಾಭದಲ್ಲಿದೆ ಎನ್ನುತ್ತಾರೆ. ಸಚಿವರೇ ಇಷ್ಟು ಅಜ್ಞಾನಿಗಳಾದರೆ ಇನ್ನು ಜನಸಾಮಾನ್ಯರ ಪಾಡೇನು; ಇದು ರಾಜ್ಯದ ದುರ್ದೈವ ಎಂದು ವ್ಯಂಗ್ಯವಾಡಿದರು. ನಿವೃತ್ತ ಐಎಎಸ್ ಅಧಿಕಾರಿ ಉಪೇಂದ್ರ ತ್ರಿಪಾಠಿ ಅವರು ಬಿಎಂಟಿಸಿಯ ಎಂ.ಡಿ. ಆಗಿದ್ದಾಗ ಆ ಸಂಸ್ಥೆಯನ್ನು ನಷ್ಟದಿಂದ ಲಾಭಕ್ಕೆ ತಂದರು. ಇಲಾಖೆಗೆ ಬಹಳಷ್ಟು ಆಸ್ತಿಯನ್ನೂ ಮಾಡಿದ್ದರು ಎಂದು ವಿವರಿಸಿದರು. 700 ಕೋಟಿ ಮೊತ್ತವನ್ನು ಠೇವಣಿ ಇಟ್ಟಿದ್ದರು ಎಂದರು.
ಸರಕಾರ ಸಂಪೂರ್ಣ ದಿವಾಳಿಯಾಗಿದೆ. ಪ್ರಾಮಾಣಿಕ ಅಧಿಕಾರಿಗಳು ಶೇಖರಿಸಿಟ್ಟ ಆಸ್ತಿಯನ್ನು ಮಾರಾಟ ಮಾಡಲು ಈ ಸರಕಾರ ಹೊರಟಿದೆ. ಅಧಿಕಾರಿಗಳು, ಸಿಬ್ಬಂದಿಗೆ ಸಂಬಳ ಕೊಡಲಾಗದೇ ಇರುವುದೇ ಇದಕ್ಕೆ ಕಾರಣ ಎಂದು ವಿಶ್ಲೇಷಿಸಿದರು.

ಸಿದ್ದರಾಮಯ್ಯನವರು ಜಾತ್ರೆ ಮಾಡುತ್ತಲೇ ಇದ್ದಾರೆ..

ಡಿಸೆಂಬರ್ ಅಂತ್ಯಕ್ಕೆ ಅಂದರೆ ಇಂದಿನವರೆಗೆ ಸಾರಿಗೆ ಇಲಾಖೆಗೆ ಈ ಸರಕಾರವು 7,401 ಕೋಟಿ ಕೊಡಬೇಕಿದೆ. ಭವಿಷ್ಯನಿಧಿ ನ್ಯಾಸ ಮಂಡಳಿಗೆ 2,500 ಕೋಟಿ, ನಿವೃತ್ತ ನೌಕರರ ಬಾಕಿ 362 ಕೋಟಿ, ಸಿಬ್ಬಂದಿಗಳ ಬಾಕಿ ಪಾವತಿ, ಸರಬರಾಜುದಾರರ ಬಿಲ್ ಪಾವತಿ, ಇಂಧನ ಬಾಕಿ ಸೇರಿ 1,000 ಕೋಟಿ, ಎಂವಿಸಿ ಕ್ಲೈಮ್‍ಗಳು, ಇತರ ಬಿಲ್‍ಗಳು, ನಿವೃತ್ತ ನೌಕರರ ಪರಿಷ್ಕøತ ಉಪ ಧನ, ರಜೆ ನಗದೀಕರಣ- 700 ಕೋಟಿ, ಒಟ್ಟು ಸಾಲದ ಬಾಕಿ ಹೊಣೆಗಾರಿಕೆ ಸೇರಿದಾಗ 5,614 ಕೋಟಿ ಆಗುತ್ತದೆ ಎಂದು ಪಿ. ರಾಜೀವ್ ಅವರು ವಿವರ ನೀಡಿದರು. ಬಾಕಿ ಮೊತ್ತಕ್ಕೆ ಸರಕಾರವು ಶೇ 10.5 ಬಡ್ಡಿ ಕಟ್ಟಬೇಕಿದೆ ಎಂದರು.

ಶಕ್ತಿ ಯೋಜನೆ ಅಡಿಯಲ್ಲಿ 2023-24ನೇ ಸಾಲಿನ ಬಾಕಿ 1180 ಕೋಟಿಯಷ್ಟಿದೆ. 2024-25ರಲ್ಲಿ ಬಾಕಿ ಉಳಿಸಿಕೊಂಡದ್ದು 607 ಕೋಟಿ- ಅಂದರೆ, 1787 ಕೋಟಿ ಬಾಕಿ ಇದೆ. ಆದರೆ, ಸಿದ್ದರಾಮಯ್ಯನವರು ಜಾತ್ರೆ ಮಾಡುತ್ತಲೇ ಇದ್ದಾರೆ. ಆ ಯೋಜನೆ ತಂದ್ಬಿಟ್ಟಿದ್ದೇವೆ; ಈ ಯೋಜನೆ ತಂದಿದ್ದೇವೆ ಎನ್ನುತ್ತಾರೆ. ಯಾವ ಪುರುಷಾರ್ಥ ಇದೆ ಇದರಲ್ಲಿ ಎಂದು ಪ್ರಶ್ನಿಸಿದರು. ಇರುವ ಆಸ್ತಿ ಸಂಪೂರ್ಣ ಮಾರಾಟ ಮಾಡಿ, ಇಲಾಖೆ ದಿವಾಳಿ ಮಾಡಿ ಇದನ್ನು ಸಾಧನೆ ಎನ್ನುವ ಮುಖ್ಯಮಂತ್ರಿಯನ್ನು ಈ ರಾಜ್ಯ ಹೊಂದಿರುವುದು ದುರಂತ ಎಂದು ತಿಳಿಸಿದರು.

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೇತೃತ್ವದ ಸಭೆಯಲ್ಲಿ ಸಾರಿಗೆ ಇಲಾಖೆಯ ವಿಚಾರ ಚರ್ಚೆಯಾಗಿದೆ. 3650 ಕೋಟಿ ಹೊರೆಯಾಗುತ್ತಿದೆ ಎಂದು ಅಧಿಕಾರಿಗಳೇ ಒಪ್ಪಿಕೊಂಡಿದ್ದಾರೆ ಎಂದು ಸಭಾ ನಡಾವಳಿಗಳನ್ನು ಮುಂದಿಟ್ಟರು. ಶೇ 15ರಷ್ಟು ಪ್ರಯಾಣದರ ಹೆಚ್ಚಳಕ್ಕೆ ಸಭೆಯು ನಿರ್ಣಯಿಸಿ, ಅದರಂತೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಯಿತು ಎಂದು ಮಾಹಿತಿ ಕೊಟ್ಟರು. ಹಾಲು, ಎಣ್ಣೆ, ವಾಹನ ತೆರಿಗೆ ಹೆಚ್ಚಳದ ಕುರಿತು ಗಮನ ಸೆಳೆದರು. ಪ್ರಯಾಣದರ ಪರಿಷ್ಕರಣೆ ನಂತರವೂ ನಿಗಮವು 1800 ಕೋಟಿ ನಷ್ಟ ಅನುಭವಿಸುತ್ತದೆ ಎಂದು ಸಭೆಯು ಗಮನಿಸಿತ್ತೆಂದು ತಿಳಿಸಿದರು.

ನಿಗಮದಲ್ಲಿ 200 ಎಕರೆ ಭೂಮಿ ಲಭ್ಯವಿದ್ದು, ಆದಾಯ ಕ್ರೋಡೀಕರಣಕ್ಕೆ ಬಳಸಲು ಮುಖ್ಯ ಕಾರ್ಯದರ್ಶಿ ಸಲಹೆ ನೀಡಿದ್ದಾರೆ. ಸರಕಾರದ ಮುಂದೆ ಬೇಡಿಕೆ ಇಡಬೇಡಿ ಎಂಬುದು ಇದರ ಅರ್ಥ ಎಂದು ವಿಶ್ಲೇಷಿಸಿದರು.
ಈ ಸರಕಾರ ಇನ್ನು ಎರಡೂವರೆ ವರ್ಷ ಇರಲಿದೆ; ಇದು ನಿಗಮದ ಆಸ್ತಿ ಮಾರಾಟ ಮಾಡಿ, ಸರ್ವನಾಶ ಮಾಡಿದರೆ, ಆ ಬಳಿಕವೂ ಕರ್ನಾಟಕ ಇರುತ್ತದೆಯಲ್ಲವೇ? ರಾಜ್ಯದಲ್ಲಿ ಪ್ರಯಾಣಿಕರು, ವಿದ್ಯಾರ್ಥಿಗಳೂ ಇರುತ್ತಾರಲ್ಲವೇ? ಎರಡೂವರೆ ವರ್ಷಗಳ ಬಳಿಕ ಈ ರಾಜ್ಯದ ಸಾರಿಗೆ ಇಲಾಖೆ ಪರಿಸ್ಥಿತಿ ಏನಾದೀತು? ಸಾರ್ವಜನಿಕ ಸಾರಿಗೆ ಸ್ಥಿತಿ ಯಾವ ಹಂತಕ್ಕೆ ಬರಬಹುದು ಎಂದು ಆತಂಕ ವ್ಯಕ್ತಪಡಿಸಿದರು.

1.05 ಲಕ್ಷ ಕೋಟಿ ಸಾಲ
ಈ ಸರಕಾರ ಸಂಪೂರ್ಣವಾಗಿ ದಿವಾಳಿಯಾಗಿದೆ. ಒಂದು ಲಕ್ಷದ 5 ಸಾವಿರ ಕೋಟಿ ಸಾಲ ಮಾಡಿ, ಅದರಲ್ಲಿ ಉತ್ಪಾದನೆ ಇಲ್ಲದೆ, ನಿಗಮಗಳಿಗೆ ಹಣ ಕೊಡಲಾಗದೆ ಈ ರಾಜ್ಯ ನಡೆಯುತ್ತಿದೆ. ಸರಕಾರವು ಸಾಲದ ಸುಳಿಯಲ್ಲಿದೆ ಎಂದು ಗಮನ ಸೆಳೆದರು. ಬೊಮ್ಮಾಯಿಯವರ ಸರಕಾರದಲ್ಲಿ ಈ ನಿಗಮಗಳಿಗೆ ಸಕಾಲದಲ್ಲಿ ಭವಿಷ್ಯನಿಧಿ ಮೊತ್ತ ಕೊಡಲಾಗಿತ್ತು ಎಂದು ವಿವರ ನೀಡಿದರು.

ಇದು ಕೊಲೆಗಾರರ ಸರಕಾರ..
ರಾಜ್ಯದ ಕಾಂಗ್ರೆಸ್ ಸರಕಾರದಲ್ಲಿ ಕೊಲೆಗಡುಕರೇ ಹೆಚ್ಚಾಗಿದ್ದಾರೆ. ಇದು ಕೊಲೆಗಾರರ ಸರಕಾರ ಎನ್ನಲು ನೋವಾಗುತ್ತಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಕಲ್ಬುರ್ಗಿಯಲ್ಲಿ ಗುತ್ತಿಗೆದಾರ ಸಚಿನ್ ರೈಲ್ವೆ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ಕುಟುಂಬದ ಜೊತೆ ಬಿಜೆಪಿ ನಿಲ್ಲಲಿದೆ. ಸಚಿವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ; ಈ ಸರಕಾರ ಸಾವಿನ ಭಾಗ್ಯವನ್ನು ಕೊಟ್ಟಿದೆ ಎಂದು ಟೀಕಿಸಿದರು.

ಬಿಜೆಪಿ ಈ ಸಾವಿನ ಸಂಬಂಧ ರಾಜ್ಯಾದ್ಯಂತ ಹೋರಾಟವನ್ನು ಹೋರಾಟ ನಡೆಸಲಿದೆ. ನಾಳೆ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ದೆಹಲಿಯಿಂದ ಹಿಂತಿರುಗಿದ ಬಳಿಕ ಹೋರಾಟದ ರೂಪುರೇಷೆಗಳನ್ನು ಸಿದ್ಧಪಡಿಸುತ್ತೇವೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ರಾಜ್ಯ ವಕ್ತಾರ ಕೆ.ಎಂ.ಅಶೋಕ್ ಗೌಡ, ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಅವರು ಭಾಗವಹಿಸಿದ್ದರು.

BIG NEWS : ಸರಕಾರಿ ಬಸ್ ಪ್ರಯಾಣದರ ಶೇ 15ರಷ್ಟು ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಕೆ.! BIG NEWS: GOVT PROPOSES 15% HIKE IN BUS FARES
Share. Facebook Twitter LinkedIn WhatsApp Email

Related Posts

‘ಮಾಲತೇಶ್ ಅರಸ್ ಹರ್ತಿಕೋಟೆ’ಗೆ ‘ಇಂದಿರಾ ಪ್ರಿಯದರ್ಶಿನಿ ರಾಜ್ಯ ಪರಿಸರ ಪ್ರಶಸ್ತಿ’ ಪ್ರದಾನ

22/12/2025 9:55 PM2 Mins Read

ತಂದೆಯಿಂದಲೇ ಗರ್ಭಿಣಿ ಮಗಳ ಹತ್ಯೆ: ಸಚಿವ ಸಂತೋಷ್ ಲಾಡ್ ಖಂಡನೆ

22/12/2025 9:00 PM1 Min Read

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ?: ಸಿಎಂ ಸಿದ್ಧರಾಮಯ್ಯ ಪ್ರಶ್ನೆ

22/12/2025 8:54 PM1 Min Read
Recent News

7ನೇ ವೇತನ ಆಯೋಗದ ಅಂತ್ಯದ ದಿನಾಂಕ ನಿಗದಿ ; 8ನೇ ವೇತನ ಆಯೋಗದಲ್ಲಿ ‘ಸಂಬಳ’ ಎಷ್ಟು ಹೆಚ್ಚಾಗ್ಬೋದು ಗೊತ್ತಾ.?

22/12/2025 10:20 PM

BREAKING: ದೇಶೀಯ ಮಹಿಳಾ ಕ್ರಿಕೆಟಿಗರು, ಅಧಿಕಾರಿಗಳಿಗೆ ಬಂಪರ್ ಗಿಫ್ಟ್ ಕೊಟ್ಟ BCCI: ಭಾರೀ ವೇತನ ಹೆಚ್ಚಳ

22/12/2025 10:16 PM

BREAKING ; ದೇಶೀಯ ‘ಮಹಿಳಾ ಕ್ರಿಕೆಟ್ ಆಟಗಾರ್ತಿ’ಯರಿಗೆ ‘BCCI’ ಗುಡ್ ನ್ಯೂಸ್ ; ವೇತನದಲ್ಲಿ ಭಾರೀ ಹೆಚ್ಚಳ ಘೋಷಣೆ

22/12/2025 10:16 PM

‘ಮಾಲತೇಶ್ ಅರಸ್ ಹರ್ತಿಕೋಟೆ’ಗೆ ‘ಇಂದಿರಾ ಪ್ರಿಯದರ್ಶಿನಿ ರಾಜ್ಯ ಪರಿಸರ ಪ್ರಶಸ್ತಿ’ ಪ್ರದಾನ

22/12/2025 9:55 PM
State News
KARNATAKA

‘ಮಾಲತೇಶ್ ಅರಸ್ ಹರ್ತಿಕೋಟೆ’ಗೆ ‘ಇಂದಿರಾ ಪ್ರಿಯದರ್ಶಿನಿ ರಾಜ್ಯ ಪರಿಸರ ಪ್ರಶಸ್ತಿ’ ಪ್ರದಾನ

By kannadanewsnow0922/12/2025 9:55 PM KARNATAKA 2 Mins Read

ಚಿತ್ರದುರ್ಗ: ಕರ್ನಾಟಕ ರಾಜ್ಯ ಸರ್ಕಾರದ ಕರ್ನಾಟಕ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಅಂಗವಾಗಿ ನೀಡುವಂತ ಇಂದಿರಾ…

ತಂದೆಯಿಂದಲೇ ಗರ್ಭಿಣಿ ಮಗಳ ಹತ್ಯೆ: ಸಚಿವ ಸಂತೋಷ್ ಲಾಡ್ ಖಂಡನೆ

22/12/2025 9:00 PM

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ?: ಸಿಎಂ ಸಿದ್ಧರಾಮಯ್ಯ ಪ್ರಶ್ನೆ

22/12/2025 8:54 PM

GOOD NEWS : ಶೀಘ್ರವೇ ಫೆಬ್ರವರಿ–ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : CM ಸಿದ್ದರಾಮಯ್ಯ ಘೋಷಣೆ

22/12/2025 8:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.